ಕುವೈಟ್‌- ಮಂಗಳೂರು ವಿಮಾನ ಯಾನ ತಾತ್ಕಾಲಿಕ ರದ್ದು


Team Udayavani, Mar 8, 2020, 6:38 AM IST

ಕುವೈಟ್‌- ಮಂಗಳೂರು ವಿಮಾನ ಯಾನ ತಾತ್ಕಾಲಿಕ ರದ್ದು

ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕುವೈಟ್‌ ಸರಕಾರವು ಭಾರತ ಸಹಿತ 7 ದೇಶಗಳಿಗೆ ವಿಮಾನ ಯಾನವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದು, ಕುವೈಟ್‌ ಮತ್ತು ಮಂಗಳೂರು ನಡುವಣ ವಿಮಾನ ಯಾನವೂ ಸ್ಥಗಿತಗೊಂಡಿದೆ.

ಅದರಂತೆ ಮಾರ್ಚ್‌ 6ರಿಂದ ಒಂದು ವಾರ ಕಾಲ ಕುವೈಟ್‌ನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಕುವೈಟ್‌ಗೆ ವಿಮಾನ ಸಂಚಾರ ಇರುವುದಿಲ್ಲ.

ಮಂಗಳೂರಿನಿಂದ ದುಬಾೖ, ಅಬುಧಾಬಿ, ದೋಹಾ ಮತ್ತು ದಮಾಮ್‌ಗಳಿಗೆ ಎಂದಿನಂತೆ ಸಂಚರಿಸುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಮತ್ತು ದಿಲ್ಲಿ ನಡುವಿನ ವಿಮಾನ ಯಾನ ಕೆಲವು ದಿನಗಳ ಹಿಂದೆಯೇ ಪ್ರಯಾಣಿಕರ ಕೊರತೆಯಿಂದಾಗಿ ರದ್ದುಗೊಂಡಿದೆ.

ವಿದೇಶಿ ಯಾತ್ರಿಕರ ಆಗಮನಕ್ಕೆ ತಡೆ
ಮೂಡುಬಿದಿರೆ: ಸಾವಿರಕಂಬದ ಬಸದಿಗೆ ಬೇಸಗೆಯ ಅವಧಿಯಲ್ಲಿ ಅತೀ ಹೆಚ್ಚು ವಿದೇಶೀ ಯಾತ್ರಿಕರು ಆಗಮಿಸುತ್ತಿದ್ದು ಈ ಬಾರಿ ಕೊರೊನಾ ವೈರಸ್‌ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿದೇಶೀ ಯಾತ್ರಿಕರ ಆಗಮನಕ್ಕೆ ಕೊಂಚ ತಡೆಯೊಡ್ಡಬೇಕಾದ ಅನಿವಾರ್ಯ ಎದುರಾಗಿದೆ ಎಂದು ಮೂಡುಬಿದಿರೆ ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕರ್ನಾಟಕ ಸರಕಾರ ಹೊರಡಿಸಿರುವ ತಿಳಿವಳಿಕೆ ಪತ್ರವನ್ನು ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಗಳಲ್ಲಿ ಬಸದಿ ಆವರಣದಲ್ಲಿ ಪ್ರದರ್ಶಿಸಲಾಗುತ್ತಿದೆ. ಸಿಬಂದಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳನ್ನು ಮನವರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯವಾಗಿ ನವಮಂಗಳೂರು ಬಂದರಿಗೆ ಪ್ರವಾಸಿ ಹಡಗುಗಳು ಬಂದಾಗ ಅದರಲ್ಲಿ ಬರುವ ಪ್ರಯಾಣಿಕರು ಮೂಡುಬಿದಿರೆ ಬಸದಿ ಸಹಿತ ಕರಾವಳಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ.

ಮಂಗಳೂರು ಬಂದರಿನಲ್ಲಿ ಪ್ರವಾಸಿ ಹಡಗಿಗೆ ತಡೆ
ಪಣಂಬೂರು: ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ನವಮಂಗಳೂರು ಬಂದರಿಗೆ ಬರುವ ಪ್ರವಾಸಿ ಹಡಗು ಗಳಿಗೆ ತಡೆ ನೀಡಲಾಗಿದ್ದು ಮಾ.31ರ ವರೆಗೆ ಬಂದರು ಪ್ರವೇಶಿಸದಂತೆ ಆದೇಶ ನೀಡಲಾಗಿದೆ. ಪ್ರಸ್ತುತ ದೇಶದ ವಿವಿಧ ಬಂದರುಗಳಿಗೆ ಪ್ರವಾಸಿ ಹಡಗುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಶನಿವಾರ ಬರಲಿದ್ದ ಎಂಎಸ್‌ಸಿ ಲಿರಿಕಾ ಪ್ರವಾಸಿ ಹಡಗಿಗೆ ಎನ್‌ಎಂಪಿಟಿ ಪ್ರವೇಶ ನಿರಾಕರಿಸಲಾಗಿದೆ ಎಂದು ಬಂದರು ಅ ಧಿಕೃತವಾಗಿ ಸಂಬಂಧ ಪಟ್ಟ ಏಜಂಟ್‌ ಸಂಸ್ಥೆಗಳಿಗೆ ತಿಳಿಸಿದೆ. ಕೇಂದ್ರ ಸರಕಾರ ವಿದೇಶದಿಂದ ಬರುವ ವ್ಯಕ್ತಿಗಳ ಮೇಲೆ ನಿಗಾ ಇರಿಸಿದ್ದು ಈಗ ಪ್ರವಾಸಿ ಹಡಗುಗಳಿಗೂ ಭಾರತ ಪ್ರವೇಶಕ್ಕೆ ತಡೆ ನೀಡಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.