ಹಕ್ಕು ಪತ್ರಕ್ಕಾಗಿ ಹೇಮಾವತಿ ಮುಳುಗಡೆ ಸಂತ್ರಸ್ತರ ಪರದಾಟ


Team Udayavani, Mar 9, 2020, 3:00 AM IST

hakku-patra

ಸಕಲೇಶಪುರ/ಆಲೂರು: ಹೇಮಾವತಿ ಅಣೆಕಟ್ಟಿನಿಂದ ಮುಳುಗಡೆಯಾದ ಸಂತ್ರಸ್ತರಿಗೆ ಸರ್ಕಾರ ಬ್ಯಾಬ ಅರಣ್ಯದಲ್ಲಿ ಜಮೀನು ನೀಡಿದ್ದು, ಹಲವು ವರ್ಷಗಳು ಕಳೆದರು ಜಮೀನಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಕೊಡದಿರುವುದರಿಂದ ಹಲವು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ.

148 ಗ್ರಾಮಗಳ ಮುಳುಗಡೆ ಸಂತ್ರಸ್ತರು: 47 ವರ್ಷಗಳ ಹಿಂದೆ ಗೊರೂರಿನಲ್ಲಿ ಹೇಮಾವತಿ ಜಲಾಶಯ ನಿರ್ಮಾಣ ಮಾಡಲು ಪೊನ್ನಾಥಪುರ, ಬಂಡಿ ಮಲ್ಲೇನಹಳ್ಳಿ, ಮಂದಿರಾ, ಕಾಕನಹಳ್ಳಿ, ಸಿದ್ದಾಪುರ, ಹೊಳೆಮಾರನಹಳ್ಳಿ, ಅಪ್ಪಗೊಡನಹಳ್ಳಿ,ಗಂಜಿಗೆರೆ, ಬಸವನಹಳ್ಳಿ, ಅಜ್ಜಗೊಡನಹಳ್ಳಿ,ಸೇರಿದಂತೆ ಸುಮಾರು 148 ಗ್ರಾಮಗಳು ಮುಳುಗಡೆಯಾಗಿದ್ದರಿಂದ ಅಲ್ಲಿದ ಜನರನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕೆಲವು ಸಂತ್ರಸ್ತರಿಗೆ ಬ್ಯಾಬ ಅರಣ್ಯ, ಧರ್ಮಾಪುರಿ,ಮಣಿಪುರ, ಶಿವಸಾಗರ, ಮಲ್ಲೇಶ್ವರ ಸೇರಿದಂತೆ ಇತರ ಭಾಗಗಳಲ್ಲಿ ಸುಮಾರು 1,558 ಎಕರೆ ಜಮೀನಿನಲ್ಲಿ ಒಂದು ಸರ್ಟಿಫಿಕೇಟಿಗೆ 4 ಎಕರೆಯಂತೆ ಜಮೀನು ನೀಡಲಾಗಿತ್ತು. ಅದರೆ ಜಮೀನು ನೀಡಿ 5 ದಶಕ ಕಳೆದರೂ ಇದುವರೆಗೂ ಯಾವುದೇ ಹಕ್ಕು ಬಾಧ್ಯತೆ ನೀಡದಿರುವುದರಿಂದ ಜಮೀನಿಗೆ ಸೂಕ್ತ ದಾಖಲೆಗಳನ್ನು ಕೊಡುವಂತೆ ತಾಲೂಕು ಕಚೇರಿಗೆ ಸಂತ್ರಸ್ತರು ದಿನಂಪ್ರತಿ ಅಲೆದಾಡುವುದು ಬಿಟ್ಟರೆ ಯಾವುದೆ ಪ್ರಯೋಜನವಾಗಿಲ್ಲ.

ಸಾಗುವಳಿ ಚೀಟಿ ಬಿಟ್ಟರೆ ಬೇರೇನೂ ಇಲ್ಲ: ಐದು ದಶಕ ಕಳೆದರೂ ಜಮೀನಿನ ಪಕ್ಕಾ ಪೋಡಿ ಆಗದ ಕಾರಣ ಹಲವು ಕುಟುಂಬಗಳು ಜಮೀನಿನ ಆಸೆಯನ್ನು ಬಿಟ್ಟು ಬೇರೆಡೆಗೆ ವಲಸೆ ಹೋಗಿವೆ. ಹಲವು ಸಂತ್ರಸ್ತರ ಬಳಿ ಜಮೀನಿಗೆ ಸಂಬಂಧಪಟ್ಟಂತೆ ಸಾಗುವಳಿ ಚೀಟಿ ಬಿಟ್ಟರೆ ಬೇರೆ ಯಾವ ದಾಖಲೆಗಳು ದೊರೆಯುವುದಿಲ್ಲ. ಕೆಲವು ಅಧಿಕಾರಿಗಳು ಜಮೀನು ದಾಖಲೆಗಳನ್ನು ಮಾಡಿಕೊಡುವುದಾಗಿ ಹಣ ಪಡೆದು ಕೆಲಸ ಮಾಡಿಕೊಡದೇ ದಿನಂಪ್ರತಿ ಕಚೇರಿಗೆ ಅಲೆಸುತ್ತಾ ಸಂತ್ರಸ್ತರನ್ನು ಕತ್ತಲೆ ಕೋಣೆಯಲ್ಲಿ ಇಟ್ಟಿದ್ದರೆಂಬ ಆರೋಪಗಳು ಕೇಳಿ ಬಂದಿದೆ.

ದಶಕಗಳ ಹಿಂದೆ ಹೇಮಾವತಿ ಅಣೆಕಟ್ಟೆ ಕಟ್ಟಲು ಕೆಲವು ಕುಟುಂಬಗಳು ಜಮೀನು ನೀಡಿ ತ್ಯಾಗ ಮಾಡಿದ್ದರಿಂದ ಇಂದು ಕೋಟ್ಯಂತರ ಜನ ನೆಮ್ಮದಿಯಿಂದ ಅನ್ನ ತಿನ್ನುತಿದ್ದಾರೆ. ಆದರೆ ಇಂದು ಜಮೀನಿನ ಸಾಗುವಳಿ ಪತ್ರ ಇದ್ದರೂ ಭೂಮಿ ತಮಗೆ ಸೇರಿದ್ದು ಎಂಬುದರ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ದಾಖಲೆ ನೀಡದೇ ಇರುವುದರಿಂದ ಮುಳುಗಡೆ ಪ್ರದೇಶದ ಸಂತ್ರಸ್ತರು ಕಂಗಾಲಾಗಿದ್ದಾರೆ. ಕೂಡಲೇ ತಾಲೂಕು ಆಡಳಿತದಿಂದ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡಿದ್ದ ಭೂಮಿಗೆ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅವರ ಸಮಸ್ಯೆ ಪರಿಹರಿಸುವುದು ಅಗತ್ಯವಾಗಿದೆ.

ಗೊರೂರು ಡ್ಯಾಂ ನಿರ್ಮಾಣಕ್ಕೆ ಭೂಮಿ ನೀಡಿರುವ ಸಂತ್ರಸ್ತರಿಗೆ ಸರ್ಕಾರದಿಂದ ನೀಡಿರುವ ಭೂಮಿಗೆ ಹಕ್ಕು ಪತ್ರ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು
-ಶಿರೀನ್‌ತಾಜ್‌, ತಹಶೀಲ್ದಾರ್‌

ಜಮೀನು ಮಾರಾಟ ಅಥವಾ ಮಕ್ಕಳಿಗೆ ಪಾಲು ಮಾಡಿಕೊಡುವಂತಹ ಸಂದರ್ಭದಲ್ಲಿ ಹಕ್ಕುಪತ್ರವಿಲ್ಲದೇ ಜಮೀನನ್ನು ಪರಭಾರೆ ಮಾಡುವಂತಿಲ್ಲ. ಸಂಬಂಧ ಪಟ್ಟವರು ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಕೃಷ್ಣೇಗೌಡ, ಮಾಜಿ ಗ್ರಾಪ ಸದಸ್ಯರು

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.