ಬಿಜೆಪಿ-ಬಿಎಸ್‌ವೈ= ಶೂನ್ಯ; ಕಾಂಗ್ರೆಸ್‌-ಸಿದ್ದರಾಮಯ್ಯ= ಶೂನ್ಯ


Team Udayavani, Mar 10, 2020, 3:08 AM IST

15mandi

ವಿಧಾನ ಪರಿಷತ್ತು: ರಾಜಕೀಯ ನಾಯಕರಿಲ್ಲದಿದ್ದರೆ, ವಿವಿಧ ಪಕ್ಷಗಳಿಗೆ ಆವರಿಸಬಹುದಾದ “ಶೂನ್ಯ’ದ ಮೇಲಿನ ಸ್ವಾರಸ್ಯಕರ ಚರ್ಚೆಗೆ ಸೋಮವಾರ ಮೇಲ್ಮನೆ ವೇದಿಕೆಯಾಯಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಭಾಷಣ ದಲ್ಲಿ “ಯಡಿಯೂರಪ್ಪ ಇಲ್ಲದ ಬಿಜೆಪಿ ಶೂನ್ಯ’ ಎಂದು ಪ್ರತಿಪಕ್ಷದ ನಾಯಕ ಎಸ್‌.ಆರ್‌. ಪಾಟೀಲ, ಈ ಚರ್ಚೆಗೆ ಪೀಠಿಕೆ ಹಾಕಿದರು.

ಇದಕ್ಕೆ ದನಿ ಗೂಡಿಸಿದ ಜೆಡಿಎಸ್‌ ಸದಸ್ಯ ಬಸವರಾಜ ಹೊರಟ್ಟಿ, “ಮೌನವಾಗಿರುವುದು ನೋಡಿ ದರೆ, ಒಪ್ಪಿಕೊಂಡಂತಿದೆ’ ಎಂದು ಆಡಳಿತ ಪಕ್ಷದ ಮೌನವನ್ನು ಕೆಣಕಿದರು. ಇದು ಕಿಡಿ ಹೊತ್ತಿಕೊಳ್ಳಲು ಕಾರಣವಾಯಿತು. ತಕ್ಷಣ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, “ಯಡಿಯೂರಪ್ಪ ಒಂದು ದೈತ್ಯಶಕ್ತಿ. ಅವರಿಲ್ಲದಿದ್ದರೆ ಬಿಜೆಪಿ ಶೂನ್ಯ ಎಂದು ನಾವು ಒಪ್ಪಿಕೊಂಡರೆ, ಸಿದ್ದ ರಾಮಯ್ಯ ಇಲ್ಲದಿದ್ದರೆ, ಕಾಂಗ್ರೆಸ್‌ ಶೂನ್ಯ ಎಂದು ನೀವು ಒಪ್ಪಿಕೊಳ್ಳುವಿರಾ?’

ಎಂದು ಕೇಳಿದರು. ಮತ್ತೂಬ್ಬರು “ಎಚ್‌.ಡಿ. ದೇವೇ ಗೌಡ ಅಥವಾ ಕುಮಾರಸ್ವಾಮಿ ಇಲ್ಲದಿದ್ದರೆ, ಜೆಡಿಎಸ್‌ ಶೂನ್ಯ ಎಂದು ಒಪ್ಪಿಕೊಳ್ಳುವಿರಾ’ ಎಂದು ಕೇಳಿದರು. ಮಧ್ಯ ಪ್ರವೇಶಿಸಿದ ಜೆಡಿಎಸ್‌ ಸದಸ್ಯ ಬೋಜೇ ಗೌಡ, “ಬಿಜೆಪಿ-ಬಿಎಸ್‌ವೈ= 0′ ಸರಿಯೋ ತಪ್ಪೋ ಹೇಳಿ ಎಂದಷ್ಟೇ ಹೇಳುವಂತೆ ಲೆಕ್ಕ ಕೇಳಿದರು. ಆಗ ಪ್ರಾಣೇಶ್‌, “ನೀವು (ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ) ಎಸ್‌.ಆರ್‌. ಪಾಟೀಲ, ಬಸವರಾಜ ಹೊರಟ್ಟಿ ಅವ ರನ್ನು ಈ ಹಿಂದಿನ ಸರ್ಕಾರದಲ್ಲಿ ಸಂಪುಟದಿಂದ ಕೈಬಿಟ್ಟು ಝೀರೋ ಮಾಡಲಿಲ್ಲವೇ?’ ಎಂದು ಕಾಲೆಳೆದರು.

ಮುಂದುವರಿದು, “ಸೋನಿಯಾ ಗಾಂಧಿ ಇಲ್ಲದಿದ್ದರೆ, ಕಾಂಗ್ರೆಸ್‌ ಶೂನ್ಯ ಎಂದು ಹೇಳಬಹುದಾ? ಅಷ್ಟಕ್ಕೂ ಆಯಾ ಕಾಲ ಘಟ್ಟದಲ್ಲಿ ನಮ್ಮ ಪಕ್ಷದಲ್ಲಿ ಯಾವಾಗಲೂ ಒಬ್ಬೊಬ್ಬ ಹೀರೋ ಅನ್ನು ನೋಡ ಬಹುದು. ಈ ಹಿಂದೆ ವಾಜಪೇಯಿ ಹೀರೋ ಆಗಿದ್ದರು. ಈಗ ಮೋದಿ, ಯಡಿ ಯೂರಪ್ಪ ಹೀರೋ ಆಗಿದ್ದಾರೆ. ನಮ್ಮಲ್ಲಿ ಝೀರೋ ಇಲ್ಲವೇ ಇಲ್ಲ’ ಎಂದು ತಿರುಗೇಟು ನೀಡಿದರು.

ದನಿಗೂಡಿಸಿದ ಬಿಜೆಪಿ ಸದಸ್ಯ ಲೆಹರ್‌ ಸಿಂಗ್‌, “ಕಾಂಗ್ರೆಸ್‌ನಲ್ಲಿದ್ದರೆ ಝೀರೋ ಆಗ್ತಾರೆ. ಅವರೇ ಆಚೆಗೆ ಬಂದ್ರೆ ಹೀರೋ ಆಗ್ತಾರೆ’ ಎಂದು ಚಟಾಕಿ ಹಾರಿಸಿದರು. ಈ ವೇಳೆ ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕ ಟೇಶ್‌ ಮಾತನಾಡಿ, “ಇದು (ಬಿಜೆಪಿ ಸರ್ಕಾರ) ಅಲ್ಪಾಯುಷಿ ಮಗು. ಎಲ್ಲ ವನ್ನೂ ಬೇಗ ಅನುಭವಿಸಿ ಬಿಡಿ’ ಎಂದು ಆಡಳಿತ ಪಕ್ಷಕ್ಕೆ ಸಲಹೆ ಮಾಡಿದರು.

15 ಮಂದಿ ಬಿಜೆಪಿ ಕಚೇರಿಯಲ್ಲಿ ಕಸ ಹೊಡೆದಿದ್ರಾ?
ವಿಧಾನಸಭೆ: ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಿದ 15 ಮಂದಿ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿದ್ರಾ? ಸಂವಿಧಾನ ಕುರಿತ ಚರ್ಚೆಯಲ್ಲಿ ಕಾಂಗ್ರೆಸ್‌ನ ಡಾ.ಜಿ.ಪರಮೇಶ್ವರ್‌ ಪಾಲ್ಗೊಂಡು ಮಾತ ನಾಡುವಾಗ ಕೆ.ಎಸ್‌. ಈಶ್ವರಪ್ಪ ಅವರಿಗೆ ಎಚ್‌.ಕೆ.ಪಾಟೀಲ್‌ ಕೇಳಿದ ಪ್ರಶ್ನೆಯಿದು.

ಡಾ.ಜಿ.ಪರಮೇಶ್ವರ್‌ ಮಾತನಾಡುವಾಗ, “ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯು ಒಂದೇ ಒಂದು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಡ ಲಿಲ್ಲ’ ಎಂದು ಹೇಳಿದರು. ಆಗ, ಗೃಹ ಸಚಿವ ಬಸವರಾಜ ಬೊಮ್ಮಾಯಿ, “ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಮ್ತಾಜ್‌ ಅಲಿ ಖಾನ್‌ ಅವರಿಗೆ ಪರಿಷತ್‌ ಸದಸ್ಯರನ್ನಾಗಿ ಮಾಡಿ, ಮಂತ್ರಿ ಮಾಡಿದ್ದರು’ ಎಂದು ನೆನಪಿಸಿದರು.

ಕೆ.ಎಸ್‌.ಈಶ್ವರಪ್ಪ ಅವರು, ನನ್ನ ಕ್ಷೇತ್ರ ಶಿವಮೊಗ್ಗದಲ್ಲಿ 12 ಮುಸ್ಲಿಂ ಬೂತ್‌ಗಳಿವೆ. 1989 ರಲ್ಲಿ ನಾನು ಚುನಾವಣೆಗೆ ನಿಂತು ಗೆದ್ದಾಗಲೂ ನನಗೆ ಒಂದೇ ಒಂದು ಮತ ಹಾಕಿರಲಿಲ್ಲ. ಮೂರ್‍ನಾಲ್ಕು ಚುನಾವಣೆಗಳಲ್ಲೂ ನನಗೆ ಮತ ಬರಲಿಲ್ಲ, ಆದರೂ ನಾನು ಆ ಸಮುದಾಯದವರು ಸಮಸ್ಯೆ ಹೇಳಿಕೊಂಡು ಬಂದಾಗ ಪರಿಹಾರ ಕಲ್ಪಿಸುತ್ತಿದ್ದೆ. ನನ್ನ ಪ್ರಯತ್ನ ನಾನು ಮಾಡುತ್ತಿದ್ದೆ, ಕಳೆದ ಚುನಾವಣೆಯಲ್ಲಿ 362 ಮತ ಬಂದಿದೆ. ಕಾಂಗ್ರೆಸ್‌ನವರು ಬಿಜೆಪಿಗೆ ಬಗ್ಗೆ ಅಪಪ್ರಚಾರ ಮಾಡಿದ್ದರಿಂದ ಅವರು ನಮ್ಮತ್ತ ಬರುತ್ತಿರಲಿಲ್ಲ, ಆದರೆ, ಅವರಿಗೆ ವಾಸ್ತವ, ಸತ್ಯ ಗೊತ್ತಾದ ಮೇಲೆ ಬಂದೇ ಬರುತ್ತಾರೆ ಎಂದರು.

ಆಗ, ಪರಮೇಶ್ವರ್‌, ನೀವೇ ಮುಸ್ಲಿಂ ಸಮುದಾಯದವರಿಗೆ ಬಿಜೆಪಿ ಟಿಕೆಟ್‌ ಬೇಕು ಎಂದರೆ ಬಿಜೆಪಿ ಕಚೇರಿಯಲ್ಲಿ ನಾಲ್ಕೈದು ವರ್ಷ ಕಸ ಗುಡಿಸಬೇಕು ಎಂದು ಹೇಳಿದ್ದೀರಿ ಎಂದು ನೆನಪಿಸಿದರು. ಹೌದು, ನಾನು ಹೇಳಿದ್ದೆ ಎಂದು ಈಶ್ವರಪ್ಪ ಸಮರ್ಥಿಸಿಕೊಂಡು ಮುಸ್ಲಿಂರಷ್ಟೇ ಅಲ್ಲ ಯಾರಿಗೆ ಟಿಕೆಟ್‌ ಬೇಕಾದರೂ ಕಸ ಹೊಡೆಯಬೇಕಾಗುತ್ತದೆ ಎಂದರು.

ಆಗ, ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌, ಉಪ ಚುನಾವಣೆಯಲ್ಲಿ 15 ಮಂದಿಗೆ ಟಿಕೆಟ್‌ ಕೊಟ್ಟಿàರಲ್ಲಾ, ಅವರೆಲ್ಲಾ ಕಸ ಗುಡಿಸಿದ್ರಾ ಎಂದು ಪ್ರಶ್ನಿಸಿದರು. ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ ಧ್ವನಿಗೂಡಿಸಿರು. ಆಗ ಈಶ್ವರಪ್ಪ, ಈಗ ಕಸ ಗುಡಿಸುತ್ತಾರೆ. ಕಸ ಹೊಡೆಯುವುದು ಎಂದರೆ ಪೊರಕೆ ಹಿಡಿಯುವುದಲ್ಲ, ಪಕ್ಷ ಕಟ್ಟುವ ಕೆಲಸ ಮಾಡುವುದು ಎಂದರು. ಆಗ, ಪರಮೇಶ್ವರ್‌, ಈಗ ಕಸ ಗುಡಿಸುತ್ತೀರಾ? ಹಾಗಾದರೆ ಸರಿ ಎಂದು ಲೇವಡಿ ಮಾಡಿದರು. ಸಚಿವ ಬೈರತಿ ಬಸವರಾಜ್‌ ಮಾತನಾಡಿ, ನಾವು ಕಸ ಹೊಡೆಯಲು ರೆಡಿ ಇದ್ದೇವೆ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.