ಬಿಜೆಪಿಯ ಏಕನಾಥ್‌ ಖಡ್ಸೆಗೆ ರಾಜ್ಯ ಸಭೆಯ ಆಫರ್‌ ?


Team Udayavani, Mar 7, 2020, 6:04 PM IST

ಬಿಜೆಪಿಯ ಏಕನಾಥ್‌ ಖಡ್ಸೆಗೆ ರಾಜ್ಯ ಸಭೆಯ ಆಫರ್‌ ?

ಮುಂಬಯಿ:ಮುಂಬರುವ ರಾಜ್ಯಸಭಾ ಚುನಾವಣೆಗಾಗಿ ಬಿಜೆಪಿ ವತಿಯಿಂದ ಮೂವರು ಅಭ್ಯರ್ಥಿಗಳನ್ನು ಹೆಸರು ನಿರ್ಧರಿಸಿದೆ ಎಂಬ ಮಾಹಿತಿ ವರದಿಯಾಗಿದೆ. ಇದರಲ್ಲಿ ಏಕನಾಥ್‌ ಖಡ್ಸೆ ಹೆಸರು ಅನಿರೀಕ್ಷಿತವಾಗಿ ಹೊರಬಂದಿದೆ. ಪಕ್ಷದ ವರಿಷ್ಠ ನಾಯಕರು ರಾಜ್ಯಸಭೆಗಾಗಿ ಏಕನಾಥ ಖಡ್ಸೆ, ಉದಯನ್‌ ರಾಜೇ ಭೋಸ್ಲೆ ಮತ್ತು ರಾಮದಾಸ್‌ ಅಠವಳೆ ಅವರ ಹೆಸರಿಗೆ ಮೊಹರು ಮಾಡಿದ್ದಾರೆಂದು ಹೇಳಲಾಗಿದೆ.

ಭೋಸರಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಕನಾಥ್‌ ಖಡ್ಸೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅನಂತರ, ರಾಜ್ಯ ರಾಜಕೀಯಕ್ಕೆ ಆಗಮಿಸಿದ ದೇವೇಂದ್ರ ಫಡ್ನವೀಸ್‌ ಅವರೊಂದಿಗಿನ ವಿವಾದದಿಂದಾಗಿ ಖಡ್ಸೆ ಅವರ ರಾಜಕೀಯದ ಆಗಮಕ್ಕೆ ಅನೇಕ ಅಡೆತಡೆಗಳು ಎದುರಾಯಿತು. ಅಷ್ಟೇ ಅಲ್ಲದೆ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕೂಡಾ ಅವರನ್ನು ತಿರಸ್ಕರಿಸಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ, ಏಕನಾಥ್‌ ಖಡ್ಸೆ ಅವರು, ಫಡ್ನವೀಸ್‌ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಇದರ ಪರಿಣಾಮವಾಗಿ ರಾಜ್ಯದ ಬಿಜೆಪಿ ನಾಯಕರಲ್ಲಿ ಆಂತರಿಕ ಬಿರುಕು ನಿರ್ಮಾಣವಾಗಿತ್ತು.

ಅದಕ್ಕಾಗಿಯೇ ಏಕನಾಥ್‌ ಖಡ್ಸೆಯನ್ನು ನೇರವಾಗಿ ದಿಲ್ಲಿಗೆ ಕಳುಹಿಸಲಾಗುವುದು ಮತ್ತು ರಾಜ್ಯ ರಾಜಕಾರಣದಲ್ಲಿ ಉಂಟಾಗುತ್ತಿದ್ದ ಸಮಸ್ಯೆ ಹೊರಗಿಡಲಾಗುವುದು ಎಂದು ವರದಿಯಾಗಿದೆ. ಖಡ್ಸೆ ಅವರು ರಾಜ್ಯಸಭೆಗೆ ಹೋಗಬೇಕು ಎಂಬುವುದು ರಾಜ್ಯದ ನಾಯಕರ ಬೇಡಿಕೆಯೂ ಆಗಿತ್ತು. ಆದ್ದರಿಂದ ಖಡ್ಸೆ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದೇ ಪ್ರಶ್ನೆ.

ಮಹಾರಾಷ್ಟ್ರದ ಕೋಟಾದಿಂದ ರಾಜ್ಯಸಭೆಗೆ ಆಯ್ಕೆಯಾದ ಏಳು ಸಂಸದರ ಅಧಿಕಾರಾವಧಿಯು ಮುಂದಿನ ಎಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಎಲ್ಲಾ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯ ಮಹಾವಿಕಾಸ್‌ ಆಘಾಡಿಯು ಮೊದಲ ಬಾರಿಗೆ ಸ್ಪರ್ಧಿಸಲಿದೆ.

ರಾಜ್ಯಸಭೆಗಾಗಿ ಮಹಾವಿಕಾಸ್‌ ಆಘಾಡಿಯ ಸಂಖ್ಯಾ ಬಲವನ್ನು ಗಮನಿಸಿದರೆ, ಇದರಲ್ಲಿ ಎರಡು ಸ್ಥಾನಗಳಲ್ಲಿ ಶರದ್‌ ಪವಾರ್‌ ಮತ್ತು ಫೌಜಿಯಾ ಖಾನ್‌ ಅವರ ಹೆಸರನ್ನು ಎನ್‌ಸಿಪಿ ಬಹುತೇಕ ಖಚಿತಪಡಿಸಿದೆ. ಕಾಂಗ್ರೆಸ್‌ ಮತ್ತು ಶಿವಸೇನೆಯು ಇನ್ನೂ ತಮ್ಮ ಹೆಸರನ್ನು ಘೋಷಿಸಿಲ್ಲ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.