ಅಂಚೆ ಕಚೇರಿಗೆ ಮುತ್ತಿಗೆ

ಕೇಂದ್ರ ಸರ್ಕಾರದ ವಿರುದ್ಧ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

Team Udayavani, Mar 7, 2020, 12:51 PM IST

7-March-06

ವಿಜಯಪುರ: ಸಿಎಎ ಹಿಂಪಡೆಯುವುದು, ಎನ್‌ಪಿಆರ್‌, ಎನ್‌ಆರ್‌ಸಿ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಜೈಲ್‌ ಭರೋ ಚಳವಳಿ ಬೆಂಬಲಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಜನವಾದಿ ಮಹಿಳಾ ಸಂಘದ ಧುರೀಣೆ ಸುರೇಖಾ ರಜಪೂತ ಮಾತನಾಡಿ, ಸಂವಿಧಾನ ವಿರೋಧಿ ಯಾಗಿರುವ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ಈ ರೀತಿ ಕಾಯ್ದೆಗಳಿಂದ ಯಾವ ಉಪಯೋಗವೂ ಇಲ್ಲ, ಮಹಿಳೆಯರಿಗೆ ಬಾಧಿಸುವ ನಿರುದ್ಯೋಗವನ್ನು ನಿವಾರಣೆ ಮಾಡಲು ಉದ್ಯೋಗವನ್ನು ಸೃಷ್ಟಿಸಿ ಕೊಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಬೆಲೆ ಏರಿಕೆಯನ್ನು ತಡೆಗಟ್ಟಬೇಕು ಹಾಗೂ ಅದೇ ತೆರನಾಗಿ ಶಾಸನಸಭೆಗಳಲ್ಲಿ ಶೇ. 33ಮಹಿಳಾ ಮೀಸಲಾತಿಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಅನುದಾನ ಮೀಸಲಿರಿಸಿಲ್ಲ ಎಂದು ಪ್ರತಿಭಟನಾಕಾರರು ಖಂಡಿಸಿದರು. ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಕನಿಷ್ಠ 21,000 ಸಾವಿರ ವೇತನ ನೀಡಬೇಕು. ಭವಿಷ್ಯ ನಿಧಿ , ಪಿಂಚಣಿ ನಿವೃತ್ತಿ ವೇತನವನ್ನು ಕಾಯಂ ಗೊಳಿಸಬೇಕು. ಅಂಗನವಾಡಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಯನ್ನು ಖಾಸಗೀಕರಣ ಮಾಡಬಾರದು ಎಂದು ಬೇಡಿಕೆಗಳನ್ನು ಮುಂದಿರಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುನಂದಾ ನಾಯಕ, ಅಂಗನವಾಡಿ ಜಿಲ್ಲಾ ಕಾರ್ಯದರ್ಶಿ ಭಾರತಿ ವಾಲಿ, ಸರಸ್ವತಿ ಮಠ, ಚಡಚಣ ತಾಲೂಕಿನಿಂದ ಅಶ್ವಿ‌ನಿ ತಳವಾರ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜಿಲ್ಲಾಧ್ಯಕ್ಷ ಅಣ್ಣಾರಾಯ ಈಳಗೇರ, ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ, ಸುವರ್ಣ ಹಲಗಣಿ, ಜಯಶ್ರೀ ಪೂಜಾರಿ, ಜನವಾದಿ ಮಹಿಳಾ ಸಂಘಟನೆಯ ಕಾರ್ಯದರ್ಶಿ ಶೈಲಾ ಕಟ್ಟಿ, ಹನೀಫಾ ಮೊಕಾಶಿ, ಲಲಿತಾ ಪೋಳ, ರಾಜೇಶ್ವರಿ ಸಂಕದ, ಗೀತಾ ಜಾಧವ, ಇಂಡಿ ತಾಲೂಕಿನಿಂದ ಮಹಾದೇವಿ ರಾಠೊಡ, ಸಿಂದಗಿ ತಾಲೂಕಿನಿಂದ ಪ್ರತಿಭಾ ಕುರಡಿ, ಸರೋಜಿನಿ ಪಾಟೀಲ, ಉಷಾ ಕುಲಕರ್ಣಿ, ಬಿಸಿಯೂಟದ ಸುರೇಖಾ ವಾಗ್ಮೋಡೆ, ಸುರೇಖಾ ವಾಗ್ಮೋಡೆ, ಲಕ್ಷ್ಮೀ ಗಣಜಲಿ, ಸವಿತಾ ಕೊಕಟನೂರ, ಬೋರಮ್ಮ ಸಿಂದಗಿ ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.