ಬದುಕು ಭದ್ರಗೊಳಿಸಿದ ಮಹಿಳಾ ಸಂಘ


Team Udayavani, Mar 7, 2020, 3:47 PM IST

ಬದುಕು ಭದ್ರಗೊಳಿಸಿದ ಮಹಿಳಾ ಸಂಘ

ಲಕ್ಷ್ಮೇಶ್ವರ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನ ರಾಗಿದ್ದಾರೆ. ಮಾಗಡಿಯ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘವು ಗ್ರಾಪಂ ಒಕ್ಕೂಟದ ನಿಧಿಯಿಂದ ಶೇ. 1, ಸ್ಥಳೀಯ ಬ್ಯಾಂಕ್‌ ಶೇ. 0.70 ಮತ್ತು ತಮ್ಮದೇ ಸಂಘದ ಉಳಿತಾಯ ನಿಧಿಯಿಂದ ಶೇ. 2 ನಂತೆ ಸಬ್ಸಿಡಿ ರಹಿತ ಸಾಲರೂಪದಲ್ಲಿ ಪಡೆದು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ.

2012ಕ್ಕೆ ಪ್ರಾರಂಭವಾದ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದಲ್ಲಿ ಒಟ್ಟು 12 ಜನ ಸದಸ್ಯರಿದ್ದು, ಬಹುತೇಕ ಹಿಂದುಳಿದ ವರ್ಗದವರೇ ಆಗಿದ್ದಾರೆ. ರೇಖಾ ತಳವಾರ, ಗೌರವ್ವ ಹೆಳವರ, ರತ್ನವ್ವ ತಳವಾರ, ದ್ಯಾಮವ್ವ ಶಿರುಂದ, ಗಿರಿಜವ್ವ ಮಲಗೌಡರ, ಶಿವವ್ವ ಭಜಂತ್ರಿ, ಲಕ್ಷ್ಮವ್ವ ಗುಂಜಳ, ಗೌರವ್ವ ಕಟ್ಟಿಮನಿ, ವಿಜಯಲಕ್ಷ್ಮೀ ಕುರ್ತಕೋಟಿ, ಚನ್ನಬಸವ್ವ ಹಿತ್ತಲಮನಿ, ಸುಮಾ ನಾಯಕ, ಫಕ್ಕೀರವ್ವ ವಡ್ಡರ ಇವರೇ 12 ಜನ ಸಾಧಕ ಮಹಿಳೆಯರು.

ಪ್ರಾರಂಭದಲ್ಲಿ ಪ್ರತಿ ಸದಸ್ಯರು ವಾರಕ್ಕೆ 20 ರೂ. ಗಳಂತೆ ಸೇರಿಸಿ ಸಂಘದ ಖಾತೆಗ ಜಮೆ ಮಾಡುತ್ತಾ ಕಡಿಮೆ ಮೊತ್ತದ ಸಾಲ ಸೌಲಭ್ಯ ಪಡೆದುಕೊಳ್ಳುತ್ತಿದ್ದರು. 2015ರಿಂದ ಗ್ರಾಪಂ ಮಟ್ಟದ ಒಕ್ಕೂಟದಲ್ಲಿ ಸೇರ್ಪಡೆಗೊಂಡು ಲಕ್ಷದ ವರೆಗೂ ಸಾಲ ಸೌಲಭ್ಯ ಪಡೆಯುವ ಮೂಲಕ ಟೇಲರಿಂಗ್‌, ಕಿರಾಣಿ ವ್ಯಾಪಾರ, ಹೋಟೆಲ್‌, ಕಸಬರಿಗೆ ತಯಾರಿಕೆ, ಕುರಿ ಸಾಕಾಣಿಕೆ, ಕೃಷಿ, ಹೈನುಗಾರಿಗೆ ಮಾಡುವ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ಐದಾರು ವರ್ಷಗಳಿಂದ ಸಂಜೀವಿನಿ ಒಕ್ಕೂಟ, ಸ್ಥಳೀಯ ಕೆವಿಜಿ ಬ್ಯಾಂಕ್‌ ಮತ್ತು ಸಂಘದ ಉಳಿತಾಯ ಖಾತೆಯಿಂದ ಅನೇಕ ಬಾರಿ ಲಕ್ಷಾಂತರ ರೂ. ಸಾಲ ಪಡೆದು ಸಕಾಲಿಕ ಮರುಪಾವತಿ ಮಾಡುವ ಮೂಲಕ ಸಂಘ ಮತ್ತು ಸದಸ್ಯರು ಆರ್ಥಿಕ ಪ್ರಗತಿ ಹೊಂದುವಲ್ಲಿ ಶ್ರಮಿಸಿದ್ದಾರೆ. ಇದೀಗ ಸಂಘ ಒಟ್ಟು 50 ಲಕ್ಷದಷ್ಟು ವಹಿವಾಟು ನಡೆಸುವಷ್ಟು ಸಮರ್ಥವಾಗಿದೆ.

ಸಂಘದ ಮಹಿಳೆಯರು ಕೇವಲ ಸಾಲ ಪಡೆದು ಸ್ವಯಂ ಪ್ರಗತಿ ಹೊಂದುವುದಲ್ಲದೇ ಸರ್ಕಾರ, ಗ್ರಾಪಂ, ಸ್ಥಳೀಯ ಸಂಸ್ಥೆಗಳು ನಡೆಸುವ ಆರೋಗ್ಯ, ಶಿಕ್ಷಣ, ಮತದಾನ, ಸರ್ಕಾರದ ಯೋಜನೆಗಳ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಾಮಾಜಿಕ ಕಳಕಳಿ ಮೆರೆಯುತ್ತಿದ್ದಾರೆ. ಸಂಘದ ನಿಯಮಾವಳಿಗಳನ್ನು ಕಾಲಕಾಲಕ್ಕೆ ಅನುಸರಿಸುವ ಮೂಲಕ ಮಾಗಡಿ ಗ್ರಾಪಂ ವ್ಯಾಪ್ತಿಯಲ್ಲಿರುವ 64 ಅಷ್ಟೇ ಅಲ್ಲದೇ ಇಡೀ ರಾಜ್ಯದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಮಾದರಿಯಾಗಿದ್ದಾರೆ.

ಇವರ ಸೇವೆ, ಪ್ರಾಮಾಣಿಕ ಪ್ರಯತ್ನ, ಸಂಘದ ನಿರ್ವಹಣೆ, ಸರ್ಕಾರ ಉದ್ದೇಶ ಸಾಫಲ್ಯತೆಗೆ ಕಾರಣವಾಗಿರುವುದು ಸೇರಿ ಎಲ್ಲ ರೀತಿಯ ಮಾನದಂಡಗಳನ್ನು ಪರಿಗಣಿಸಿದ ಕೇಂದ್ರ ಸರ್ಕಾರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ದೀನದಯಾಳ್‌ ಅಂತ್ಯೋದಯ ಯೋಜನೆಯಡಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಾಗಡಿಯ ರೇಣುಕಾದೇವಿ ಮಹಿಳಾ ಸ್ವ-ಸಹಾಯ ಗುಂಪಿಗೆ ರಾಷ್ಟ್ರೀಯ ಪುರಸ್ಕಾರ ನೀಡುತ್ತಿದೆ. ಮಾ. 7ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಿಗಳು ಈ ಪುರಸ್ಕಾರ ನೀಡಲಿದ್ದಾರೆ.

ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ನಮಗೆ ನಾವೇ ಸಮಾನ ಮನಸ್ಕರು ರಚಿಸಿಕೊಂಡ ಸ್ವ-ಸಹಾಯ ಸಂಘ ಬದುಕಿಗೆ ದಾರಿ ತೋರಿತು. ಸರ್ಕಾರ, ಬ್ಯಾಂಕ್‌ನ ಸಹಾಯದಿಂದ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆದು ಚಹಾ ಅಂಗಡಿ ನಡೆಸುವ ಮೂಲಕ ನನ್ನ ಮೂರು ಹೆಣ್ಣು ಮಕ್ಕಳಿಗೆ ಸುಂದರ ಬದುಕು ಕಟ್ಟಿಕೊಡಲು ಸಾಧ್ಯವಾಗಿದೆ. ಆಗ ಏನೂ ಅರಿಯದ ನಾನು ಈಗ ಎಲ್ಲ ನಿಭಾಯಿಸ ಬಲ್ಲೆ ಎಂಬ ಆತ್ಮ ವಿಶ್ವಾಸಕ್ಕೆ ಸಂಘದ ಶಕ್ತಿಯೇ ಕಾರಣವಾಗಿದೆ.  –ಗಿರಿಜಮ್ಮ ಹೆಳವರ, ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದ ಕಾರ್ಯದರ್ಶಿ

ರೇಣುಕಾದೇವಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಇದೇ ಮೊದಲ ಬಾರಿ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನರಾಗಿರುವುದು ನಮ್ಮ ಜಿಲ್ಲೆಯ ಹೆಮ್ಮೆಯಾಗಿದೆ. ಜಿಲ್ಲೆಯಲ್ಲಿ 5,770 ಸಂಘಗಳಿದ್ದರೂ ಈ ಪುರಸ್ಕಾರ ಲಭಿಸಲು ಈ ಸಂಘ ಅನುಸರಿಸಿದ ಸೂತ್ರಗಳು, ಕೈಗೊಂಡ ಜೀವನೋಪಾಯ ಚಟುವಟಿಕೆಗಳು, ಅವರ ಸಾರ್ಥಕ ಬದುಕಿಗೆ ಮಾರ್ಗದರ್ಶನ ಮಾಡಿದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರಣರಾಗಿದ್ದಾರೆ. -ಡಾ| ಕೆ. ಆನಂದ್‌, ಜಿಪಂ ಸಿಇಒ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.