ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ
Team Udayavani, Mar 4, 2020, 3:05 AM IST
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2018ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. “ಉದಯವಾಣಿ’ ಮಂಗಳೂರು ಆವೃತ್ತಿಯ ಸಹಾಯಕ ಸಂಪಾದಕ ಮನೋಹರ್ ಪ್ರಸಾದ್ ಅವರು ಡಿ.ವಿ.ಜಿ.ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖಾದ್ರಿ ಶಾಮಣ್ಣ (ಸುದ್ದಿ ವಿಮರ್ಶೆ) ಪ್ರಶಸ್ತಿಗೆ “ಉದಯವಾಣಿ’ಯ ಉಪ ಮುಖ್ಯ ವರದಿಗಾರ ಎಸ್.ಲಕ್ಷ್ಮೀನಾರಾಯಣ (ಬೆಂಗಳೂರು), ಹಾಗೆಯೇ ವರದಿಗಾರ ಅರುಣ್ಕುಮಾರ್ (ಬೈಂದೂರು) ಅವರು ಅತ್ಯುತ್ತಮ ಗ್ರಾಮಾಂತರ ವರದಿಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಾರ್ಚ್ 7 ಮತ್ತು 8 ರಂದು ಮಂಗಳೂರಿನ ಕುದ್ಲುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಟೀಲ್ ಪುಟ್ಟಪ್ಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ತಿಮ್ಮಪ್ಪ ಭಟ್, ಡಾ.ಎಂ.ಎಂ.ಕಲಬುರಗಿ ಪ್ರಶಸ್ತಿಗೆ ಜಿ.ಎನ್.ಮೋಹನ್, ಗೊಮ್ಮಟ ಮಾಧ್ಯಮ ಪ್ರಶಸ್ತಿಗೆ ಪದ್ಮರಾಜ ದಂಡಾವತಿ, ಕೆ.ಎನ್.ನೆಟ್ಟಕಲ್ಲಪ್ಪ ಪ್ರಶಸ್ತಿಗೆ ಮಂಗಳೂರಿನ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಭಾಜರಾಗಿದ್ದಾರೆ.
ರಾಜಶೇಖರ್ ಅಬ್ಬೂರು ಅವರಿಗೆ ಎಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ, ಸಿ. ರುದ್ರಪ್ಪ ಅವರಿಗೆ ಎಂ. ನಾಗೇಂದ್ರ ರಾವ್ ಪ್ರಶಸ್ತಿ, ಮುರಳೀಧರ ಖಜಾನೆ ಅವರಿಗೆ ಅತ್ಯುತ್ತಮ ಸಿನಿಮಾ ಪತ್ರಕರ್ತ ಪ್ರಶಸ್ತಿ ಸೇರಿದಂತೆ ಹಲವರಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳು ದೊರೆತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್