ಕೊರೊನಾ ಕಿರಿಕಿರಿ; ಜನರ ಜೇಬಿಗೆ ಕತ್ತರಿ!

ಮಾಸ್ಕ್ ಕಡ್ಡಾಯ ಬಳಸಲು ಮಕ್ಕಳಿಗೆ ಖಾಸಗಿ ಶಾಲೆಗಳ ಫರ್ಮಾನು ಮೆಡಿಕಲ್‌ ಶಾಪ್‌ ಗಳಿಗೆ ತಿರುಗಿದ ಶುಕ್ರದೆಸೆ

Team Udayavani, Mar 8, 2020, 1:39 PM IST

8-March-15

ರಾಯಚೂರು: ಕೊರೊನಾ ಕಾಯಿಲೆ ಹರಡದಂತೆ ಆರೋಗ್ಯ ಇಲಾಖೆ ಕೆಲ ಸೂಚನೆಗಳನ್ನು ನೀಡಿದ್ದು, ಮುಖಗವಚ (ಮಾಸ್ಕ್) ಹಾಕಿಕೊಳ್ಳಲು ಸೂಚಿಸಿದೆ. ಆದರೆ, ಈಗ ಅದೇ ದೊಡ್ಡ ದಂಧೆಯಂತಾಗಿ ಮಾರ್ಪಟ್ಟಿದ್ದು, ಶಾಲಾ ಮಕ್ಕಳಿಗೂ ಅದರ ಬಿಸಿ ತಟ್ಟಿದೆ.

ಹೈದರಾಬಾದ್‌ನಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಅಲ್ಲದೇ, ಜಿಲ್ಲೆಗೂ ಕೊರೊನಾ ಭೀತಿ ಇದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಔಷಧ ವರ್ತಕರು ಕಡಿಮೆ ದರದ ಮಾಸ್ಕ್ ಗಳನ್ನು ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದಾರೆ.

ಮತ್ತೊಂದೆಡೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳೂ ಕಡ್ಡಾಯವಾಗಿ ಮಾಸ್ಕ್ಹಾ ಕಿಕೊಂಡೇ ಬರಬೇಕು ಎಂಬ ಮಕ್ಕಳಿಗೆ ಕಟ್ಟಪ್ಪಣೆ ಹೊರಡಿಸಿವೆ. ಅಲ್ಲದೇ, ಎನ್‌-90 ಮಾಸ್ಕನ್ನೇ ಹಾಕಿಕೊಳ್ಳಬೇಕು ಎಂಬ ಸೂಚನೆ ನೀಡಿವೆ. ಆದರೆ, ಈ ಮಾಸ್ಕ್ ದರ ಮಾರುಕಟ್ಟೆಯಲ್ಲಿ 300 ರೂ. ಇದ್ದು, ಪಾಲಕರಿಗೆ ಅನಗತ್ಯ ಹೊರೆಯಾಗುತ್ತಿದೆ. ಇನ್ನು ಬಹುತೇಕ ಜನ ಮನೆಯಿಂದ ಹೊರ ಬರುತ್ತಿದ್ದಂತೆ ಮುಖಗವಚ ಹಾಕಿಕೊಂಡೇ ಓಡಾಡುತ್ತಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಮುಖಗವಚ ಹಾಕಿಕೊಂಡಯ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ.

ಜೋರು ದಂಧೆ: ಕೊರೊನಾ ವೈರಸ್‌ ಜಿಲ್ಲೆಗೆ ಕಾಲಿಡಲಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಎಚ್ಚೆತ್ತ ಮೆಡಿಕಲ್‌ ವ್ಯಾಪಾರಿಗಳು ಕಡಿಮೆ ಗುಣಮಟ್ಟದ ಮಾಸ್ಕ್ಗಳಿಗೂ ದುಬಾರಿ ಹಣ ಪಡೆಯುತ್ತಿದ್ದಾರೆ. 5 ರೂ. ಮಾಸ್ಕ್ ಗಳಿಗೂ 20 ರೂ. ಪಡೆಯುತ್ತಿದ್ದಾರೆ. ಇನ್ನು ಕೆಲವೆಡೆ ನೋ ಸ್ಟಾಕ್‌ ಎನ್ನುತ್ತಿದ್ದರೆ, ದುಬಾರಿ ಬೆಲೆಯದ್ದು ಇದೆ ಬೇಕಾ ಎಂದು ಕೇಳುತ್ತಿದ್ದಾರೆ. ಇನ್ನು ಖಾಸಗಿ ಶಾಲೆಗಳು ಕೂಡ ಮಾಸ್ಕ್ ಕಡ್ಡಾಯವಾಗಿ ಖರೀದಿಸಬೇಕು ಎನ್ನುತ್ತಿರುವುದರಿಂದ ಮೆಡಿಕಲ್‌ಗ‌ಳ ವರ್ತಕರಿಗೆ ಜೋರು ವ್ಯಾಪಾರಾವಾಗುತ್ತಿರುವುದಂತೂ ಸತ್ಯ.

ಮುಂದುವರಿದ ತಪಾಸಣೆ: ಇನ್ನು ಜಿಲ್ಲೆಯಲ್ಲಿ ಐದು ಕಡೆ ಚೆಕ್‌ಪೋಸ್ಟ್‌ ಸ್ಥಾಪಿಸಿ ತಪಾಸಣೆ ಮಾಡುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ನಿತ್ಯ ಸಾವಿರಾರು ಜನರ ತಪಾಸಣೆ ನಡೆಸಿದ್ದಾರೆ. ಶುಕ್ರವಾರ ಗಡಿಭಾಗದ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸಿದ 250 ವಾಹನಗಳನ್ನೂ ತಪಾಸಣೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಜನರ ಆರೋಗ್ಯ ಪರೀಕ್ಷಿಸಲಾಗಿದೆ. ಆದರೆ, ಈವರೆಗೂ ಒಂದೇ ಒಂದು ಪ್ರಕರಣ ಕಂಡು ಬಂದಿಲ್ಲ. ಹೀಗಾಗಿ ರಿಮ್ಸ್‌ನಲ್ಲಿ ಪ್ರತ್ಯೇಕ ವಾರ್ಡ್‌ ಆರಂಭಿಸಿದರೂ ಒಬ್ಬ ರೋಗಿ ಕೂಡ ಬಂದಿಲ್ಲ.

ಕಾಲರ್‌ ಟ್ಯೂನ್‌ ಸಂದೇಶ: ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತೆ ವಹಿಸಲು ಈಗಾಗಲೇ ಪ್ರಕಟಣೆ ನೀಡಿರುವ ಸರ್ಕಾರ ಕಾಲರ್‌ ಟ್ಯೂನ್‌ ಮೂಲಕವೂ ಜಾಗೃತಿ ಮೂಡಿಸುತ್ತಿದೆ. ಯಾರಿಗೆ ಕರೆ ಮಾಡಿದರೂ ಕೊರೊನಾ ವೈರಸ್‌ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಣೆ ನೀಡಲಾಗುತ್ತಿದೆ. ಕೈಗಳನ್ನು ಸ್ವಚ್ಛವಾಗಿ ತೊಳೆಯುವುದು, ಕೆಮ್ಮುವವರು, ಸೀನುವವರಿಂದ ದೂರವಿರುವುದು, ಮೊಟ್ಟೆ, ಮಾಂಸ ಸೇವೆಗೂ ಮುನ್ನ ಎಚ್ಚರಿಕೆ ವಹಿಸುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಕೊರೊನಾ ವೈರಸ್‌ ವಿಚಾರದಲ್ಲಿ ಜನ ಆತಂಕಪಡುವ ಅಗತ್ಯವಿಲ್ಲ. ದುಬಾರಿ ಹಣ ನೀಡಿ ಮಾಸ್ಕ್ಗಳನ್ನು ಖರೀದಿಸುವ ಅಗತ್ಯವಿಲ್ಲ. ಕಾಯಿಲೆ ಸೋಂಕಿತರ ತಪಾಸಣೆ ಮಾಡುವಾಗ ಆರೋಗ್ಯ ಸಿಬ್ಬಂದಿ ಎನ್‌-90 ಮಾಸ್ಕ್ಗಳನ್ನು ಬಳಸುತ್ತಾರೆ. ಅದು ಎಲ್ಲ ಕಡೆ ಬಳಸಬೇಕೆಂದಿಲ್ಲ. ಅಕ್ಕಪಕ್ಕದಲ್ಲಿ ಯಾರಾದರೂ ಕೆಮ್ಮುತ್ತಿದ್ದರೆ, ಜಾಸ್ತಿ ಸೀನುತ್ತಿದ್ದರೆ ಮಾಸ್ಕ್ ಬಳಸಬಹುದು. ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕೊರೊನಾ ಪ್ರಕರಣ ದೃಢಪಟ್ಟಿಲ್ಲ.
ರಾಮಕೃಷ್ಣ,
ಜಿಲ್ಲಾ ಆರೋಗ್ಯಾಧಿಕಾರಿ, ರಾಯಚೂರು

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.