ರತಿ-ಮನ್ಮಥರನ್ನು ನಗಿಸಿದರೆ 1.5 ಲಕ್ಷ ರೂ. ಬಹುಮಾನ

ಆರು ದಶಕಗಳಿಂದ ಯಾರಿಗೂ ಸಿಕ್ಕಿಲ್ಲ ಬಹುಮಾನ.!

Team Udayavani, Mar 9, 2020, 4:18 PM IST

ರತಿ-ಮನ್ಮಥರನ್ನು ನಗಿಸಿದರೆ 1.5 ಲಕ್ಷ ರೂ. ಬಹುಮಾನ

ರಾಣಿಬೆನ್ನೂರ: ಹಾವೇರಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೋಳಿ ಹಬ್ಬದ ನಿಮಿತ್ತ ರತಿ-ಕಾಮನ ಮೂರ್ತಿ ಪ್ರತಿಷ್ಠಾಪಿಸುವುದು. ಹಲಗೆ ಭಾರಿಸುವುದು, ಓಕುಳಿ ಆಡುವುದು ಸಾಮಾನ್ಯ. ಆದರೆ, ಜಿಲ್ಲೆಯ ರಾಣಿಬೆನ್ನೂರು ಸೇರಿದಂತೆ ಇನ್ನೂ ಕೆಲವಡೆ ಜೀವಂತ ಕಾಮ-ರತಿಯರ್ನನೇ ಕೂಡಿಸಿ ಅವರನ್ನು ನಗಿಸುವ ಸ್ಪರ್ಧೆ ಏರ್ಪಡಿಸುವುದು ವಿಶೇಷ.

ಇಲ್ಲಿ ರತಿ-ಕಾಮನ ಪಾತ್ರದಲ್ಲಿ ಕುಳಿತವರು ಗಂಭೀರವಾಗಿರುತ್ತಾರೆ. ಯಾರೂ ಏನೇ ಹೇಳಿದರೂ ತುಟಿ ಪಿಟಿಕಿಸಲ್ಲ. ಮೊಗದಲ್ಲಿ ಸಣ್ಣದೊಂದು ಮುಗುಣ್ನಗೆ ಸಹ ಬರದಂತೆ ಪ್ರತಿಜ್ಞೆ ಮಾಡಿಕೊಂಡವರ ರೀತಿ ಕುಳಿತಿರುತ್ತಾರೆ. ಕಾಮ-ರತಿಯರನ್ನು ನಗಿಸಿದವರಿಗೆ 1.5 ಲಕ್ಷ ರೂ. ವರೆಗೂ ಬಹುಮಾನ ಇಡಲಾಗಿರುತ್ತದೆ. 61 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿರುವ ಈ ಸಂಪ್ರದಾಯದಲ್ಲಿ ಈ ವರೆಗೂ ಕಾಮ ರತಿಯರನ್ನು ನಗಿಸಿ ಬಹುಮಾನ ಪಡೆಯುವ ಅದೃಷ್ಟ ಯಾರಿಗೂ ಒಲಿದಿಲ್ಲ ಎನ್ನುವುದೇ ಅಚ್ಚರಿ ಸಂಗತಿ.

ಇಲ್ಲಿನ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದ ಸಮಿತಿ, ಶ್ರೀ ಶಕ್ತಿ ಯುವಕ ಸಂಘ, ವೀರೆಂದ್ರ ಡ್ರೆಸ್‌ಲ್ಯಾಂಡ್‌ ವಿವಿಧ ಸಂಘ ಸಂಸ್ಥೆಗಳು ಕಳೆದ 61 ವರ್ಷಗಳಿಂದ ಜೀವಂತ ರತಿ ಕಾಮಣ್ಣರನ್ನು ಕೂಡಿಸುವ ಪದ್ಧತಿ ಬೆಳೆದು ಬಂದಿದ್ದು, ಇವರನ್ನು ನಗಿಸಲು ಸಾರ್ವಜನಿಕರು ದ್ವಂದ್ವಾರ್ಥದ ಸಂಭಾಷಣೆಗಳು, ಅಂಗ ಚೇಷ್ಟೆಗಳು, ಪೋಲಿ ಮಾತುಗಳು, ಬೈಗುಳಗಳು ಹಾಗೂ ಹಾಸ್ಯ ಚಟಾಕಿಗಳ ಮೂಲಕ ಪ್ರಯತ್ನಿಸಿದರೂ ತುಟಿ ಬಿಚ್ಚುವುದಿಲ್ಲ. ನಗಿಸಲು ಬಂದವರು ಬಂದ ದಾರಿಗೆ ಸುಂಕವಿಲ್ಲ ಎಂದು ಮರಳುತ್ತಾರೆ.

ನಿಜಕ್ಕೂ ಇದೊಂದು ದಾಖಲೆಯಾಗಿ ಮುಂದುವರೆದಿದೆ. ಇದರ ಮರ್ಮವನ್ನು ಅರಿಯಲು ಸ್ಥಳೀಯ ಜನತೆ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಗಳಿಂದ ಸಾಕಷ್ಟು ಜನ ನಗಿಸಲು ಬಂದವರು ಬಂದ ದಾರಿಗೆ ಸುಂಕವಿಲ್ಲವೆಂದು ಬರಿಗೈಯಲ್ಲಿ ಹಿಂದಿರುಗಿದ್ದಾರೆ. ನಗಿಸಲು ಎಲ್ಲ ವಿಧದ ಮಿಮಿಕ್ರಿ, ಹಾಸ್ಯಮಯ ಮಾತುಗಳನ್ನಾಡಿದರೂ ನಗಿಸಲು ಸಾಧ್ಯವಾಗಲಿಲ್ಲ. ಇದೇ ರೀತಿ ರಾಜ್ಯದ ವಿವಿಧ ಭಾಗಗಳಿಂದ ಹಾಸ್ಯ ಕಲಾವಿದರು ನಗಿಸಲು ಬಂದು ಸೋತು ಸುಣ್ಣವಾಗಿದ್ದು ಸುಳ್ಳಲ್ಲ. 22 ವರ್ಷಗಳಿಂದ ಕಾಮನ ವೇಷವನ್ನು 42 ವರ್ಷದ ಗದಿಗೆಪ್ಪ ರೊಡ್ಡನವರ ಹಾಗೂ ರತಿ ವೇಷದಲ್ಲಿ 32ರ ವರ್ಷದ ಕುಮಾರ ಹಡಪದ ಯಶಸ್ವಿಯಾಗಿ ನಿರ್ವಹಿಸುತ್ತ ಬಂದಿದ್ದಾರೆ. ಉಳಿದ ದಿನಗಳಲ್ಲಿ ಇವರಿಬ್ಬರೂ ಸಾಕಷ್ಟು ಹಾಸ್ಯಪ್ರಜ್ಞೆ ಹೊಂದಿದ್ದು, ರತಿ ಮನ್ಮಥರಾದಾಗ ಪರಕಾಯ ಪ್ರವೇಶ ಮಾಡಿದಂತೆ ಗಂಭೀರವದನರಾಗಿ ಕುಳಿತುಕೊಳ್ಳುವ ಪರಿಸಾರ್ವಜನಿಕರಿಗೆ ಕುತೂಹಲ ಮೂಡಿಸುವ ಜತೆ ಅಚ್ಚರಿ ಉಂಟು ಮಾಡುತ್ತದೆ. ಇದರ ನಿಗೂಢತೆ 61 ವರ್ಷಗಳಿಂದ ರಹಸ್ಯವಾಗಿಯೇ ಉಳಿದು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.

ಸಾಮಾನ್ಯವಾಗಿ ಹೋಳಿ ಹಬ್ಬದ ಆಚರಣೆ ವೇಳೆ ಗೊಂಬೆಯ ಇಲ್ಲವೇ ಮಣ್ಣಿನ ರತಿ ಮನ್ಮಥರನ್ನು ಕೂಡಿಸುವುದನ್ನು ಕಾಣುತ್ತೇವೆ. ಆದರೆ, ಪಟ್ಟಣದಲ್ಲಿ ಜೀವಂತ ರತಿ ಮನ್ಮಥರನ್ನು ಕೂಡಿಸುತ್ತಿದ್ದು, ಇವರು ಸಾಮಾನ್ಯರಲ್ಲ, ತಾವು ನಗದೆ ನಗಿಸಲು ಬಂದವರನ್ನು ನಗಿಸದೇ ಬಿಡುವುದಿಲ್ಲ. ಪ್ರತಿ ವರ್ಷ ಸಂಜೆ 7 ಗಂಟೆಗೆಯಿಂದ ರಾತ್ರಿ 1 ಗಂಟೆ ವರೆಗೆ ಕುಳಿತುಕೊಳ್ಳುತ್ತಾರೆ. ಯಾರಿಂದಲೂ ಇವರನ್ನು ನಗಿಸಲಾಗಿಲ್ಲ. ಈ ವರ್ಷ ಸಂಘಟಕರು 1.5 ಲಕ್ಷ ಮತ್ತು ವಿವಿಧ ಸಂಘ ಸಂಸ್ಥೆಗಳು ನಗದು ರೂಪದಲ್ಲಿ ಬಹುಮಾನ ನೀಡಲು ಈ ಬಾರಿ ಘೋಷಿಸಿದ್ದು. 61ನೇ ವರ್ಷದಲ್ಲಾದರೂ ಇವರನ್ನು ನಗಿಸಿ ದಾಖಲೆ ಮುರಿಯುವರೇ ಕಾದು ನೋಡಬೇಕಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ವೀಕ್ಷಿಸಲು ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ.

 

ಮಂಜುನಾಥ ಎಚ್‌ ಕುಂಬಳೂರ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.