ನೆಲ್ಯಾಡಿ ಪೇಟೆ: ರಸ್ತೆ ಬದಿಯೇ ಬಸ್‌ ತಂಗುದಾಣ; ಪ್ರಯಾಣಿಕರ ಪರದಾಟ

ಜನ ಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ

Team Udayavani, Mar 4, 2020, 4:26 AM IST

nelyadi-pete

ಕಡಬ: ನೂತನ ಕಡಬ ತಾಲೂಕಿನ ಪ್ರಮುಖ ಪಟ್ಟಣವಾಗಿರುವ ನೆಲ್ಯಾಡಿ ಪೇಟೆಗೆ ಸಂಬಂಧಿಸಿ, ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ಜನಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ. ಇಲ್ಲಿ ಎಲ್ಲ ಸರಕಾರಿ ಬಸ್‌ಗಳು ಪೇಟೆಯಲ್ಲೇ ನಿಲ್ಲುವುದರಿಂದ ಬಸ್ಸು ನಿಲ್ದಾಣ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ಈ ಊರಿಗೆ ಪ್ರತಿದಿನ 80 ಬಸ್ಸುಗಳು ಬಂದು ಹೋಗುತ್ತಿವೆ. ಆದರೆ ಹೆಚ್ಚಿನ ಬಸ್‌ಗಳನ್ನು ಪೇಟೆಯಲ್ಲಿಯೇ ನಿಲ್ಲಿಸುವ ಕಾರಣದಿಂದ ಬಸ್‌ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ಪ್ರಯಾಣಿಕರು ಇತ್ತ ಕಡೆ ತಲೆ ಹಾಕದಿರುವುದರಿಂದ ವ್ಯಾಪಾರ, ವ್ಯವಹಾರಗಳಿಲ್ಲದೆ ಇಲ್ಲಿರುವ ಅಂಗಡಿ, ಉಪಾಹಾರ ಮಂದಿರಗಳೂ ಶಟರ್‌ ಎಳೆದಿವೆ. ಮಧ್ಯಾಹ್ನ ವೇಳೆ ಊಟಕ್ಕಾಗಿ ಬಸ್ಸುಗಳನ್ನು ಪೇಟೆಯಲ್ಲೇ ನಿಲ್ಲಿಸುವುದರಿಂದ ನಿಲ್ದಾಣದಲ್ಲಿದ್ದ ಹೊಟೇಲ್‌ಗ‌ಳಿಗೆ ವ್ಯಾಪಾರವಿಲ್ಲದಂತಾಗಿ ಬಾಗಿಲು ಮುಚ್ಚಿವೆ.

ಮಂಡಲ ಪಂಚಾಯತ್‌ ಕಟ್ಟಡ
2001ರಲ್ಲಿ ಅಂದಿನ ನೆಲ್ಯಾಡಿ ಮಂಡಲ ಪಂಚಾಯತ್‌ ತನ್ನ ಕಚೇರಿಗಾಗಿ ಈ ಕಟ್ಟಡವನ್ನು ನಿರ್ಮಿಸಿತ್ತು. ನಿರ್ಮಾಣವಾದ ಬಳಿಕ ಈ ಕಟ್ಟಡವನ್ನು ಪಂಚಾಯತ್‌ ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಬಸ್‌ ನಿಲ್ದಾಣವನ್ನಾಗಿ ಮಾಡಲು ಹಸ್ತಾಂತರಿಸಿತ್ತು. ಕಟ್ಟಡದ ವಿನ್ಯಾಸದಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಳ್ಳಲಾಯಿತು.

ಪಂಚಾಯತ್‌ಗಾಗಿ ಕಟ್ಟಿದ ಕಟ್ಟಡವೇ ಬಸ್ಸು ನಿಲ್ದಾಣವಾಗಿ ಪರಿವರ್ತನೆಗೊಂಡಿತು. ನೆಲ್ಯಾಡಿ ಪೇಟೆಯ ಸುಸಜ್ಜಿತ ಬಸ್ಸು ನಿಲ್ದಾಣವನ್ನು 2001ರಲ್ಲಿ ಅದು ಪುತ್ತೂರು ಶಾಸಕರಾಗಿದ್ದ ಡಿ.ವಿ. ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ, ರಾಜ್ಯದ ಸಾರಿಗೆ ಸಚಿವರಾಗಿದ್ದ ಸಿ.ಆರ್‌. ಸಗೀರ್‌ ಅಹ್ಮದ್‌ ಉದ್ಘಾಟಿಸಿದ್ದರು. ಜಿಲ್ಲಾ ಉಸ್ತವಾರಿ ಸಚಿವರಾಗಿದ್ದ ರಮಾನಾಥ ರೈ ಮುಖ್ಯ ಅತಿಥಿಯಾಗಿದ್ದರು. ಆರಂಭದ ದಿನಗಳಲ್ಲಿ ಈ ನೂತನ ಬಸ್ಸು ನಿಲ್ದಾಣ ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿತ್ತು. ಕ್ರಮೇಣ ಜನರು ಬಾರದೆ ಖಾಲಿ ಹೊಡೆಯಲಾರಂಭಿಸಿತು. ಇತ್ತೀಚಿನ ದಿನಗಳಲ್ಲಿ ವಿವಿಧೆಡೆಗಳಿಂದ ಸಂಚ ರಿಸುವ ಎಲ್ಲ ಬಸ್ಸುಗಳು ನೆಲ್ಯಾಡಿ ಪೇಟೆಯಲ್ಲಿಯೇ ನಿಲ್ಲು ವುದರಿಂದ ಪ್ರಯಾ ಣಿಕರೂ ರಸ್ತೆ ಬದಿಯಲ್ಲೇ ಬಸ್ಸಿಗೆ ಕಾದು ನಿಲ್ಲಲು ಪ್ರಾರಂಭಿಸಿದರು. ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ನಿರ್ಜನ ಪ್ರದೇಶದಂತಾಗಿದೆ.

ಹೊಸ ಪ್ರಸ್ತಾವನೆಗೆ ತೊಡಕು
ಕೆಎಸ್‌ಆರ್‌ಟಿಸಿ ಸಂಸ್ಥೆ ಇಲ್ಲಿ ಸುಸಜ್ಜಿತ ಹೊಸ ಬಸ್ಸು ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆಯನ್ನು ಹಾಕಿಕೊಂಡಿದೆ. ಆದರೆ ಬಸ್‌ ನಿಲ್ದಾಣದ ಮುಂಭಾಗದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿಯಾಗಲು ನಿಲ್ದಾಣದ ಒಂದಿಷ್ಟು ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿಗಾಗಿ ಬಿಟ್ಟು ಕೊಡಬೇಕಾಗುತ್ತದೆ. ನೆಲ್ಯಾಡಿ ಪೇಟೆಯಲ್ಲಿ ಫ್ಲೈಓವರ್‌ ಹಾದು ಹೋಗಲಿರುವ ಕಾರಣದಿಂದ ಎಷ್ಟು ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೀಡಬೇಕೆಂಬುದನ್ನು ಈಗಲೇ ಅಂದಾಜಿಸುವಂತಿಲ್ಲ.

ಹೀಗಾಗಿ, ನೂತನ ಬಸ್ಸು ನಿಲ್ದಾಣದ ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ. ಅಲ್ಲಿಯವರೆಗೂ ಇದೇ ಹಳೆಯ ಕಟ್ಟಡದಲ್ಲೇ ಬಸ್ಸು ನಿಲ್ದಾಣ ಮುಂದುವರಿಯಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಗದೆ ಹೊಸ ಬಸ್ಸು ನಿಲ್ದಾಣವಾಗದು.

ನವೀಕರಣ ಕಾಮಗಾರಿ ಅಗತ್ಯ
ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರು ವಿರಳವಾಗಿರುವುದರಿಂದ ರಾತ್ರಿ ಹೊತ್ತು ಕಾವಲುಗಾರರ ವ್ಯವಸ್ಥೆಯೂ ಇಲ್ಲದೇ ಇಲ್ಲಿ ಅನ್ಯ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಸ್ಥಳೀಯರು ಮುಜುಗರ ಅನುಭವಿಸುವಂತಾಗಿದೆ. ಜನರ ತೆರಿಗೆಯ ಹಣದಿಂದ ನಿರ್ಮಿಸಲಾಗಿರುವ ಈ ಬಸ್ಸು ನಿಲ್ದಾಣ ಕಟ್ಟಡ ಬಣ್ಣ ಕಳೆದುಕೊಂಡು ಕಿಟಕಿ ಗಾಜುಗಳು ಒಡೆದುಹೋಗಿ, ಗೋಡೆಯಲ್ಲಿ ಅಲ್ಲಿಲ್ಲಿ ಪಾಚಿಕಟ್ಟಿ ಹಾಳು ಕೊಂಪೆಯಂತೆ ಕಾಣುತ್ತಿದೆ. ಇಲ್ಲಿ ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಸಹಿತ ಒಂದಿಷ್ಟು ನವೀಕರಣ ಕಾಮಗಾರಿಗಳನ್ನು ನಡೆಸಿ ಪ್ರಯಾಣಿಕರಿಗೆ ಯೋಗ್ಯವಾಗುವಂತೆ ಮಾಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಒಂದು ಎಕ್ರೆ ಜಾಗ
ನೆಲ್ಯಾಡಿ ಬಸ್ಸು ನಿಲ್ದಾಣಕ್ಕೆ 1 ಎಕ್ರೆ ಜಾಗವಿದೆ. ಬಸ್ಸುಗಳು ತಂಗಲು ಸಾಕಷ್ಟು ಸ್ಥಳಾವಕಾಶವೂ ಇದೆ. ಬಸ್ಸು ನಿಲ್ದಾಣಕ್ಕೆ ಹೋಗುವ ರಸ್ತೆಯ ಡಾಮರು ಕಿತ್ತು ಹೋಗಿ ಸಂಚಾರಕ್ಕೆ ತೊಂದರೆಯಾಗುವಂತಿದೆ. ಸರಕಾರಿ ಬಸ್ಸುಗಳು ಇಲ್ಲಿಗೆ ಬರುವಂತೆ ಮಾಡುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿ ಸಂಸ್ಥೆ ಎರಡು ವರ್ಷಗಳಿಂದ ಈ ಬಸ್‌ ನಿಲ್ದಾಣದಲ್ಲಿ ಸಂಚಾರ ನಿಯಂತ್ರಕರನ್ನು ನಿಯೋಜಿಸಿದೆ. ಆದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

 ದುರಸ್ತಿಗೆ ಯೋಜನೆ
ಈಗಿರುವ ನೆಲ್ಯಾಡಿ ಬಸ್ಸು ನಿಲ್ದಾಣಕ್ಕೆ ಐರಾವತ ಬಸ್ಸುಗಳನ್ನು ಹೊರತುಪಡಿಸಿ ಎಲ್ಲ ಸರಕಾರಿ ಬಸ್ಸುಗಳು ಆಗಮಿಸುತ್ತವೆ. ವಿದ್ಯಾರ್ಥಿಗಳೂ ಇಲ್ಲಿಗೆ ಬಂದು ಬಸ್ಸೇರುತ್ತಾರೆ. ಈಗಿರುವ ಬಸ್ಸು ನಿಲ್ದಾಣವನ್ನು ಕೆಡವಿ ಸುಸಜ್ಜಿತ ಹೊಸ ಬಸ್ಸು ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ. ಆದರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಅನಿಶ್ಚಿತತೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಅಲ್ಲಿಯವರೆಗೆ ಈಗಿರುವ ಬಸ್ಸು ನಿಲ್ದಾಣವನ್ನೇ ದುರಸ್ತಿಗೊಳಿಸಲು ಯೋಜಿಸಲಾಗುವುದು.
– ಶರತ್‌, ಎಇಇ, ಕೆಎಸ್‌ಆರ್‌ಟಿಸಿ, ಪುತ್ತೂರು

ಅಗತ್ಯ ವ್ಯವಸ್ಥೆ
ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡುವು ದರೊಂದಿಗೆ ಎಲ್ಲ ಸರಕಾರಿ ಬಸ್ಸುಗಳು ಬಸ್ಸು ನಿಲ್ದಾಣದಲ್ಲಿಯೇ ಜನರನ್ನು ಹತ್ತಿಸುವುದು ಮತ್ತು ಇಳಿಸು ವಂತಾಗಬೇಕು. ಈ ಧರ್ಮಸ್ಥಳ-ಸುಬ್ರಹ್ಮಣ್ಯ ನಡುವೆ ಸಂಚರಿಸುವ ಬಸ್‌ ಪೆರಿಯಶಾಂತಿ ಮೂಲಕ ಹೋಗುತ್ತಿದ್ದು, ಅದೂ ಇಲ್ಲಿಗೆ ಬಂದು ಹೋಗುವಂತಾದರೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದತ್ತ ಪ್ರಯಾಣಿಸುವವರಿಗೆ ಅನುಕೂಲವಾಗುತ್ತದೆ, ಈ ನಿಲ್ದಾಣವೂ ಅಭಿವೃದ್ಧಿಯಾಗಬಹುದು. ಆಗ ತನ್ನಿಂತಾನೇ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತದೆ. ಅಲ್ಲಿ ಮತ್ತೆ ಅಂಗಡಿ, ಹೊಟೇಲ್‌ ತೆರೆದುಕೊಳ್ಳಲು ಸಹಕಾರಿ ಯಾಗುತ್ತದೆ.
 -ಇಬ್ರಾಹಿಂ ಎಂ.ಕೆ., ಅಧ್ಯಕ್ಷ, ಕೌಕ್ರಾಡಿ ಗ್ರಾ.ಪಂ.

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.