ಮಾತಾ ಮಾಣಿಕೇಶ್ವರಿ ಅಂತ್ಯಸಂಸ್ಕಾರ ಇಂದು
Team Udayavani, Mar 9, 2020, 3:04 AM IST
ಸೇಡಂ: ಯಾನಾಗುಂದಿಯ ಮಾಣಿಕ್ಯಗಿರಿ ಬೆಟ್ಟದಲ್ಲಿ ಶನಿವಾರ ಲಿಂಗೈಕ್ಯರಾದ ಮಾತಾ ಮಾಣಿಕೇಶ್ವರಿ ಅಮ್ಮನವರ ಅಂತ್ಯಸಂಸ್ಕಾರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜರುಗಲಿದ್ದು, ದರ್ಶನ ಪಡೆಯಲು ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.
ಮಾತಾ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಲೇ ಜಾಗೃತ ಗೊಂಡ ಪೊಲೀಸ್ ಇಲಾಖೆ, ಭದ್ರತೆಗೆ ಸುಮಾರು 1,500 ಸಿಬ್ಬಂದಿಯನ್ನು ನೇಮಿಸಿದೆ. ಮಾಣಿಕ್ಯಗಿರಿಯಲ್ಲೀಗ ಶಿವನಾಮ ಸ್ಮರಣೆ, ಜಪ-ತಪ, ಆರಾಧನೆ ನಡೆಯುತ್ತಿದ್ದು, ಅಹಿಂಸೆಯೇ ಪರಮ ಧರ್ಮ ಎಂದು ಸಾರಿ, ಸಾರಿ ಹೇಳಿದ ಮಾತಾ ಮಾಣಿಕೇಶ್ವರಿ ಅಮ್ಮನವರನ್ನು ಕಂಡು ಭಕ್ತರು ದುಃಖತಪ್ತರಾಗಿದ್ದಾರೆ.
ಮಂಗಳವಾರ ನಡೆಸಲು ಉದ್ದೇಶಿಸಲಾಗಿದ್ದ ಅಂತ್ಯಸಂಸ್ಕಾರವನ್ನು ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಾನಾಗುಂದಿಯ ಅಮ್ಮನವರು ಸೂಚಿತ ಗುಹೆಯ ಹೊರಭಾಗದ ದೇವಾಲಯದಲ್ಲಿ ಅದ್ವೆ„ತ ಸಿದ್ಧಾಂತದಡಿ ಸಕಲ ವಿಧಿವಿಧಾನಗಳ ಮೂಲಕ ಆಶ್ರಮದ 108 ಶಾಖೆಗಳ ಮುಖ್ಯ ಆಚಾರ್ಯರ ನೇತೃತ್ವದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಟ್ರಸ್ಟ್ನ ಸಿದ್ರಾಮಪ್ಪ ಸಣ್ಣೂರು ತಿಳಿಸಿದ್ದಾರೆ.
ಉತ್ತರಾಧಿಕಾರಿ ನೇಮಕ ಇಲ್ಲ: ಮೂಲಗಳ ಪ್ರಕಾರ ಅಮ್ಮನವರ ಸಮಾಧಿ ಮಂದಿರವೇ ಭಕ್ತ ಸಮೂಹಕ್ಕೆ ಏಕಮೇವ ದ್ವಿತೀಯ ಎನ್ನಲಾಗಿದೆ. ಶ್ರೀಶೈಲದಲ್ಲಿ ನೆಲೆಸಿರುವ ಮಲ್ಲಿಕಾರ್ಜುನಸ್ವಾಮಿ ಆರಾಧನೆಯಲ್ಲೇ ತಮ್ಮ ಇಡೀ ಜೀವನ ಸವೆಸಿದ ಮಾತಾ ಮಾಣಿಕೇಶ್ವರಿ ನೆಲೆಸಿದ ಕ್ಷೇತ್ರ ಎರಡನೇ ಶ್ರೀಶೈಲವಾಗಲಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಉತ್ತರಾ ಧಿಕಾರಿ ನೇಮಕ ಇಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಉಮೇಶ ಜಾಧವ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಮಾತೆಯ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ