ಸಾಮೂಹಿಕ ವಿವಾಹ ಸಿದ್ಧತೆಗೆ ಡಿಸಿ ಸೂಚನೆ

ಹಿಂದೂ ಸಂಪ್ರದಾಯದಂತೆ ಮದುವೆ ಎಲ್ಲ ದೇವಾಲಯಗಳಲ್ಲಿ ಪ್ರಚಾರಕ್ಕೆಆದೇಶ

Team Udayavani, Mar 8, 2020, 1:23 PM IST

8-March-13

ಬೀದರ: ಸಾರ್ವಜನಿಕರು ನಾವೆಲ್ಲರೂ ಒಂದೇ ಎಂದು ಸರಳತೆ ಮತ್ತು ಸಜ್ಜನಿಕೆಯನ್ನು ತೋರುವ ನಿಟ್ಟಿನಿಂದ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ನಡೆಯುವ ಸಪ್ತಪದಿ ಸಾಮೂಹಿಕ ಸರಳ ವಿವಾಹಕ್ಕೆ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಸಪ್ತಪದಿ ವಿವಾಹ ಕಾರ್ಯಕ್ರಮದ ತಯಾರಿಗೆ ಸಂಬಂಧಿಸಿದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ ಬಳಿಕ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ವಿವಾಹ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಿದರು.

ಈ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರದಿಂದ ಪ್ರಥಮವಾಗಿ 2019-20ನೇ ಸಾಲಿನಿಂದ ಜಾರಿಗೆ ತರಲಾಗುತಿದ್ದು, ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಮತ್ತು ಯಾವುದೇ
ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು, ತಹಶೀಲ್ದಾರರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನ ಹರಿಸಬೇಕು ಎಂದು ತಿಳಿಸಿದರು.

ಮನುಷ್ಯನು ಸಂಘ ಮತ್ತು ಸಹಜ ಜೀವಿ. ಜೀವನದಲ್ಲಿ ಬಾಳ ಸಂಗಾತಿಯು ಅತ್ಯವಶ್ಯ. ಹಿಂದೂ ಧರ್ಮ ಶಾಸ್ತ್ರದ ಪ್ರಕಾರ ಮದುವೆ ಎಂಬುದು ಸಂಸಾರಿಕ ಬದುಕಿಗೆ ಬಹುಮುಖ್ಯ. ಎರಡು ಮನಸ್ಸುಗಳು ಹಾಗೂ ಎರಡು ಕುಟುಂಬಗಳು ಎಲ್ಲರ ಸಮ್ಮುಖದಲ್ಲಿ ಒಲುಮೆಯಿಂದ ಒಡಗೂಡಿ ಒಲವಿನಿಂದ ಒಡನಾಡುವ ಸಡಗರ ಸಮಾರಂಭದ ಸಮಯ ಇದಾಗಿದೆ. ಇಂತಹ ಸಂಸಾರಿಕ ಸಮಾಗಮದ ಸಾರ್ಥಕ ಸಂಭ್ರಮಕ್ಕೆ ರಾಜ್ಯ ಸರ್ಕಾರವು ಸ್ಪಂದಿಸುವ ಸುಮುಹೂರ್ತದ ಸಂದರ್ಭ ಇದಾಗಿದೆ. ಇದುವೇ ದತ್ತಿ ಇಲಾಖೆಯು ನಡೆಸುತ್ತಿರುವ ಸಾಮೂಹಿಕ ಸರಳ ಮದುವೆ ಸಪ್ತಪದಿ ವಿವಾಹ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ವಿವಾಹ ನಡೆಯುವ ದಿನಾಂಕ, ವಧು ವರರು ನೋಂದಾಯಿಸುವ ಕಡೆಯ ದಿನಾಂಕ, ನೋಂದಾಯಿಸಿಕೊಂಡಿರುವ ವಧು ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸುವ ದಿನಾಂಕ, ವಧು ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ, ಅಂತಿಮ ವಧು ವರರ ಪಟ್ಟಿ ಪ್ರಕಟಿಸುವ ದಿನಾಂಕ ಸೇರಿದಂತೆ ಇನ್ನಿತರ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚೂರಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಾಮೂಹಿಕ ವಿವಾಹಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಿ, ಸದರಿ ಇಲಾಖೆಯಿಂದ ನೀಡುವ ಸಹಾಯಧನವನ್ನು ಸಹ ಸಾಮೂಹಿಕ ವಿವಾಹ ಸಂದರ್ಭದಲ್ಲಿ ವಿತರಿಸಬೇಕು. ವಿವಾಹಗಳನ್ನು ಸ್ಥಳೀಯ ಹಿಂದೂ ಸಂಪ್ರದಾಯದಂತೆ ನಡೆಸಬೇಕು. ವಿವಾಹದ ಬಗ್ಗೆ ಎಲ್ಲ ದೇವಾಲಯಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕು. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸೂಚನೆಯನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ಅಧಿ ಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ್‌ ಶ್ರೀಧರ್‌, ಭೂಮಾಪನ ಇಲಾಖೆಯ ಉಪ ನಿರ್ದೇಶಕ ಬಿ.ಎಸ್‌. ವೇಣುಗೋಪಾಲ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.