ದೇವೇಂದ್ರ ಫಡ್ನವೀಸ್ಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ
Team Udayavani, Mar 4, 2020, 7:19 PM IST
ಹೊಸದಿಲ್ಲಿ: 2014ರ ಚುನಾವಣೆಯಲ್ಲಿ ತಪ್ಪು ಅಫಿದವಿತ್ ನೀಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸಬೇಕು ಎಂದು ನೀಡಿದ್ದ ತೀರ್ಪನ್ನು ಮರುಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇದರಿಂದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ಗೆ ಹಿನ್ನಡೆಯಾಗಿದೆ. ನ್ಯಾ| ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಆದೇಶ ನೀಡಿ, ಮರುಪರಿಶೀಲನೆ ಮಾಡುವ ಯಾವುದೇ ಅಂಶವೂ ಇಲ್ಲ ಎಂದು ಅಭಿಪ್ರಾಯಪಟ್ಟಿದೆ.