ಸಸಿ ನೆಟ್ಟು ಪೋಷಿಸಿ, ಪರಿಸರ ಸಂರಕ್ಷಿಸಿ
Team Udayavani, Mar 7, 2020, 5:33 PM IST
ಮದ್ದೂರು: ಮಾನವ ಅಗತ್ಯಕ್ಕೆ ಅನುಗುಣವಾಗಿ ಮರ ಗಿಡಗಳ ಕಡಿದು ಹೈಟೆಕ್ ಕಟ್ಟಡಗಳು ನಿರ್ಮಿಸುತ್ತಿರುವುದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ಮಾರಕ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದು ವೃತ್ತ ನಿರೀಕ್ಷಕ ಕೆ. ಆರ್.ಪ್ರಸಾದ್ ತಿಳಿಸಿದರು.
ತಾಲೂಕಿನ ಆಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುಮಾರಸುಧಾ ಸಾಮಾಜಿಕ ಸೇವಾ ಟ್ರಸ್ಟ್ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಪರಿಸರ ಮಾಲಿನ್ಯದಿಂದಾಗಿ ಮಾನವ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಿದ್ದು ಪ್ರತಿಯೊಬ್ಬರು ಮನೆಯ ಮುಂದೆ ಹಾಗೂ ಜಮೀನುಗಳಲ್ಲಿ ಸಸಿ ನೆಟ್ಟು ಪೋಷಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದರು. ಡಾ.ಜೈಭೀಮ್ ದಲಿತ ಸೇವಾ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ಕೆಲಸ ಪುಣ್ಯದ ಕೆಲಸವಾಗಿದ್ದು ಸಾಲು ಮರದ ತಿಮ್ಮಕ್ಕರಂತೆ ಸಸಿ ನೆಟ್ಟು ಪೋಷಿಸುವ ಮೂಲಕ ಶುದ್ಧ ಗಾಳಿ, ನೀರು, ನೆರಳನ್ನು ಪಡೆಯಲು ಮುಂದಾಗಬೇಕು. ಅವರ ಸೇವೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕುಮಾರಸುಧಾ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ವೇಣು ಗೋಪಾಲ್ ಉಚಿತ ಸಸಿ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಮುಖ್ಯಶಿಕ್ಷಕ ಶಿವಣ್ಣ, ರಮೇಶ್, ಶಿಕ್ಷಕರಾದ ಮಧುಸೂದನ್, ಸುರೇಶ್, ಕುಮಾರ್, ಮಹ ದೇವಸ್ವಾಮಿ, ನಾಗರಾಜು, ಶ್ರೀನಿವಾಸ್, ಸವಿತಾ, ವಿಜಯಲಕ್ಷ್ಮೀ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ