ಮೀಸೆ ತಿಮ್ಮಯ್ಯರ ಕರ್ತವ್ಯಪ್ರಜ್ಞೆ ಸ್ಫೂರ್ತಿ


Team Udayavani, Mar 10, 2020, 3:07 AM IST

meese-timma

ಬೆಂಗಳೂರು: ತಾಯಿ, ಮಗಳನ್ನು ರಕ್ಷಿಸುವ ಯತ್ನದಲ್ಲಿ ಲಾರಿ ಅಡಿ ಸಿಲುಕಿ ಮಡಿದ ಸಂಚಾರ ವಿಭಾಗದ ಹೆಡ್‌ಕಾನ್‌ಸ್ಟೆಬಲ್‌ ಮೀಸೆ ತಿಮ್ಮಯ್ಯ ಅವರ ಕರ್ತವ್ಯ ಪ್ರಜ್ಞೆ ನಿಜವಾಗಲೂ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜನರಲ್‌ ಪೋಸ್ಟ್‌ ಆಫೀಸ್‌ ವೃತ್ತದ ಬಳಿ ಸೋಮವಾರ ಬೆಳಗ್ಗೆ ಆಯೋಜಿಸಿದ್ದ ಮೀಸೆ ತಿಮ್ಮಯ್ಯ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1995ರ ಆಗಸ್ಟ್‌ನಲ್ಲಿ ಜಿಪಿಒ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ವೇಗವಾಗಿ ಬಂದ ಲಾರಿ ವಿದೇಶಿ ಮಹಿಳೆ ಹಾಗೂ ಆಕೆಯ ಮಗಳಿಗೆ ಡಿಕ್ಕಿ ಹೊಡೆಯವುದರಲ್ಲಿತ್ತು. ಅದನ್ನು ಕಂಡು ಕಾರ್ಯ ಪ್ರವೃತ್ತರಾದ ತಿಮ್ಮಯ್ಯ ಅವರಿಬ್ಬರನ್ನು ರಕ್ಷಿಸಲು ಹೋದಾಗ ಅದೇ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

ಕರ್ತವ್ಯ ನಿರ್ವಹಣೆಯಲ್ಲಿ ಜೀವ ಉಳಿಸಿ ಪ್ರಾಣ ತ್ಯಾಗ ಮಾಡಿದ ಮೀಸೆ ತಿಮ್ಮಯ್ಯ ನೆನಪಿನಲ್ಲಿ ಜಿಪಿಒ ವೃತ್ತಕ್ಕೆ ಪೊಲೀಸ್‌ ತಿಮ್ಮಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿತ್ತು. ಇದೀಗ ಪುತ್ಥಳಿ ನಿರ್ಮಿಸುವ ಮೂಲಕ ಅವರ ಕಾರ್ಯವನ್ನು ಮತ್ತೂಮ್ಮೆ ಶ್ಲಾ ಸುತ್ತಿದ್ದೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೀಸೆ ತಿಮ್ಮಯ್ಯ ಅವರ ಕುರಿತ ಪುಸ್ತಕ ಬಿಡುಗಡೆ ಮಾಡಲಾಯಿತು ಹಾಗೂ ಮೀಸೆ ತಿಮ್ಮಯ್ಯ ಅವರ ಪತ್ನಿ ಲಕ್ಷ್ಮಿದೇವಿ ಹಾಗೂ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.

ಉದ್ಯಾನ ಲೋಕಾರ್ಪಣೆ: ನಗರದ ಸೆಂಟ್‌ ಮಾರ್ಕ್ಸ್ ರಸ್ತೆಯಲ್ಲಿರುವ ಎಸ್‌ಬಿಐ ವೃತ್ತದಲ್ಲಿ ನೂತನವಾಗಿ ನವೀಕೃತಗೊಂಡ ಮಕ್ಕಳ ಸಂಚಾರ ಪೊಲೀಸ್‌ ಉದ್ಯಾನವನವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಯಾವ ನಗರದಲ್ಲಿ ಉತ್ತಮವಾದ ಸಂಚಾರ ಇರುತ್ತದೆಯೋ? ಅಂತಹ ನಗರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೆ.

ರಾತ್ರಿ ಸಮಯದಲ್ಲಿ ಸಂಚಾರ ನಿಯಂತ್ರಿಸುವುದು ಹಾಗೂ ಮಹಿಳಾ ಸುರಕ್ಷತೆ ಬಗ್ಗೆ ನಿಗಾ ವಹಿಸುವುದು ಮಹತ್ವದ್ದಾಗಿದೆ. ಮಹಿಳಾ ಸುರಕ್ಷತೆಗಾಗಿ ಈಗಾಗಲೇ ಸರ್ಕಾರ 75 ಪಿಂಕ್‌ ಹೊಯ್ಸಳ ತರಲು ತೀರ್ಮಾನಿಸ ಲಾಗಿದ್ದು, ಮಹಿಳೆಯರು ಹೆಚ್ಚಾಗಿ ಕೆಲಸ ಮಾಡುವ ಪ್ರದೇಶದಲ್ಲಿ ಪಿಂಕ್‌ ಹೊಯ್ಸಳ ಗಸ್ತು ಹೆಚ್ಚಿಸ ಲಾಗುವುದು ಎಂದು ಹೇಳಿದರು. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಿದ ಮಕ್ಕಳ ಸಂಚಾರ ಪೊಲೀಸ್‌ ಉದ್ಯಾನವನ ಇದಾಗಿದ್ದು, ಸಂಚಾರ ನಿಯಮದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿ ಸಲು ಇದು ಸಹಕಾರಿಯಾಗಿದೆ.

ಮುಂದಿನ ದಿನಗಳಲ್ಲಿ ಇಂತಹ ಪಾರ್ಕ್‌ಗಳನ್ನು ಇನ್ನಷ್ಟು ಕಡೆಗಳಲ್ಲಿ ನಿರ್ಮಿಸಲು ಚಿಂತೆನೆ ನಡೆಸಲಾಗಿದೆ ಎಂದು ಭರವಸೆ ನೀಡಿದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ 12 ವಲಯಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶಗಳ ಸಂಚಾರ ದಟ್ಟಣೆ ನಿಯಂತ್ರಿಸಿ ಪಾರ್ಕಿಂಗ್‌ ಪ್ರದೇಶ ಸೇರಿ ಹಲವು ಸೌಲಭ್ಯ ಕಲ್ಪಿಸಿ, ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸುವುದು ಸಂಚಾರ ಪೊಲೀರಿಗೆ ಸವಾಲಾಗಿದೆ.

ಸದ್ಯದಲ್ಲೇ ವೈಟ್‌ಫೀಲ್ಡ್‌ನಲ್ಲಿ ಸಂಚಾರ ಉಪ ವಿಭಾಗ ಆರಂಭವಾಗಲಿದೆ. ಅಲ್ಲಿಗೆ ಅಗತ್ಯವಿರುವ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸದ್ಯದಲ್ಲೇ ನೇಮಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಜಂಟಿ ಪೊಲೀಸ್‌ ಆಯುಕ್ತ ಡಾ ಬಿ.ಆರ್‌.ರವಿಕಾಂತೇಗೌಡ, ಪೂರ್ವ ಸಂಚಾರ ವಿಭಾಗದ ಡಿಸಿಪಿ ಎಂ.ನಾರಾಯಣ, ವಾಸ್ವನಿ ಗ್ರೂಪ್‌ನ ಅಧ್ಯಕ್ಷ ಅರುಣ್‌ ಅದ್ವಾನಿ, ಫೋರ್ಟಿಸ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ಪ್ರಿಯಾ ಶ್ರೀಧರನ್‌, ಪ್ರವೀಣ್‌ ವಾಲಿ ಇತರರು ಇದ್ದರು.

ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ: ಸಂಚಾರ ನಿಯಮಗಳನ್ನು ಅರ್ಥಮಾಡಿಕೊಂಡು ಅನುಸರಿಸುವಂತೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ, ರಸ್ತೆಯಲ್ಲಿ ಸುರಕ್ಷೆತೆಯನ್ನು ಪಾಲಿಸುವ ಕೌಶಲ್ಯ ಬೆಳೆಸಲು ರಸ್ತೆಗಳ ಮಾರ್ಕಿಂಗ್‌ಗಳು ಮತ್ತು ಮಾಹಿತಿ ಚಿಹ್ನೆಗಳು, ಸಿಗ್ನಲ್‌ ಲೈಟುಗಳು, ಎಚ್ಚರಿಕೆ ನೀಡುವ ಫಲಕಗಳು ಸೇರಿ ಒಟ್ಟಾರೆ ಸಂಚಾರ ನಿಯಮ ಕುರಿತು ಜಾಗೃತಿ ಮಾಹಿತಿ ನೀಡಲು ಮಕ್ಕಳ ಪಾರ್ಕ್‌ನಲ್ಲಿ ಪ್ರಾತ್ಯಕ್ಷಿಕೆ ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.