ಬಜೆಟ್ ಪುಸ್ತಕ ನೀಡಲು ವಿಳಂಬ: ಆಕ್ಷೇಪ
Team Udayavani, Mar 6, 2020, 3:03 AM IST
ಮುಖ್ಯಮಂತ್ರಿಯವರು ಬಜೆಟ್ ಭಾಷಣ ಪೂರ್ಣಗೊಳಿಸಿದ ನಂತರವೇ ಬಜೆಟ್ ಪುಸ್ತಕ ನೀಡುವುದಾಗಿ ತಿಳಿಸಿದ್ದರಿಂದ ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕಳೆದ ವರ್ಷವೇ ಈ ಸಂಪ್ರದಾಯ ಆರಂಭಿಸಲಾಗಿತ್ತು ಎಂದು ಸಮಜಾಯಿಷಿ ನೀಡಿದರು. ಆದರೆ, ಪ್ರತಿಪಕ್ಷ ಸದಸ್ಯರು ನಮ್ಮ ಅವಧಿಯಲ್ಲಿ ಈ ರೀತಿ ಮಾಡಿರಲಿಲ್ಲ ಎಂದರು. ಈ ಮಧ್ಯೆ, ಬಜೆಟ್ ಪುಸ್ತಕ ನೀಡದ ಕಾರಣ ಮಾಧ್ಯಮದವರೂ ಪ್ರತಿಭಟಿಸಿ ಗ್ಯಾಲರಿಯಿಂದ ಹೊರ ನಡೆದರು.
ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರಿಗೆ ಮಾಧ್ಯಮದವರು ಹೊರಗೆ ಹೋದರು ಎಂದು ತಿಳಿಸಿದಾಗ ಗರಂ ಆದ ಮುಖ್ಯಮಂತ್ರಿ, ಸ್ಪೀಕರ್ ಅವರತ್ತ ನೋಡಿ ಪುಸ್ತಕ ಕೊಡಿ ಎಂದು ಹೇಳಿದರು. ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಆಗಮಿಸಿ ಅಧಿಕಾರಿಗಳ ಜತೆ ಮಾತನಾಡಿ ಬಜೆಟ್ ಪುಸ್ತಕ ಕೊಡಿಸುವ ವ್ಯವಸ್ಥೆ ಮಾಡಿಸಿದರು. ಸದನದಲ್ಲಿ ಪ್ರತಿಪಕ್ಷ ಸದಸ್ಯರಿಗೂ ಪುಸ್ತಕ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ