ಅನುದಾನ ಸದ್ಬಳಕೆ ಆಗಲಿ

ಜಾಲಹಳಿಯಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ ಕಾರ್ಯಕ್ರಮ

Team Udayavani, Mar 6, 2020, 4:39 PM IST

6-March-24

ಜಾಲಹಳ್ಳಿ: ಸರಕಾರದ ಅನುದಾನಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಅನಂತರಾಜ ನಾಯಕ ಹೇಳಿದರು. ಸ್ಥಳೀಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಾಜೀವ ಗಾಂಧಿ  ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಕೆ.ಶಿವನಗೌಡ ನಾಯಕರು ಕ್ಷೇತ್ರದ ಅಭಿವೃದ್ಧಿ ಸುಮಾರು 600 ಕೋಟಿ ರೂ. ಅನುದಾನ ಮಂಜೂರಿ ಮಾಡಿಸಿದ್ದಾರೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ಜನರು ವೈಯಕ್ತಿ ಕೆಲಸಕ್ಕಿಂತ ಗ್ರಾಮದಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಶಾಸಕರ ಗಮನಕ್ಕೆ ತರಬೇಕು. ಎಂಜಿಎನ್‌ಆರ್‌ ಇಜಿ ಯೋಜನೆಯಡಿ ತಾಲೂಕಿಗೆ ಮಾದರಿಯಾದ ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಿಸಿದ ಗ್ರಾಪಂ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯ ಎಂದರು.

ತಾಪಂ ಅಧ್ಯಕ್ಷ ಹನುಮಂತ ಕಟ್ಟಿಮನಿ ಮಾತನಾಡಿ ತಾಲೂಕಿನಲ್ಲಿ ಜಾಲಹಳ್ಳಿ ಗ್ರಾಮ ಹೆಚ್ಚು ಅನುದಾನ ಪಡೆದಿದೆ. ಈ ಗ್ರಾಮಕ್ಕೆ ಶಾಸಕ ಕೆ.ಶಿವನಗೌಡ ನಾಯಕರು ಸುಮಾರು 20 ಕೋಟಿಗಿಂತ ಹೆಚ್ಚಿನ ಅನುದಾನ ನೀಡಿದ್ದಾರೆ. ಗ್ರಾಮದ ಎಲ್ಲ ವಾರ್ಡ್‌ ಗಳಲ್ಲಿ ಸಿಸಿ ರಸ್ತೆ, ಚರಂಡಿ, ಶಾಲಾ ಕಟ್ಟಡ, ಅಂಬಿಗೇರ ಚೌಡಯ್ಯ ಭವನ, ಗುಡಿ ಗುಂಡಾರಗಳ ಜೀರ್ಣೋದ್ಧಾರ ಕೈಗೊಂಡಿದ್ದಾರೆ ಎಂದರು.

ವಕೀಲ ವಾಸುದೇವ ಮಾತನಾಡಿ, ಸರಕಾರದ ಕಾರ್ಯಕ್ರಮಗಳಲ್ಲಿ ಅಧಿ ಕಾರಿಗಳು ಶಿಷ್ಟಾಚಾರ ಪಾಲಿಸಬೇಕು. ಜನಪ್ರತಿನಿಧಿಗಳ ಬದಲಿಗೆ ಅವರ ಸಂಬಂಧಿಗಳನ್ನು ಕೂಡ್ರಿಸುವುದು ಚುನಾಯಿತ ಸ್ಥಾನಗಳಿಗೆ ಅಗೌರವ ತೋರಿದಂತೆ ಆಗುತ್ತದೆ ಎಂದರು.

ಜಗದಾರಾಧ್ಯ ಜಯಶಾಂತಲಿಂಗೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷ ರಂಗಯ್ಯ ಮುರಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ವೀರಣ್ಣ ಪಾಣಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ನಾಡಗೌಡ, ತಾಪಂ ಸದಸ್ಯರಾದ ಗೋವಿಂದರಾಜ ನಾಯಕ ತಿಮ್ಮಾಪುರು, ಯಂಕಪ್ಪ ಮುರಾಳ, ಗ್ರಾಪಂ ಉಪಾಧ್ಯಕ್ಷೆ ತುಳಜಮ್ಮ ಗುಮೇದಾರ, ಕಾಂಗ್ರೆಸ್‌ ಮುಖಂಡ ಆದನಗೌಡ ಪಾಟೀಲ, ಪಿಕೆಪಿಎಸ್‌ ಅಧ್ಯಕ್ಷ ಕೆರಿಲಿಂಗಪ್ಪ ನಾಡಗೌಡ, ತಾಪಂ ಮಾಜಿ ಸದಸ್ಯ ಬಸವರಾಜ ಹೇರುಂಡಿ, ಮುಖಂಡರಾದ ಅಮರೇಶ ಪಾಟೀಲ ಎನ್‌.ಲಿಂಗಪ್ಪ, ಯಲ್ಲಪ್ಪ ಚಪ್ಪಳಕಿ, ಗ್ರಾಪಂ ಪಿಡಿಒ ಪತ್ಯಪ್ಪ ರಾಠೊಡ, ಎನ್‌ಆರ್‌ಇಜಿ ಅಭಿಯಂತರರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನ: ಇದೇ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ಮೆಣಸಿನಕಾಯಿ, ಮೌಲಾನಬಿ, ರಂಗಣ್ಣ ಕೋಲ್ಕಾರ, ಯಲ್ಲಮ್ಮ ಚಪ್ಪಳಕಿ, ರಂಗನಾಥ ಮಕಾಸಿ, ಯಲ್ಲಮ್ಮ ಸಾಲಿ ಅವರನ್ನು ಸನ್ಮಾನಿಸಲಾಯಿತು .

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.