ಬಿಟ್‌ ಕಾಯಿನ್‌ಗೆ ಸುಪ್ರೀಂಕೋರ್ಟ್‌ ಹಸಿರು ನಿಶಾನೆ


Team Udayavani, Mar 5, 2020, 6:45 AM IST

ಬಿಟ್‌ ಕಾಯಿನ್‌ಗೆ ಸುಪ್ರೀಂಕೋರ್ಟ್‌ ಹಸಿರು ನಿಶಾನೆ

ಹೊಸದಿಲ್ಲಿ: ಬಿಟ್‌ ಕಾಯಿನ್‌ ಸಹಿತ ವರ್ಚುವಲ್‌ ಕರೆನ್ಸಿ ವಹಿವಾಟುಗಳ ಮೇಲೆ ಭಾರತೀಯ ರಿಸರ್ವ್‌ ಬ್ಯಾಂಕ್‌ 2018ರಲ್ಲಿ ಹೇರಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ ಬುಧವಾರ ರದ್ದುಗೊಳಿಸಿದೆ. ಈ ಮೂಲಕ ಅವುಗಳ ಬಳಕೆಗೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಹಸಿರು ನಿಶಾನೆ ಸಿಕ್ಕಿದಂತಾಗಿದೆ.

ನ್ಯಾ| ಆರ್‌.ಎಸ್‌. ನಾರಿಮನ್‌ ನೇತೃತ್ವದ ನ್ಯಾಯಪೀಠ ಆರ್‌ಬಿಐ ಸುತ್ತೋಲೆಯಲ್ಲಿ ನೀಡಿದ್ದ ಆದೇಶ ಕೇವಲ ಆಂಶಿಕವಾಗಿದೆ. ಹೀಗಾಗಿ ಅದನ್ನು ಒಪ್ಪಲಾಗದು ಎಂದಿತು. ಆರ್‌ಬಿಐ ವರ್ಚುವಲ್‌ ಕರೆನ್ಸಿ ಮೇಲೆ ನಿಷೇಧ ಹೇರಿಲ್ಲ ಎಂದು ಹೇಳುತ್ತಾ ಬಂದಿದೆ ಮತ್ತು ಕೇಂದ್ರ ಸರಕಾರ ಕೂಡ ಹಲವು ಸಮಿತಿಗಳನ್ನು ರಚಿಸಿ ಅವುಗಳ ಶಿಫಾರಸಿನ ಆಧಾರದಲ್ಲಿ ಅದರಲ್ಲಿ ಎರಡು ಕರಡು ಮಸೂದೆಗಳು ಸೇರಿ ಈ ಕ್ಷೇತ್ರದ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲೂ ವಿಫ‌ಲವಾಗಿದೆ. ಹೀಗಾಗಿ ನ್ಯಾಯಪೀಠ ಆಂಶಿಕವಾಗಿರುವ ನಿಯಮದ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು 180 ಪುಟಗಳ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

2018ರಲ್ಲಿ ಹೊರಡಿಸಲಾಗಿದ್ದ ಸುತ್ತೋಲೆ ಪ್ರಶ್ನೆ ಮಾಡಿ ಇಂಟರ್‌ನೆಟ್‌ ಆ್ಯಂಡ್‌ ಮೊಬೈಲ್‌ ಅಸೋಸಿಯೇಶನ್‌ ಆಫ್ ಇಂಡಿಯಾ (ಐಎಂಎಐ) ಮೇಲ್ಮನವಿ ಸಲ್ಲಿಸಿತ್ತು.

ತೀರ್ಪಿನಿಂದ ಆಗುವ ಪರಿಣಾಮಗಳೇನು?
- ಸಮಾನ ಅವಕಾಶ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಂದೇಶ ರವಾನೆಯಾಗಿದೆ.

- 2018ರಲ್ಲಿ ಆರ್‌ಬಿಐ ನಿರ್ಧಾರದಿಂದ ಹೊಸ ತನ ಮತ್ತು ನಾವೀನ್ಯ ರೀತಿಯ ಕೈಗಾರಿಕೆಯ ಮೇಲೆ ನಿಬಂಧನೆ ಹೇರಿದಂತೆ ಆಗಿತ್ತು. ಅದಕ್ಕೆ ಸರಿಯಾದ ಸಮಾನ ಅವಕಾಶ ಸಿಕ್ಕಿರಲಿಲ್ಲ.

- ವ್ಯವಸ್ಥೆಯ ನಿಯಂತ್ರಕರು (ಆರ್‌ಬಿಐ) ಹೊಸ ವ್ಯವಸ್ಥೆಗಳನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಲು ಅವಕಾಶ ಮಾಡಬೇಕು, ಯಾವ ರೀತಿ ಅವುಗಳನ್ನು ನಿಯಂತ್ರಿಸಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.

- ನಿಯಂತ್ರಣ ಎನ್ನುವುದು ಒಂದು ಸಂಸ್ಥೆಯ ಪರಮಾಧಿಕಾರವಲ್ಲ; ಅದು ಕರ್ತವ್ಯ. ಸದ್ಯ ಭಾರತದಲ್ಲಿ ಒಂದೇ ನಿಯಂತ್ರಣ ವ್ಯವಸ್ಥೆ ಇದೆ. ಅದಕ್ಕೆ ಹೊಸ ವ್ಯವಸ್ಥೆ ಬೆಳವಣಿಗೆ ಸಾಧಿಸಬಾರದು ಎಂಬಂಥ ನಿಯಮ ತರುವಂತಾಗ ಬಾರದು. ನಿಯಂತ್ರಣಕ್ಕೆ ಸಮಸ್ಯೆ ಎಂಬ ನೆಪಕ್ಕಾಗಿ ಹೊಸ ವ್ಯವಸ್ಥೆ ಅಭಿವೃದ್ಧಿಗೆ ಮುಳ್ಳಾಗಬಾರದು.

ಆರ್‌ಬಿಐ ಸುತ್ತೋಲೆಯಲ್ಲಿ ಏನಿತ್ತು?
– ಆರ್‌ಬಿಐ ವರ್ಚುವಲ್‌ ಕರೆನ್ಸಿ (ವಿಸಿ) ಮೂಲಕ ವಹಿವಾಟು ನಡೆಸುವುದಿಲ್ಲ. ಇದರ ಜತೆಗೆ ಇತರ ಸಂಸ್ಥೆಗಳು, ವ್ಯಕ್ತಿಗಳೂ ಕೂಡ ಅದರ ಮೂಲಕ ವಹಿವಾಟು, ಸೇವೆ ನೀಡುವ ಅಗತ್ಯವಿಲ್ಲ.

– ಅದರಲ್ಲಿ ಖಾತೆಗಳ ನಿರ್ವಹಣೆ, ನೋಂದಣಿ, ಟ್ರೇಡಿಂಗ್‌, ವ್ಯವಹಾರ ಇತ್ಯರ್ಥಪಡಿಸುವುದು, ವರ್ಚುವಲ್‌ ಟೋಕನ್‌ಗಳ ಆಧಾರದಲ್ಲಿ ಸಾಲ ನೀಡಿಕೆ, ಟೋಕನ್‌ಗಳನ್ನು ಭದ್ರತೆಯಾಗಿ ಪಡೆದುಕೊಳ್ಳುವುದು, ಖಾತೆಗಳನ್ನು ತೆರೆಯುವುದು ಬೇಡ.

– ಸಂಸ್ಥೆಯ ನಿಯಂತ್ರಣಕ್ಕೆ ಒಳಪಟ್ಟ ಸಂಸ್ಥೆ ಗಳೆಲ್ಲವೂ ಮೂರು ತಿಂಗಳ ಒಳಗಾಗಿ ವಿ.ಸಿ. ವ್ಯವಹಾರದಿಂದ ದೂರ ಸರಿಯಬೇಕು.

ಕ್ರಿಪ್ಟೋಕರೆನ್ಸಿ ಎಂದರೇನು?
– ಅತ್ಯಂತ ಸರಳ ಭಾಷೆಯಲ್ಲಿ ವಿವರಿಸುವುದಿದ್ದರೆ ಡಿಜಿಟಲ್‌ ಕರೆನ್ಸಿ. ಇಂಟರ್‌ನೆಟ್‌ ಮಾಧ್ಯಮದ ಮೂಲಕ ಅದನ್ನು ಬಳಕೆ ಮಾಡಲಾಗುತ್ತದೆ. ಅದನ್ನು ವಿನಿಮಯದ ಮಾಧ್ಯಮವಾಗಿ ಉಪಯೋಗಿಸುತ್ತಾರೆ.

– ಕಾನೂನಾತ್ಮಕವಾಗಿ ಸದ್ಯ ಅದಕ್ಕೆ ಮಾನ್ಯತೆ ಇಲ್ಲ. ಅಂದರೆ ಭಾರತದ ಮಟ್ಟಿಗೆ ಹೇಳು ವು ದಾದರೆ, ಆರ್‌ಬಿಐ ಮತ್ತು ಇತರ ಸರಕಾರಿ ಸಂಸ್ಥೆಗಳಿಂದ ಮಾನ್ಯತೆ ಇಲ್ಲ.

– ಅದನ್ನು ಕ್ರಿಪ್ಟೋಗ್ರಫಿ (Cryptography) ಮೂಲಕ ರಕ್ಷಿಸಲಾಗುತ್ತದೆ. ಕ್ರಿಪ್ಟೋಗ್ರಫಿ ಎಂದರೆ ಸಂಕೇತಗಳ ಮೂಲಕ ಮಾಹಿತಿ ಮತ್ತು ವ್ಯವಹಾರಗಳ ಮಾಹಿತಿಯನ್ನು ರಕ್ಷಿಸುವುದು. ಹೀಗಾಗಿ ಕ್ರಿಪ್ಟ್’ (Crypt) ಎಂದರೆ “ಅಡಗಿಸಿದ’, “ಗ್ರಫಿ’ (graphy) ಎಂದರೆ “ಬರೆಯುವುದು’ ಎಂಬ ಅರ್ಥ.

ಬಿಟ್‌ ಕಾಯಿನ್‌ ದರ
ಒಂದು ಬಿಟ್‌ ಕಾಯಿನ್‌ ಎಂದರೆ 6,42,656 ರೂ.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.