ರಾಹುಲ್ ಮತ್ತು ಸೋನಿಯಾಗೆ ಮೊದಲು ಕೊರೊನಾ ಪರೀಕ್ಷೆ ಮಾಡಿಸಿ!
Team Udayavani, Mar 5, 2020, 7:38 PM IST
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಇತ್ತೀಚೆಗಷ್ಟೇ ತಮ್ಮ ಇಟಲಿ ಪ್ರವಾಸವನ್ನು ಮುಗಿಸಿ ವಾಪಾಸಾಗಿರುವುದರಿಂದ ಇವರಿಬ್ಬರಿಗೆ ಶಂಕಿತ ಕೊರೋನಾ ಪರೀಕ್ಷೆ ಮಾಡಿಸಬೇಕು ಎಂದು ಬಿಜೆಪಿ ಸಂಸದರು ಲೋಕಸಭೆಯಲ್ಲಿ ಇಂದು ಆಗ್ರಹಿಸಿದ ಘಟನೆ ನಡೆಯಿತು.
ಪಕ್ಷೇತರ ಸಂಸದ ಹನುಮಾನ್ ಬೇನಿವಾಲ ಅವರು ಮೊದಲು ಲೋಕಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತಾಗಿ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲ್ಪಟ್ಟಿತು.
ಕೊರೊನಾ ವಿಚಾರವಾಗಿ ಪಕ್ಷಬೇಧ ಮರೆತು ಸಂಸದರೆಲ್ಲರೂ ಗಂಭೀರ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡುವೆ ವಿಷಯಾಂತರ ಮಾಡಿದ ಪಕ್ಷೇತರ ಸಂಸದ ಬೇನಿವಾಲಾ ಅವರು ರಾಹುಲ್ ಮತ್ತು ಸೋನಿಯಾ ಗಾಂಧಿ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು, ಯಾಕೆಂದರೆ ಅವರು ಇತ್ತೀಚೆಗಷ್ಟೇ ಇಟಲಿ ಪ್ರವಾಸವನ್ನು ಮುಗಿಸಿ ಬಂದಿದ್ದಾರೆ ಎಂದು ಹೇಳಿದರು.
ಇದಾದ ಬಳಿಕ ಸದನ ಕೋಲಾಹಲದ ಗೂಡಾಯಿತು. ಪ್ರತಿಪಕ್ಷ ಕಾಂಗ್ರೆಸ್ ಸಂಸದರು ಹನುಮಾನ್ ಬೇನಿವಾಲಾ ಅವರ ಕ್ಷಮೆ ಅಥವಾ ಅಮಾನತಿಗೆ ಆಗ್ರಹಿಸಿದರು. ತಕ್ಷಣವೇ ಲೋಕಸಭಾಧ್ಯಕ್ಷರು ಈ ವಿಚಾರವನ್ನು ಕಡತದಿಂದ ತೆಗೆದು ಹಾಕಲು ಸೂಚಿಸಿದರು ಮತ್ತು ಈ ವಿಚಾರವನವನ್ನು ಇಲ್ಲಿಗೇ ಮುಗಿಸಲು ಪ್ರಯತ್ನಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಬೇನಿವಾಲಾ ಅವರ ಕ್ಷಮೆಗೆ ಪಟ್ಟುಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ