ಮಹಿಳಾ ವಿಮುಕ್ತಿಗೆ ಹೋರಾಟ ಅನಿವಾರ್ಯ

ಈಶ್ವರಚಂದ್ರ ವಿದ್ಯಾಸಾಗರ -ಸಾವಿತ್ರಿಬಾಯಿ ಫುಲೆ ಆಶಯ ನನಸು ಮಾಡೋಣ: ಜಿಲ್ಲಾಧ್ಯಕ್ಷೆ ಎ.ಶಾಂತಾ

Team Udayavani, Mar 9, 2020, 1:14 PM IST

9-March-9

ಬಳ್ಳಾರಿ: ಮಹಿಳೆಯರ ವಿಮುಕ್ತಿಗೆ ಇಂದಿಗೂ ಸಹ ನಾವೆಲ್ಲಾ ಒಂದಾಗಿ ಹೋರಾಟ ಮಾಡಬೇಕಾದ ಸ್ಥಿತಿ ಇದೆ ಎಂದು ಎಐಎಂಎಸ್‌ಎಸ್‌ನ ಜಿಲ್ಲಾಧ್ಯಕ್ಷೆ ಎ.ಶಾಂತಾ ಹೇಳಿದರು.

ಎಐಎಂಎಸ್‌ಎಸ್‌ ಸಂಸ್ಥೆಯಿಂದ ನಗರದ ಐಎಂಎ ಹಾಲ್‌ ನಲ್ಲಿ ಹಮ್ಮಿಕೊಂಡ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಶತಮಾನಗಳ ಹಿಂದೆ ಪ್ರತಿರೋಧದ ಗಟ್ಟಿ ಧ್ವನಿಯ ಪ್ರತೀಕವಾಗಿ ನ್ಯೂಯಾರ್ಕ್‌ ನಗರದ ಜವಳಿ ಕಾರ್ಖಾನೆಯ ಸಾವಿರಾರು ಹೆಣ್ಣುಮಕ್ಕಳು ದುಡಿತದ ಅವಧಿಯ ಕಡಿತ, ಕೆಲಸದ ಸ್ಥಳದಲ್ಲಿ ಉತ್ತಮ ವಾತಾವರಣ ಹಾಗೂ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಹೋರಾಟದ ಕಣಕ್ಕೆ ಇಳಿದರು.

ಸಿದ್ಧ ಉಡುಪುಗಳ ಕಾರ್ಖಾನೆಗಳಲ್ಲಿ ದುಡಿಯುವ ಸುಮಾರು 20ರಿಂದ 30 ಸಾವಿರ ಮಹಿಳಾ ಕಾರ್ಮಿಕರು ಕೊರೆಯುವ ಚಳಿ ಲೆಕ್ಕಿಸದೆ ಸತತವಾಗಿ ಹದಿಮೂರು ವಾರಗಳ ಕಾಲ ಮುಷ್ಕರ ನಡೆಸಿ ದಸ್ತಗಿರಿಯಾದರು, ಲಾಠಿ-ಗುಂಡೇಟನ್ನು ಎದುರಿಸಿ ಕೆಲವೊಂದು ಹಕ್ಕುಗಳನ್ನು ಗಳಿಸಿಕೊಂಡರು. ಆ ದಿನವೇ ಮಾರ್ಚ್‌ 8 ನಮ್ಮೆಲ್ಲರಿಗೂ ಇಂದಿಗೂ ಸ್ಪೂರ್ತಿದಾಯಕವಾಗಿದೆ. ಮಹಿಳೆಯರ ವಿಮುಕ್ತಿಗಾಗಿ ನಾವೆಲ್ಲರೂ ಹೋರಾಡೋಣ ಎಂದರು.

ಐಐಯುಟಿಯುಸಿಯ ಜಿಲ್ಲಾಧ್ಯಕ್ಷರಾದ ಆರ್‌. ಸೋಮಶೇಖರಗೌಡ ಅವರು ಮಾತನಾಡುತ್ತಾ, 1910ರಲ್ಲಿ ಡೆನ್ಮಾರ್ಕನ ಕೊಪೆನ್‌ಹೆಗನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾಜವಾದಿ ಮಹಿಳಾ ಸಮ್ಮೇಳನದ ಸಂದರ್ಭದಲ್ಲಿ ಸಮಾಜವಾದಿ ನಾಯಕಿಯಾಗಿದ್ದ ಕ್ಲಾರಾ ಜೆಟ್ಕಿನ್‌ “ಮಾರ್ಚ್‌ 8’ನ್ನು ವಿಶ್ವ ಮಹಿಳಾ ದಿನವಾಗಿ ಆಚರಿಸಬೇಕು ಎಂದು ಕರೆ ನೀಡಿದರು ಎಂದರು.

ಸಮಾಜದಲ್ಲಿ ಬೇರು ಬಿಟ್ಟಂತಹ ಪೂರ್ವಗ್ರಹಗಳ ವಿರುದ್ಧ ಹೋರಾಡಿ, ಪ್ರಜಾತಾಂತ್ರಿಕ ವಿಚಾರಗಳ ಆಧಾರದ ಮೇಲೆ ಹೊಸ ಮೌಲ್ಯಪ್ರಜ್ಞೆ ಸ್ಥಾಪಿಸಲು ಹೋರಾಟದ ಅಲೆಯನ್ನು ಎಬ್ಬಿಸಿದ ಈಶ್ವರಚಂದ್ರ ವಿದ್ಯಾಸಾಗರರು, ಸಾವಿತ್ರಿಬಾಯಿ ಫುಲೆ, ಪಂಡಿತ ತಾರಾನಾಥ, ಕುದ್ಮುಲ್‌ ರಂಗರಾವ್‌ ಹಾಗೂ ಇನ್ನಿತರರ ಆಶಯಗಳನ್ನು ನನಸು ಮಾಡಬೇಕಿದೆ ಎಂದರು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಎ.ದೇವದಾಸ್‌ ಮಾತನಾಡಿ, ಇಂದು ಕೆಲವು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆಗಳನ್ನು ಮಾಡಿದ್ದರೂ, ಒಟ್ಟಾರೆ ಮಹಿಳೆಯರ ಸ್ಥಿತಿ ಶೋಚನೀಯವಾಗಿದೆ. ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಮಹಿಳಾ ಸಮುದಾಯದ ನೈಜ ಕನಸುಗಳಾದ ಸ್ವಾತಂತ್ರ್ಯ , ಸಮಾನತೆ ಮತ್ತು ಗೌರವಯುತ ಜೀವನ ನನಸಾಗದೆಯೇ ಉಳಿದಿದೆ ಎಂದರು.

ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಪಡೆಯುತ್ತಿರುವ ಆರ್ಥಿಕ ಪ್ರತಿಫಲ ಅತ್ಯಂತ ನಿಕೃಷ್ಟವಾಗಿದೆ. ಇವರು ಸಲ್ಲಿಸುವ ಸೇವೆ ಹೆಸರಿನ “ದುಡಿಮೆಗೆ’, ಗರಿಷ್ಠ ಶ್ರಮ ಮತ್ತು ಸಮಯ ವಿನಿಯೋಗವಾದರೂ ಈ ಹೆಣ್ಣುಮಕ್ಕಳು ಕಾರ್ಮಿಕರಲ್ಲ. ಇವರುಗಳನ್ನು ಕಾರ್ಮಿಕರೆಂದು ಪರಿಗಣಿಸಿ ಅವರಿಗೆ ಜೀವನ ನಡೆಸಲು ಗೌರವಧನ-ಪ್ರೋತ್ಸಾಹಧನದ ಬದಲಾಗಿ ಕನಿಷ್ಟ ಮಾಸಿಕ ವೇತನವನ್ನು ಸರ್ಕಾರಗಳು ನೀಡಬೇಕಾಗಿದೆ ಎಂದರು.

ಎಐಎಂಎಸ್‌ಎಸ್‌ನ ಜಿಲ್ಲಾ ಕಾರ್ಯದರ್ಶಿ ಈಶ್ವರಿ ಅಧ್ಯಕ್ಷತೆ ವಹಿಸಿದ್ದರು. ಗೀತಾ, ಪದ್ಮಾ, ಗಿರಿಜ, ವಿದ್ಯಾ, ಭಾರ್ಗವಿ, ರೇಷ್ಮಾ ಸೇರಿದಂತೆ ಹಲವಾರು ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.