ಕೊರೊನಾ ಕಳವಳ: ಅರುಣಾಚಲ ಪ್ರದೇಶಕ್ಕೆ ವಿದೇಶಿಯರ ಭೇಟಿಗೆ ನಿಷೇಧ
Team Udayavani, Mar 8, 2020, 2:56 PM IST
ಇಟಾನಗರ: ವಿಶ್ವವನ್ನೇ ಕಳವಳಕ್ಕೀಡುಮಾಡಿರುವ ಕೊರೊನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸುತ್ತಿರುವಂತೆ ಈಶಾನ್ಯ ರಾಜ್ಯಗಳಲ್ಲಿ ಒಂದಾದ ಪ್ರವಾಸಿ ಪ್ರಿಯರ ನೆಚ್ಚಿನ ತಾಣ ಅರುಣಾಚಲ ಪ್ರದೇಶ ತನ್ನ ರಾಜ್ಯಕ್ಕೆ ವಿದೇಶಿ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪ್ರವೇಸಿಸುವ ವಿದೇಶಿಯರಿಗೆ ಅಗತ್ಯವಿದ್ದ ಸಂರಕ್ಷಿತ ಪ್ರದೇಶ ಅನುಮತಿಯನ್ನು (PAP) ವಿತರಿಸದೇ ಇರಲು ನಿರ್ಧರಿಸಿದೆ. ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ಭಾರತದ ಈ ರಾಜ್ಯಕ್ಕೆ ವಿದೇಶಿ ಪ್ರವಾಸಿಗರು ಪ್ರವೇಶಿಸಬೆಕಾದರೆ ಪಿ.ಎ.ಪಿ. ಅಗತ್ಯವಾಗಿದೆ.
ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಾಗೂ ವಿವಿಧ ದೇಶಗಳಿಗೆ ಭೇಟಿ ನೀಡಿ ಭಾರತಕ್ಕೆ ಭೇಟಿ ಕೊಡುತ್ತಿರುವ ಪ್ರವಾಸಿಗರ ಮೂಲಕ ನಮ್ಮಲ್ಲಿ ಈ ವೈರಸ್ ಪ್ರಕರಣಗಳು ಹರಡುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ಈ ಕ್ರಮವನ್ನು ಕೈಗೊಂಡಿದೆ ಎಂದು ಅರುಣಾಚಲ ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಸಿಕ್ಕಿಂ ಸಹ ವಿದೇಶಿ ಪ್ರವಾಸಿಗರ ಮೇಲೆ ಇದೇ ರೀತಿಯ ನಿಷೇಧವನ್ನು ಹೇರಿದ ಒಂದು ದಿನದ ಬಳಿಕ ಇದೀಗ ಅರುಣಾಚಲ ಸರಕಾರವೂ ಸಹ ತನ್ನ ನಿರ್ಧಾರವನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ