ಶ್ರವಣ ದೋಷಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಅಗತ್ಯ:ಡಾ| ಮಂಜುನಾಥ್
ಜೋರಾದ ಶಬ್ದದಿಂದ ಮಕ್ಕಳನ್ನು ದೂರವಿಡಲು ಕರೆ
Team Udayavani, Mar 4, 2020, 7:42 PM IST
ಶಿವಮೊಗ್ಗ: ಮಕ್ಕಳ ಶ್ರವಣ ಸಾಮರ್ಥ್ಯದ ಮೇಲೆ ನಿರಂತರ ನಿಗಾ ಇರಿಸಿ, ಯಾವುದೇ ದೋಷಗಳು ಕಂಡು ಬಂದರೆ ತಕ್ಷಣ ವೈದ್ಯರ ನೆರವು ಪಡೆಯುವಂತೆ ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ| ಮಂಜುನಾಥ್ ನಾಗಲೀಕರ್ ಹೇಳಿದರು.
ನಗರದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೋಷಕರು ಮಕ್ಕಳಿಗೆ ಕಿವಿಯೊಳಗೆ ಯಾವುದೇ ವಸ್ತುವನ್ನು ಹಾಕಿಕೊಳ್ಳಬಾರದೆಂದು ತಿಳಿಸಿ ಹೇಳಬೇಕು. ನಿಮ್ಮ ಮಗುವಿಗೆ ಕಿವಿ ನೋವು ಅಥವಾ ಕಿವಿ ಸೋರುವುದು ಅಥವಾ ಕಿವಿ ಮುಚ್ಚಿದೆ ಎಂದು ಕಂಡು ಬಂದರೆ ತಕ್ಷಣವೇ ನಿಮ್ಮ ಮಗುವನ್ನು ವೈದ್ಯರ ಬಳಿ ಪರೀಕ್ಷಿಸಿ, ನಿಮ್ಮ ಮಕ್ಕಳನ್ನು ಕೊಳಕು ನೀರಿನಲ್ಲಿ ಈಜಲು ಬಿಡಬೇಡಿ, ಮಗುವಿನ ಕಿವಿಯ ಮೇಲೆ ಹೊಡೆಯಬೇಡಿ. ಜೋರಾದ ಶಬ್ದದಿಂದ ಮಗುವನ್ನು ದೂರವಿಡಿ. ಸುರಕ್ಷಿತವಾದ ಆಡಿಯೋ ಡಿವೈಸ್ ಮೂಲಕ ಕೇಳುವಂತೆ ಮಕ್ಕಳಿಗೆ ತಿಳಿ ಹೇಳಬೇಕು ಎಂದು ತಿಳಿಸಿದರು.
ಇಎನ್ಟಿ ತಜ್ಞ ಡಾ| ಗಂಗಾಧರ್ ಮಾತನಾಡಿ, ಉತ್ತಮ ಜೀವನ ನಿರ್ವಹಣೆಗೆ ಕಣ್ಣಿನ ಆರೋಗ್ಯದಷ್ಟೇ ಕಿವಿಯ ಆರೋಗ್ಯವೂ ಮುಖ್ಯವಾಗುತ್ತದೆ. ಈ ಹಿನ್ನಲೆಯಲ್ಲಿ ಹೆಚ್ಚು ಜಾಗೃತಿ ವಹಿಸಿ ಶ್ರವಣ ದೋಷದ ಸಮಸ್ಯೆಗೆ ಆಸ್ಪದ ನೀಡದಂತೆ ಸಮಾಜ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಶೇಖರ್ ಮಾತನಾಡಿ, ಶ್ರಮಣ ದೋಷದ ಲಕ್ಷಣಗಳು ಶೀಘ್ರ ಪತ್ತೆಯಾದರೆ ಚಿಕಿತ್ಸೆ ಸುಲಭ ಸಾಧ್ಯ. ಒಂದು ವೇಳೆ ಸಂಪೂರ್ಣ ಸರಿಪಡಿಸಲಾಗದಿದ್ದರೂ ದುಷ್ಪರಿಣಾಮ ಕಡಿಮೆಗೊಳಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಕಿವಿಯ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ ಸಮಸ್ಯೆ ಎದುರಾಗುವ ಅನುಮಾನವಿದ್ದಲ್ಲಿ ಪರೀಕ್ಷಿಸಿಕೊಳ್ಳಬೇಕು. ಹುಟ್ಟುವ ಮಗುವಿನಿಂದ ಹಿಡಿದು ವೃದ್ಧರವರೆಗೂ ಕಿವುಡುತನ ಯಾವುದೇ ವಯಸ್ಸಿನ ಅಂತರವಿಲ್ಲದೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು.
ಜಾಥಾದಲ್ಲಿ ಡಾ| ಶ್ರೀಧರ್, ಪ್ರತಿಮಾ ಡಾಕಪ್ಪ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇಎನ್ಟಿ ಸಿಬ್ಬಂದಿ ಹಾಗೂ ಸಿಮ್ಸ್ ವಿದ್ಯಾರ್ಥಿಗಳು ಇದ್ದರು. ಜಾಥಾ ಮೆಗ್ಗಾನ್ ಆಸ್ಪತ್ರೆಯ ಆವರಣದಿಂದ ಗೋಪಿ ಸರ್ಕಲ್ ಮಾರ್ಗ ಮೂಲಕ ಐ.ಎಂ.ಎ. ಆವರಣದಲ್ಲಿ ಸಂಪನ್ನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು