ಕದ್ದುಮುಚ್ಚಿ ಬೆಂಗಳೂರಿಗೆ ಅಕ್ರಮ ಮರಳು ಸಾಗಣೆ


Team Udayavani, Mar 9, 2020, 3:00 AM IST

kaddu-mucchi

ಬಂಗಾರಪೇಟೆ: ತಾಲೂಕಲ್ಲಿ ಮತ್ತೆ ಸದ್ದಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಬೆಂಗಳೂರಿಗೆ ಪ್ರತಿ ನಿತ್ಯ ರಾತ್ರಿವೇಳೆ ಟಿಪ್ಪರ್‌ಗಳಲ್ಲಿ ಸಾಗಣೆ ಮಾಡುತ್ತಿದ್ದರೂ ತಾಲೂಕು ಆಡಳಿತ ಮೌನಕ್ಕೆ ಶರಣಾಗಿದೆ. ಮಳೆ ಇಲ್ಲದೆ ಕೆರೆಗಳು ಬರಿದಾಗಿವೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದಂಧೆಕೋರರು ರಾತ್ರಿ ವೇಳೆ ಮರಳನ್ನು ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದಾರೆ. ಇದರಿಂದ ಅಂತರ್ಜಲ ಮತ್ತಷ್ಟು ಕುಸಿಯುವಂತಾಗಿದೆ.

ಸರ್ಕಾರ ಕೆರೆ ಮತ್ತು ಕೃಷಿ ಜಮೀನಿನಲ್ಲಿ ಮರಳು ತೆಗೆಯಬಾರದೆಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಆದರೂ, ತಾಲೂಕಿನ ಕಾಮಸಮುದ್ರ ಹಾಗೂ ಬೂದಿಕೋಟೆ ಹೋಬಳಿ ಮಟ್ಟದ ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾತ್ರಿ ವೇಳೆ ಮರಳು ಸಾಗಣೆ ಮಾಡಲಾಗುತ್ತಿದೆ.

ರಾಜಕಾರಣಿಗಳ ಕೃಪೆ: ಕೆಜಿಎಫ್ ಜಿಲ್ಲಾ ಪೊಲೀಸ್‌ಗೆ ಎಸ್ಪಿಯಾಗಿ ಬಂದ ಹೊಸದರಲ್ಲಿ ಮೊಹಮದ್‌ ಸುಜೀತ ಕಟ್ಟುನಿಟ್ಟಾಗಿ ಮರಳು ದಂಧೆಗೆ ಕಡಿವಾಣ ಹಾಕಿದ್ದರು. ಮನೆ ಕಟ್ಟಲು ಸಹ ಸ್ಥಳೀಯವಾಗಿ ಮರಳು ಬಳಸಿಕೊಳ್ಳಲು ಸಾಧ್ಯವಾಗದ ಮಟ್ಟಿಗೆ ಬಿಗಿ ಮಾಡಿದ್ದರು. ಕೆಲವು ರಾಜಕಾರಣಿಗಳು ಹಾಕಿದ್ದ ಸವಾಲ್‌ಗೆ ಕೆಜಿಎಫ್ ಪೊಲೀಸ್‌ ಜಿಲ್ಲೆ ಕಣ್ಣುಮುಚ್ಚಿ ಕುಳಿತಿರುವುದರಿಂದ ಪ್ರತಿ ನಿತ್ಯ ಕನಿಷ್ಠ 20ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ ಮರಳು ಸಾಗಾಣಿಕೆಯಾಗುತ್ತಿದೆ. ಬೂದಿಕೋಟೆ, ಕಾಮಸಮುದ್ರ, ಕನಮನಹಳ್ಳಿ ಕಡೆಗಳಲ್ಲಿ ಯಥೇತ್ಛವಾಗಿ ಮರಳು ಸಿಗುವುದರಿಂದ ಈ ಭಾಗದ ಕಂದಾಯ ಅಧಿಕಾರಿಗಳ ಹಾಗೂ ಪೊಲೀಸರ ಪರೋಕ್ಷ ಸಹಕಾರದಿಂದ ಎಗ್ಗಿಲ್ಲದೆ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಮೇಲೆ ಎಂ.ಸ್ಯಾಂಡ್‌, ಕೆಳಗೆ ಮರಳು: ಯಾರಿಗೂ ಅನುಮಾನ ಬಾರದಂತೆ ಮೇಲ್ಭಾಗದಲ್ಲಿ ಎಂ.ಸ್ಯಾಂಡ್‌ ಲೇಪಿಸಿಕೊಂಡು ಹಳ್ಳ, ಕೆರೆಗಳಲ್ಲಿನ ಮರಳನ್ನು ಟಿಪ್ಪರ್‌ಗಳಲ್ಲಿ ಸಾಗಿಸುತ್ತಿದ್ದಾರೆ. ಅಕ್ರಮ ಮರಳನ್ನು ಕಾಮಸಮುದ್ರ ಹೋಬಳಿಯಲ್ಲಿ ಲಾರಿಗೆ ತುಂಬಿಸಿಕೊಂಡು ನಂತರ ಮಾಲೂರು ತಾಲೂಕಿನ ಟೇಕಲ್‌ ಬಳಿ ಇರುವ ಜಲ್ಲಿ ಕ್ರಷರ್‌ಗಳ ಬಳಿ ಎಂ.ಸ್ಯಾಂಡ್‌ಅನ್ನು ಹಾಕಿಕೊಂಡು ಪೊಲೀಸರಿಗೆ ಯಾಮಾರಿಸುತ್ತಿದ್ದಾರೆ. ಹಾಡಹಗಲೇ ಮರಳು ಸಾಗಿಸುತ್ತಿದ್ದು, ಗ್ರಾಮೀಣ ರಸ್ತೆಗಳು ಬಹುಬೇಗನೆ ಹಾಳಾಗುತ್ತಿವೆ. ಇದರಿಂದ ಸರ್ಕಾರಕ್ಕೂ ನಷ್ಟವಾಗುತ್ತಿದೆ.

ಪೊಲೀಸರಿಂದ ಟಿಪ್ಪರ್‌ ವಶ: ಮಾಲೂರು ತಾಲೂಕಿನ ಟೇಕಲ್‌ ಮೂಲಕವಾಗಿ ಇದೇ ರೀತಿ ಮರಳು ಮೇಲೆ ಎಂ.ಸ್ಯಾಂಡ್‌ ಹಾಕಿಕೊಂಡು ಬಂದ ಟಿಪ್ಪರ್‌ ಲಾರಿ ಯೊಂದನ್ನು ಶುಕ್ರವಾರ ರಾತ್ರಿ ಬಂಗಾರಪೇಟೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದು, ಪರಿಶೀಲಿಸಿದಾಗ ಮರಳು ಮೇಲೆ 6 ಇಂಚು ಎಂ.ಸ್ಯಾಂಡ್‌ ಹಾಕಿರುವುದು ಕಂಡು ಬಂದಿದೆ. ಈ ಬಗ್ಗೆ ದೂರು ದಾಖಲಾಗಿದೆ.

ಮರಳು ಸಾಗಣೆಯ ಮಾಹಿತಿ ಇಲ್ಲ: ತಾಲೂಕಿನ ಬೂದಿಕೋಟೆ ಹಾಗೂ ಕಾಮಸಮುದ್ರ ಹೋಬಳಿಗಳಲ್ಲಿ ಅಕ್ರಮ ಮರಳು ದಂಧೆ ಪತ್ತೆಹಚ್ಚಲು ತಹಶೀಲ್ದಾರ್‌ ಕೆ.ಬಿ.ಚಂದ್ರಮೌಳೇಶ್ವರ್‌ ಅವರ ಸರ್ಕಾರಿ ವಾಹನವು ರಾತ್ರಿ ವೇಳೆಯಲ್ಲಿ ಓಡಾಡುತ್ತಿದೆ. ಈ ಬಗ್ಗೆ ತಹಶೀಲ್ದಾರ್‌ರಿಂದ ಮಾಹಿತಿ ಕೇಳಿದ್ರೆ, ಅಕ್ರಮ ಮರಳು ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸಿಬ್ಬಂದಿ ಕಳುಹಿಸಲಾಗಿತ್ತು ಎಂದು ಹೇಳುತ್ತಾರೆ. ಅಲ್ಲದೆ, ಈ ಸಮಯದಲ್ಲಿ ಯಾವುದೇ ಟಿಪ್ಪರ್‌ಗಳ ಮರಳು ಸಾಗಾಣಿಕೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸುತ್ತಾರೆ.

ಬೆಂಗಳೂರಿಗೆ ಸಾಗಣೆ: ತಾಲೂಕಿನ ಕಾಮಸಮುದ್ರದ ಕನಮನಹಳ್ಳಿ, ತೊಪ್ಪನಹಳ್ಳಿ ಗ್ರಾಮಗಳ ಬಳಿ ಅಕ್ರಮವಾಗಿ ಮರಳು ಫಿಲ್ಟರ್‌ ಕೆಲಸ ನಡೆಯುತ್ತಿದೆ. ಇದು ಸ್ಥಳೀಯ ಪೊಲೀಸ್‌, ಕಂದಾಯ ಇಲಾಖೆ, ಗ್ರಾಮಲೆಕ್ಕಿಗರಿಗೂ ತಿಳಿದಿದೆ. ಮರಳು ಚೆನ್ನಾಗಿದ್ದರೆ ಮಾತ್ರ ಬೆಂಗಳೂರಿನಲ್ಲಿ ಮಾರಾಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಮಸಮುದ್ರ ಹೋಬಳಿಯಲ್ಲಿ ಮರಳು ಫಿಲ್ಟರ್‌ಗಳು ಹೇರಳವಾಗಿ ತಲೆಎತ್ತಿವೆ.

ಪ್ರತಿ ದಿನ ರಾತ್ರಿ 12 ಗಂಟೆ ಮೇಲೆ ಈ ಅಕ್ರಮ ಮರಳು ಲಾರಿಗಳು ಬೆಂಗಳೂರಿಗೆ ಹೊರಡುತ್ತಿವೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ತಾಲೂಕಿನಲ್ಲಿ ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಲ್ಲವನ್ನೂ ನಿಯಂತ್ರಿಸಲಾಗಿದೆ ಎಂದು ಕಂದಾಯ ಇಲಾಖೆ ಉತ್ತರ ನೀಡುತ್ತದೆ. ಕೆಜಿಎಫ್ ಎಸ್ಪಿ ಅವರು ಇನ್ನಾದರೂ ಯಾವುದೇ ಒತ್ತಡಕ್ಕೆ ಮಣಿಯದೇ ಕಟ್ಟುನಿಟ್ಟಾಗಿ ಮರಳು ದಂಧೆಗೆ ಕಡಿವಾಣ ಹಾಕುವ ಮೂಲಕ ಅಂತರ್ಜಲ ರಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ.

ತಾಲೂಕಿನ ಕಾಮಸಮುದ್ರ ಹಾಗೂ ಬೂದಿಕೋಟೆ ಹೋಬಳಿಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿರುವುದು ಮಾಹಿತಿ ಸಿಕ್ಕಿಲ್ಲ. ಕೆಜಿಎಫ್ ಜಿಲ್ಲಾ ಎಸ್ಪಿ ಮಹಮ್ಮದ್‌ ಸುಜೀತ ಅವರು 15 ದಿನಗಳ ರಜೆ ಇದ್ದಾಗ ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಇತ್ತು. ಅನಂತರ ಯಾವುದೇ ಅಕ್ರಮ ಮರಳು ಸಾಗಾಣಿಕೆಯಾಗುತ್ತಿಲ್ಲ. ಜನರಿಗೆ ಅಕ್ರಮ ಮರಳು ಸಾಗಣೆ ಮಾಡುವುದು ಕಂಡು ಬಂದಾಗ ಮಾಹಿತಿ ನೀಡಿದ್ರೆ ಕ್ರಮಕೈಗೊಳ್ಳುತ್ತೇನೆ.
-ಕೆ.ಬಿ.ಚಂದ್ರಮೌಳೇಶ್ವರ್‌, ತಹಶೀಲ್ದಾರ್‌, ಬಂಗಾರಪೇಟೆ

ತಾಲೂಕಿನ ಕಾಮಸಮುದ್ರ ಹೋಬಳಿಯಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಮರಳು ಉಪಯೋಗಿಸಲು ಬಿಡುತ್ತಿಲ್ಲ. ರಾಜಕಾರಣಿಗಳು ಶಿಫಾರಸು ಮಾಡಿದರೂ ಅಕ್ರಮ ಮರಳು ದಂಧೆ ನಡೆಯಲು ಬಿಡುವುದಿಲ್ಲ. ದಿನದ 24 ಗಂಟೆಯೂ ಪೊಲೀಸ್‌ ಇಲಾಖೆ ನಿಗಾವಹಿಸಿದೆ. ಅಕ್ರಮ ಮರಳು ದಂಧೆ ಹಾಗೂ ಮರಳು ಫಿಲ್ಟರ್‌ ಮಾಡದಂತೆ ಎಚ್ಚರವಹಿಸಲಾಗಿದೆ.
-ಆರ್‌.ದಯಾನಂದ್‌, ಸಬ್‌ ಇನ್ಸ್‌ಪೆಕ್ಟರ್‌, ಕಾಮಸಮುದ್ರ

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.