ಆಸ್ಪತ್ರೆ ವಾಸ್ತವ್ಯಕ್ಕೆ ವೆನ್ಲಾಕ್ ಗೆ ಬರಲಿದ್ದಾರೆ…


Team Udayavani, Mar 7, 2020, 6:45 AM IST

ಆಸ್ಪತ್ರೆ ವಾಸ್ತವ್ಯಕ್ಕೆ ವೆನ್ಲಾಕ್ ಗೆ ಬರಲಿದ್ದಾರೆ…

ಮಂಗಳೂರು: ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ನೀಡುವ ಮೂಲಕ ರಾಜ್ಯದ ಅತ್ಯುತ್ತಮ ಸರಕಾರಿ ಆಸ್ಪತ್ರೆಯಾಗಿ ಗುರುತಿಸಿಕೊಂಡಿರುವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯು ಮತ್ತಷ್ಟು ಜನಸ್ನೇಹಿಯಾಗುವ ಸಾಧ್ಯತೆಯಿದೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು ತಮ್ಮ ಮುಂದಿನ “ಆಸ್ಪತ್ರೆ ವಾಸ್ತವ್ಯ’ಕ್ಕೆ ವೆನ್ಲಾಕ್ ನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಕೆಲವೇ ವಾರದೊಳಗೆ ಇಲ್ಲಿ ವಾಸ್ತವ್ಯ ಹೂಡಿ ಇಲ್ಲಿನ ಮೂಲ ಸಮಸ್ಯೆ-ಅಹವಾಲುಗಳಿಗೆ ಸ್ಪಂದಿಸುವ ಸಾಧ್ಯತೆಯಿದೆ. ಈ ವಿಚಾರವನ್ನು ಶ್ರೀರಾಮುಲು ಅವರೇ “ಉದಯವಾಣಿ’ಗೆ ತಿಳಿಸಿದ್ದಾರೆ.

ಆಸ್ಪತ್ರೆ ಸ್ಥಿತಿಗತಿ, ರೋಗಿಗಳಿಗಾಗುತ್ತಿರುವ ಸಮಸ್ಯೆಗಳನ್ನು ಆಲಿಸಿ ಗುಣಮಟ್ಟ ವೃದ್ಧಿಗೆ ಆದ್ಯತೆ ನೀಡುವುದಕ್ಕಾಗಿ ಕಳೆದ ಸೆಪ್ಟಂಬರ್‌ನಲ್ಲಿ ಸಚಿವರು “ಸರಕಾರಿ ಆಸ್ಪತ್ರೆ ವಾಸ್ತವ್ಯ’ ಪ್ರಾರಂಭಿಸಿದ್ದರು. ಸಚಿವರು ತಾನು ವಾಸ್ತವ್ಯ ಹೂಡಲಿರುವ ಆಸ್ಪತ್ರೆಗಳ ಪಟ್ಟಿ ಸಿದ್ಧ ಮಾಡಿಕೊಂಡಿದ್ದಾರೆ ಆದರೆ ವೆನ್ಲಾಕ್ ನಲ್ಲಿ ವಾಸ್ತವ್ಯದ ಬಗ್ಗೆ ಆಸ್ಪತ್ರೆ ಪ್ರಮುಖರಿಗೆ ಈವರೆಗೆ ಮಾಹಿತಿ ನೀಡಿಲ್ಲ.

ಸಚಿವರ ಮುಂದಿದೆ ಬೇಡಿಕೆ
ಆಸ್ಪತ್ರೆ ವಾಸ್ತವ್ಯದ ವೇಳೆ ಇಲ್ಲಿನ ಹಲವು ಬೇಡಿಕೆಗಳಿಗೆ ಸ್ಪಂದಿಸುವ ಸವಾಲು ಸಚಿವರ ಮುಂದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭವಾಗಿರುವ 200 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ಬ್ಲಾಕ್‌ಗೆ ಉಪಕರಣಗಳ ಖರೀದಿಗೆ 5 ಕೋ. ರೂ. ಅನುದಾನ ತತ್‌ಕ್ಷಣವೇ ಬಿಡುಗಡೆ ಮಾಡಬೇಕಿದೆ. ಈ ಹೊಸ ಕಟ್ಟಡದಲ್ಲಿರುವ 35 ಹಾಸಿಗೆಯ ಐಸಿಯು ವಿಭಾಗಕ್ಕೆ ಸಿಬಂದಿ, ಗ್ರೂಪ್‌ ಡಿ ನೌಕರರು, ತಾಂತ್ರಿಕ ಸಿಬಂದಿ ನೇಮಕವಾಗಬೇಕಿದೆ. ರೋಗಿಗಳ ಹಿತದೃಷ್ಟಿಯಿಂದ ಟ್ರೋಮಾ ಬ್ಲಾಕ್‌, ಹೊಸ ಕ್ಯಾಶ್ಯುವಾಲಿಟಿ ಬೇಕಿದೆ.

ಒಂದೇ ಕ್ಯಾಂಪಸ್‌ನಡಿ ಎಲ್ಲ ಬ್ಲಾಕ್‌
ವೆನ್ಲಾಕ್ ನ ವಿವಿಧ ಬ್ಲಾಕ್‌ಗಳು ನಾನಾ ಕಡೆ ಇದ್ದು, ಒಂದು ಬ್ಲಾಕ್‌ನಿಂದ ಇನ್ನೊಂದೆಡೆಗೆ ತೆರಳುವುದು ಕಷ್ಟವಾಗಿದೆ. ಬ್ಲಾಕ್‌ಗಳಿಗೆ ಅಂತರ್‌ ಸಂಪರ್ಕ ಕಲ್ಪಿಸುವ ಬೇಡಿಕೆಯನ್ನೂ ಸರಕಾರದ ಮುಂದಿಡಲಾಗಿದೆ. ಆಸ್ಪತ್ರೆ ವಾಸ್ತವ್ಯದ ವೇಳೆ ಸಚಿವರ ಮುಂದೆ ಈ ಬೇಡಿಕೆಯನ್ನು ಇರಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ಔಷಧ ಸಿಗಬೇಕು
ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಸೇವೆ ಸಿಗುತ್ತಿದೆ. ಆದರೆ ಆಸ್ಪತ್ರೆ ಆವರಣ ಮತ್ತು ಹೊರ ಭಾಗದಲ್ಲಿರುವ ಜನರಿಕ್‌ ಮತ್ತು ಜನೌಷಧ ಕೇಂದ್ರಗಳಲ್ಲಿ ಬೇಕಾದ ಔಷಧ ಲಭ್ಯವಿರುವುದಿಲ್ಲ. ಬೇಕಾದ ಔಷಧಗಳು ಸಕಾಲಕ್ಕೆ ಈ ಕೇಂದ್ರಗಳಲ್ಲಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಮೊಗ್ಗ ಮೂಲದ ರೋಗಿಯೊಬ್ಬರು ಮನವಿ ಮಾಡಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ವಾಸ್ತವ್ಯದ ಭಾಗವಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಾಗುವುದು. ಮಾ. 5ರ ಬಳಿಕ ವಾಸ್ತವ್ಯದ ಬಗ್ಗೆ ಚಿಂತನೆ ನಡೆಸಲಾಗಿದೆ. ಆಸ್ಪತ್ರೆ ಸ್ಥಿತಿಗತಿ, ರೋಗಿಗಳಿಗಾಗುತ್ತಿರುವ ಸಮಸ್ಯೆ ಅರಿತುಕೊಂಡು ಗುಣಮಟ್ಟದ ಸೇವೆಗೆ ವ್ಯವಸ್ಥೆ ಕಲ್ಪಿಸುವುದು ಇದರ ಉದ್ದೇಶ.
ಬಿ. ಶ್ರೀರಾಮುಲು,
ಆರೋಗ್ಯ ಸಚಿವರು

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.