ನಾಳೆ ಭಾರತ-ಇಂಗ್ಲೆಂಡ್‌ ಸೆಮಿ ಕಾದಾಟ


Team Udayavani, Mar 4, 2020, 7:15 AM IST

india-england-semi-final

ಸಿಡ್ನಿ: ವನಿತಾ ಟಿ20 ವಿಶ್ವಕಪ್‌ ಸೆಮಿಫೈನಲ್‌ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಅಜೇಯ ಭಾರತ, ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ, ಇಂಗ್ಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಹಂತಕ್ಕೇರಿವೆ. ಗುರುವಾರ ನಡೆಯುವ ಸೆಮಿಫೈನಲ್‌ ಹೋರಾಟದಲ್ಲಿ ಭಾರತವು ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದ್ದರೆ ಆಸ್ಟ್ರೇಲಿಯವು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ ನಡೆಸಲಿದೆ.

ದ. ಆಫ್ರಿಕಾಕ್ಕೆ ಮಳೆಯ ಲಾಭ
ಮಂಗಳವಾರ ನಡೆದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ ನಡುವಣ ಲೀಗ್‌ ಪಂದ್ಯ ಭಾರೀ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿತ್ತು. ಇದರಿಂದಾಗಿ ಇತ್ತಂಡಗಳಿಗೂ ಒಂದೊಂದು ಅಂಕ ನೀಡಲಾಯಿತು. ಈ ಒಂದು ಅಂಕದ ಲಾಭವೆತ್ತಿದ ದಕ್ಷಿಣ ಆಫ್ರಿಕಾ “ಬಿ’ ಗುಂಪಿನ ಅಗ್ರಸ್ಥಾನ ಅಲಂಕರಿಸಿದರೆ ಇಂಗ್ಲೆಂಡ್‌ ದ್ವಿತೀಯ ಸ್ಥಾನಕ್ಕೆ ಕುಸಿಯಿತು. ಇದರಿಂದಾಗಿ ಇಂಗ್ಲೆಂಡ್‌ “ಎ’ ವಿಭಾಗದ ಅಗ್ರಸ್ಥಾನಿ ಅಜೇಯ ಭಾರತದ ವಿರುದ್ಧ ಸೆಮಿಫೈನಲ್‌ನಲ್ಲಿ ಆಡಲಿದೆ.

ಫೈನಲ್‌ ನಿರೀಕ್ಷೆಯಲ್ಲಿ ಭಾರತ
ಭಾರತ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶ ಪಡೆದಿಲ್ಲ. ಈ ಸಲ ಪ್ರಶಸ್ತಿ ಗೆಲ್ಲುವ ಸುವರ್ಣಾವಕಾಶ ಭಾರತಕ್ಕೆ ಲಭಿಸಿದೆ. ಲೀಗ್‌ ಹಂತದ ಎಲ್ಲ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ಚಾಂಪಿಯನ್‌ ಎನಿಸಿಕೊಳ್ಳುವ ಉತ್ಸಾಹದಲ್ಲಿದೆ. ಅದಕ್ಕಾಗಿ ಇನ್ನೆರಡು ಪಂದ್ಯ ಗೆದ್ದರೆ ಸಾಕಾಗುತ್ತದೆ. ಆದರೆ ಮುಂದಿನೆರಡು ಪಂದ್ಯ ಅಷ್ಟು ಸುಲಭದ್ದಲ್ಲ.

ಲೀಗ್‌ನಲ್ಲಿ ಮೂರು ಗೆಲುವು ಮತ್ತು ಒಂದು ಸೋಲು ಕಂಡಿರುವ ಇಂಗ್ಲೆಂಡ್‌ ತಂಡವು ಗುರುವಾರ ಭಾರತಕ್ಕೆ ಪ್ರಬಲ ಸವಾಲು ನೀಡುವ ಸಾಧ್ಯತೆಯಿದೆ. ಇದು 2018ರ ವಿಶ್ವಕಪ್‌ನ ಪುನರಾವರ್ತನೆಯಾಗಿದೆ. 2018ರಲ್ಲಿ ಭಾರತಕ್ಕೆ ಇಂಗ್ಲೆಂಡ್‌ ಸೆಮಿಫೈನಲ್‌ನಲ್ಲಿ ಎದುರಾಗಿತ್ತು. ಇಲ್ಲಿ ಇಂಗ್ಲೆಂಡ್‌ ಜಯಭೇರಿ ಮೊಳಗಿಸಿ ಫೈನಲ್‌ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಆಸ್ಟ್ರೇಲಿಯಕ್ಕೆ ಶರಣಾಗಿತ್ತು.

ಲೀಗ್‌ನಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಭಾರತವು ಸೆಮಿಫೈನಲ್‌ನಲ್ಲೂ ಭರ್ಜರಿ ಆಟ ಪ್ರದರ್ಶಿಸುವ ಸಾಧ್ಯತೆಯಿದೆ. ಬ್ಯಾಟಿಂಗ್‌ನಲ್ಲಿ ಮಿಂಚಿದರೆ ಭಾರತ ಮೇಲುಗೈ ಸಾಧಿಸಬಹುದು. ಗೆದ್ದರೆ ಫೈನಲ್‌ನಲ್ಲಿ ಮತ್ತೆ ಆಸ್ಟ್ರೇಲಿಯ ಎದುರಾಗುವ ಸಾಧ್ಯತೆಯಿದೆ.

ಗುರುವಾರ ನಡೆಯುವ ಇನ್ನೊಂದು ಸೆಮಿಫೈನಲ್‌ ಪಂದ್ಯವು ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ. ಈ ಪಂದ್ಯ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ.

ಸೆಮಿಗೆ ಮಳೆ ಬಂದರೆ…
ಸಿಡ್ನಿ: ವನಿತಾ ಟಿ20 ವಿಶ್ವಕಪ್‌ನ ಎರಡು ಸೆಮಿಫೈನಲ್‌ ಪಂದ್ಯಗಳು ಸಿಡ್ನಿಯಲ್ಲಿ ಗುರುವಾರ ನಡೆಯಲಿವೆ. ಸಿಡ್ನಿಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ಇಂಡೀಸ್‌ ನಡುವಣ ಪಂದ್ಯ ಯಾವುದೇ ಎಸೆತ ಕಾಣದೆ ರದ್ದಾಗಿತ್ತು. ಸಿಡ್ನಿಯಲ್ಲಿ ಇನ್ನೂ ಕೆಲವು ದಿನ ಮಳೆ ಬರುವ ಸಾಧ್ಯತೆಯಿದೆ.

ಗುರುವಾರ ಎರಡೂ ಸೆಮಿಫೈನಲ್‌ ಪಂದ್ಯ ನಡೆಯಲಿದೆ. ಒಂದು ವೇಳೆ ಪಂದ್ಯಕ್ಕೆ ಮಳೆ ಬಂದರೆ ಏನಾಗಬಹುದು. ಐಸಿಸಿ ನಿಯಮದ ಪ್ರಕಾರ ಪ್ರತಿಯೊಂದು ತಂಡ ಕಡಿಮೆಪಕ್ಷ 10 ಓವರ್‌ ಆಡಬೇಕಾಗುತ್ತದೆ. ಒಂದು ವೇಳೆ 10 ಓವರ್‌ ಆಡಲು ಸಾಧ್ಯವಾಗದಿದ್ದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ.

ಸೆಮಿಫೈನಲ್‌ ಪಂದ್ಯಗಳಿಗೆ ಮೀಸಲು ದಿನ ಇಲ್ಲದ ಕಾರಣ ಒಂದು ವೇಳೆ ಪಂದ್ಯ ರದ್ದುಗೊಂಡರೆ ಲೀಗ್‌ ಹಂತದಲ್ಲಿ ಅಗ್ರಸ್ಥಾನ ಪಡೆದ ಆಧಾರದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಫೈನಲಿಗೇರಲಿವೆ. ಫೈನಲ್‌ ಪಂದ್ಯಕ್ಕೆ ಮೀಸಲು ದಿನ ಇರಲಿದೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.