ಬಂಟ್ವಾಳದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Mar 7, 2020, 12:15 PM IST
ಪುಂಜಾಲಕಟ್ಟೆ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ.
ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಎಸೆಸ್ಸೆಲ್ಸಿಯಲ್ಲಿ ಶೇ. 94 ಅಂಕ ಪಡೆದಿದ್ದ. ಪಿಯುಸಿಯಲ್ಲೂ ಅಷ್ಟೇ ಪ್ರತಿಭಾವಂತನಾಗಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಭೌತಶಾಸ್ತ್ರ ಪರೀಕ್ಷೆ ಬರೆದಿದ್ದ. ಭೌತಶಾಸ್ತ್ರ ಪತ್ರಿಕೆ ಕಷ್ವವಿತ್ತು. ಹಾಗಾಗಿ ಈತ ನಿರೀಕ್ಷೆ ಮಾಡಿದ ಅಂಕಗಳು ಪರೀಕ್ಷೆಯಲ್ಲಿ ಬರಲಿಕ್ಕಿಲ್ಲ ಎಂಬ ಭಾವನೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಬರೆದಿಟ್ಟಿದ್ದಾನೆ.
ರಾತ್ರಿ ಸುಮಾರು 12 ಗಂಟೆಯವರೆಗೂ ಈತ ಓದುತ್ತಿದ್ದು, ತಾಯಿ 12.30ಕ್ಕೆ ಎಚ್ಚರಗೊಂಡು ನೋಡುವಾಗ ಈತ ಮನೆಯಲ್ಲಿರಲಿಲ್ಲ. ಕೂಡಲೇ ಹುಡುಕಾಟ ನಡೆಸಿದಾಗ, ಆತನ ಮೊಬೈಲ್ ಫೋನ್ ತೋಟದಲ್ಲಿ ಪತ್ತೆಯಾಗಿದೆ. ಅಲ್ಲೇ ಪಕ್ಕದ ಬಾವಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಎಸ್.ಐ. ಪ್ರಸನ್ನ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ