ಲೋಕಸಭೆಯಲ್ಲಿ ಅನುಚಿತ ವರ್ತನೆ ಏಳು ಜನ ಕಾಂಗ್ರೆಸ್ ಸಂಸದರ ಅಮಾನತು
Team Udayavani, Mar 5, 2020, 6:49 PM IST
ನವದೆಹಲಿ: ಸದನ ಕಲಾಪ ನಿಯಮಗಳಿಗೆ ವ್ಯತಿರಿಕ್ತವಾಗಿ ವರ್ತಿಸಿದ ಕಾರಣಕ್ಕಾಗಿ ಏಳು ಜನ ಕಾಂಗ್ರೆಸ್ ಸಂಸದರನ್ನು ಬಜೆಟ್ ಅಧಿವೇಶನದ ಇನ್ನುಳಿದ ಅವಧಿಯವರೆಗೆ ಲೋಕಸಭಾಧ್ಯಕ್ಷರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇತ್ತಿಚೆಗೆ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ವಿಷಯಕ್ಕೆ ಸಂಬಂಧಿಸಿ ಲೋಕಸಭೆಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಸಂದರ್ಭದಲ್ಲಿ ನದನದ ನಿಯಮಗಳನ್ನು ಮೀರಿ ಗದ್ದಲ ನಡೆಸಿದ ಆರೋಪದಲ್ಲಿ ಇವರನ್ನು ಸದನ ಕಲಾಪಗಳಿಂದ ಅಮಾನತುಗೊಳಿಸಲಾಗಿದೆ.
ಈ ಏಳು ಜನ ಕಾಂಗ್ರೆಸ್ ಸದಸ್ಯರ ವರ್ತನೆಯನ್ನು ಪರಿಶೀಲಿಸಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸುವ ಸರಕಾರದ ಪ್ರಸ್ತಾವನೆಗೂ ಇದೇ ಸಂದರ್ಭದಲ್ಲಿ ಸ್ಪೀಕರ್ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಸಭಾಧ್ಯಕ್ಷರ ಮೇಜಿನಿಂದ ಕಾಗದ ಪತ್ರಗಳನ್ನು ಕಸಿದುಕೊಳ್ಳುವುದು ಆ ಸ್ಥಾನಕ್ಕೆ ಅಗೌರವ ಸಲ್ಲಿಸಿದಂತೆಯೇ ಸರಿ. ಸಭಾಧ್ಯಕ್ಷರ ಮೇಜಿನಿಂದ ಕಾಗದ ಪತ್ರಗಳನ್ನು ಕಸಿದುಕೊಂಡವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.
ಗೌರವ್ ಗೊಗೊಯ್, ಟಿ.ಎನ್. ಪ್ರತಾಪನ್, ಡೀನ್ ಕುರಿಯಕೋಸ್, ಬೆನ್ನಿ ಬೆಹನನ್ ಮಣಿಕ್ಕಮ್ ಟಾಗೋರ್, ರಾಜ್ ಮೋಹನ್ ಉನ್ನಿತ್ತನ್ ಮತ್ತು ಗುರ್ಜೀತ್ ಸಿಂಗ್ ಅವರು ಸದನದಿಂದ ಇಂದು ಅಮಾನತುಗೊಂಡಿರುವ ಕಾಂಗ್ರೆಸ್ ಸಂಸದರಾಗಿದ್ದಾರೆ.
ಈ ಸಂಸದರು ಮಾರ್ಚ್ 2ರಂದು ಪ್ರಾರಂಭಗೊಂಢ ಬಜೆಟ್ ನ ದ್ವಿತಿಯಾರ್ಧದ ಅಧಿವೇಶನ ಮುಕ್ತಾಯಗೊಳ್ಳುವ ಎಪ್ರಿಲ್ 3ರವರೆಗೆ ಅಮಾನತಿನಲ್ಲಿರುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇವರು ಸದನ ಕಲಾಪಗಳಲ್ಲಿ ಭಾಗವಹಿಸುವಂತಿರುವುದಿಲ್ಲ.
ಸಭಾಧ್ಯಕ್ಷರ ಈ ಕ್ರಮವನ್ನು ‘ದ್ವೇಷದ ರಾಜಕಾರಣ’ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ