ಮಹಿಳಾ ಮೀಸಲಾತಿಗೆ ಮುಂದಾಗಲಿ
Team Udayavani, Mar 9, 2020, 3:06 AM IST
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಿಳಿಸಿದರು.
ಜೆಡಿಎಸ್ ಬೆಂಗಳೂರು ಮಹಾನಗರ ಮಹಿಳಾ ಘಟಕ ಮಹಿಳಾ ದಿನಾಚರಣೆ ಅಂಗವಾಗಿ ಜೆ.ಪಿ. ಭವನದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, “1996ರಲ್ಲಿ ನಾನು ಪ್ರಧಾನಿಯಾದ ಸಂದರ್ಭದಲ್ಲಿ ಲೋಕ ಸಭೆಯಲ್ಲಿ ಮಹಿಳಾ ಮೀಸಲಾತಿ ಗಾಗಿ ಮಸೂದೆ ಮಂಡನೆ ಮಾಡಿದ್ದೆ. ಈ ಮಸೂದೆ ಜಾರಿಗೆ ಪ್ರಧಾನಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಮಹಿಳೆ ಯರ ಶ್ರೇಯೋಭಿವೃದ್ಧಿಗೆ ಮುಂದಾ ಗಬೇಕು’ ಎಂದರು.
ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್ ಮಾತನಾಡಿ, ಜಗತ್ತು ಸಾಕಷ್ಟು ಮುಂದುವರಿದಿದ್ದರೂ ಹೆಣ್ಣುಭ್ರೂಣ ಹತ್ಯೆಗಳ ಸಂಖ್ಯೆ ಕಡಿಮೆ ಆಗಿಲ್ಲ. ಅಲ್ಲದೆ, ಹೆಣ್ಣು ಹುಟ್ಟಿದ ಮೇಲೂ ಹಲವು ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳಿಗೆ ಕಡಿವಾಣ ಹಾಕಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.
ಬೆಂಗಳೂರು ಮಹಾನಗರ ಮಹಿಳಾ ಘಟಕದ ಅಧ್ಯಕ್ಷೆ ರುತ್ ಮನೋರಮಾ ಮತ್ತಿತರರಿದ್ದರು. ಇದೇ ವೇಳೆ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರನ್ನು ಮಹಿಳಾ ದಿನಾಚರಣೆ ಪ್ರಯುಕ್ತ ಆತ್ಮೀಯವಾಗಿ ಸನ್ಮಾನಿಸಲಾಯಿತು.