ಭವಿಷ್ಯದಲ್ಲಿ ವಿದ್ಯುತ್‌ ಚಾಲಿತ ವಾಹನಗಳೇ ಪರ್ಯಾಯ


Team Udayavani, Mar 7, 2020, 5:47 PM IST

7-March-26

ದಾವಣಗೆರೆ: ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌, ಇತರೆ ತೈಲಗಳು ಸಿಗದಂತಾಗಲಿದ್ದು, ಆಗ ಪರ್ಯಾಯ ವ್ಯವಸ್ಥೆಯಾಗಿ ನಮಗೆ ವಿದ್ಯುಚ್ಚಾಲಿತ ವಾಹನಗಳು ಸಹಾಯಕ್ಕೆ ಬರಲಿವೆ ಎಂದು ಬಾಪೂಜಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ| ಎಂ.ಸಿ.ನಟರಾಜ್‌ ಹೇಳಿದ್ದಾರೆ.

ಶುಕ್ರವಾರ, ಬಿ.ಐ.ಇ.ಟಿ. ಕಾಲೇಜಲ್ಲಿ ಯಾಂತ್ರಿಕ ವಿಭಾಗದ ವತಿಯಿಂದ ಆಯೋಜಿಸಿದ್ದ ವಿದ್ಯುಚ್ಚಾಲಿತ ವಾಹನಗಳ ವಿನ್ಯಾಸ ಮತ್ತು ತಯಾರಿಕೆ ಬಗ್ಗೆ ಮೂರು ದಿನಗಳ ಕಾರ್ಯಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ವಿದ್ಯುಚ್ಚಾಲಿತ ವಾಹನಗಳ ಯುಗ ಪ್ರಾರಂಭವಾಗಲಿದೆ. ವಾಹನಗಳಿಗೆ ಬೇಕಾಗುವ ಇಂಧನ ಕೊರತೆ ಉಂಟಾಗಲಿದ್ದು, ಆಗ ಪರ್ಯಾಯ ವ್ಯವಸ್ಥೆಯಾಗಿ ವಿದ್ಯುಚ್ಚಾಲಿತ ವಾಹನಗಳೇ ಅನಿವಾರ್ಯವಾಗಲಿವೆ ಎಂದರು.

ಕಾಲೇಜಿನ ನಿರ್ದೇಶಕ ಪ್ರೊ| ವೈ. ವೃಷಬೇಂದ್ರಪ್ಪ ಮಾತನಾಡಿ, ಕಾಲಕಾಲಕ್ಕೆ ತಂತ್ರಜ್ಞಾನ ಬದಲಾವಣೆ ಸಾರಿಗೆ ವಾಹನಗಳಲ್ಲಿ ಆಗುತ್ತಿದೆ. ಆ ಬದಲಾವಣೆಗೆ ನಾವು ಹೊಂದಿಕೊಂಡು ಆವಿಷ್ಕಾರ ಮಾಡಬೇಕಿದೆ. ಬ್ಯಾಟರಿ ಚಾರ್ಜ್‌ ಮಾಡುವುದೇ ಈ ವಾಹನಗಳಲ್ಲಿ ಸವಾಲಿನ ಕೆಲಸವಾಗಿದೆ ಎಂದರು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ| ಎಸ್‌ .ಕುಮಾರಪ್ಪ ಮಾತನಾಡಿ, ಲಿಥಿಯಂ ಬ್ಯಾಟರಿಗೆ ಬದಲಾಗಿ ಪರ್ಯಾಯ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಮೊದಲು ಬ್ಯಾಟರಿ ಚಾರ್ಜ್‌ ಮಾಡಲು 2-3 ಗಂಟೆ ಬೇಕಾಗುತ್ತಿತ್ತು. ಇದೀಗ ಕೆಲವೇ ಸೆಕೆಂಡುಗಳಲ್ಲಿ ರೀಚಾರ್ಜ್‌ ಮಾಡಲು ಫ್ಲಾÂಷ್‌ ಚಾರ್ಜರ್‌ ಬಂದಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೆಕ್ಯಾನಿಕಲ್‌ ವಿದ್ಯಾರ್ಥಿ ವೇದಿಕೆಯ ಆಯೋಜಕ ಡಿ.ಇ.ಉಮೇಶ್‌, ಟಿ.ಆರ್‌.ಮೋಹನ್‌ ಕಾಲೇಜಿನ ಅಕಾಡೆಮಿಕ್‌ ಡೀನ್‌ ಡಾ| ಕೆ ಸದಾಶಿವಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಮಂಜುಳಾ ಸ್ವಾಗತಿಸಿ, ರುಕಯ್ಯ ನಿರೂಪಿಸಿದರು. ನೇಹಾ ವಂದಿಸಿದರು.

ಕಾರ್ಯಗಾರ ಉದ್ದೇಶ: ಕೇಂದ್ರ ಸರ್ಕಾರ 2030ರ ವರೆಗೆ ದೇಶದಲ್ಲಿ ಸುಮಾರು ಶೇ. 30-40ರಷ್ಟು ವಿದ್ಯುತ್‌ ಚಾಲಿತ ವಾಹನಗಳನ್ನು ಉಪಯೋಗಿಸು ವಂತಾಗಬೇಕೆಂದು ನಿರ್ಧರಿಸಿದೆ. ಇದರಿಂದ ವಾಯು ಮತ್ತು ಶಬ್ದ ಮಾಲಿನ್ಯ ಕಡಿಮೆಗೊಳಿಸಬಹುದು.
ಮುಂದಿನ ದಿನಗಳಲ್ಲಿ ಸರಿಸುಮಾರು ಕನಿಷ್ಠ 50 ಲಕ್ಷ ಉದ್ಯೋಗ ಸೃಷ್ಟಿಯನ್ನು ಈ ಕ್ಷೇತ್ರದಲ್ಲಿ ನಿರೀಕ್ಷಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯುಚ್ಚಾಲಿತ ವಾಹನಗಳ ವಿನ್ಯಾಸ ತಯಾರಿಕೆಗೆ ಬೇಕಾಗುವ ಕೌಶಲ್ಯಾಭಿವೃದ್ಧಿಗೆ ಮತ್ತು ಸ್ವಂತ ಉದ್ಯೋಗ ಪ್ರಾರಂಭಿಸುವುದಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು
ಬಿಐಇಟಿ ಕಾಲೇಜಿನ ಯಾಂತ್ರಿಕ ವಿಭಾಗವು ವಿದ್ಯುಚ್ಚಾಲಿತ ವಾಹನಗಳ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾರ್ಯಾಗಾರ ಏರ್ಪಡಿಸಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಡೆಸಿಬಲ್‌ ಲ್ಯಾಬ್‌ನ ಕಾರ್ಯನಿರ್ವಾಹಕ
ಸೂರಜ್‌ ಎಸ್‌.ಡಿ. ಮತ್ತು ತಂಡದವರು ವಿವಿಧ ವಿಷಯ ಬೋಧಿಸಿ, ಪ್ರಾಯೋಗಿಕವಾಗಿ ಎರಡು ವಾಹನಗಳನ್ನು ವಿದ್ಯಾರ್ಥಿಗಳಿಂದ ತಯಾರಿಸಲಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.