ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ


Team Udayavani, Mar 10, 2020, 3:18 PM IST

bk-tdy-1

ಸಾಂದರ್ಭಿಕ ಚಿತ್ರ

ಬೀಳಗಿ: ಎಲ್ಲ ವಿಧದ ಪಡಿತರ ಚೀಟಿಗಳ ಸದಸ್ಯರು  ಇ-ಕೆವೈಸಿ ಯೋಜನೆಯಡಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ದೃಢಿಕರಣ ಹೊಂದಬೇಕು. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಇ-ಕೆವೈಸಿ ಪ್ರಗತಿ ಕುಂಟುತ್ತ ಸಾಗಿದೆ. ಪರಿಣಾಮ, ನಿತ್ಯವೂ ನೂರಾರು ಪಡಿತರ ಕಾರ್ಡ್‌ದಾರರು ತಮ್ಮ ಕೆಲಸವನ್ನು ಬದಿಗೊತ್ತಿ ಇಡೀ ದಿವಸ ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿ ನಿಲ್ಲುವಂತಾಗಿದೆ.

ಇ-ಕೆವೈಸಿ ಕಡ್ಡಾಯ: ಅಂತ್ಯೋದಯ, ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿ ಹೊಂದಿದ ಎಲ್ಲ ಸದಸ್ಯರು ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸರಕಾರದ ಆದೇಶದಂತೆ ಈಗಾಗಲೇ ಪ್ರತಿ ತಿಂಗಳು 1ರಿಂದ 10ನೇ ದಿನಾಂಕದವರೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿ ಸದಸ್ಯರ ಬಯೋಮೆಟ್ರಿಕ್‌ ದೃಢೀಕರಣ ಆರಂಭವಾಗಿದೆ. ಈ ಮಧ್ಯೆ ತಾಂತ್ರಿಕ ತೊಂದರೆಯಿಂದ ಜನವರಿ 2019ರಂದು ಒಂದು ತಿಂಗಳು ಇ-ಕೆವೈಸಿ ಸ್ಥಗಿತವಾಗಿದೆ.

ಆದರೆ, ಐದು ತಿಂಗಳ ಅವ ಧಿಯಲ್ಲಿ ಇ-ಕೆವೈಸಿ ಅಡಿ ಇದುವರೆಗೆ 20,420 ಪಡಿತರ ಚೀಟಿ ಹಾಗೂ 65,041 ಪಡಿತರ ಸದಸ್ಯರು ಬಯೋಮೆಟ್ರಿಕ್‌ ದೃಢೀಕರಣ ಹೊಂದಿದ್ದಾರೆ. ಅಂದರೆ ಶೇ. 61.47ರಷ್ಟು ಪಡಿತರ ಚೀಟಿ ಹಾಗೂ ಶೇ. 57.79ರಷ್ಟು ಪಡಿತರ ಸದಸ್ಯರ ಇ-ಕೆವೈಸಿ ಪ್ರಗತಿಯಾಗಿದೆ. ಇನ್ನು ಶೇ. 40 ಪಡಿತರ ಚೀಟಿ ಹಾಗೂ ಶೇ. 43ರಷ್ಟು ಪಡಿತರ ಸದಸ್ಯರು ಇ-ಕೆವೈಸಿ ಹೊಂದಬೇಕಿದೆ. ಇಲ್ಲದಿದ್ದರೆ ಅಂತವರ ಪಡಿತರ ಚೀಟಿಗೆ ಆಹಾರ ಧಾನ್ಯ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎನ್ನುವ ಆಹಾರ ಇಲಾಖೆಯ ಆತಂಕ ಪಡಿತರದಾರರನ್ನು ಕಾಡುತ್ತಿದೆ.

ಹೀಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಮುಗಿಬಿದ್ದಿರುವ ಪಡಿತರದಾರರು ಬಯೋಮೆಟ್ರಿಕ್‌ ದೃಢಿಕರಣಕ್ಕೆ ದುಂಬಾಲು ಬಿದ್ದಿದ್ದಾರೆ. ಆದರೆ, ಸರ್ವರ್‌ ಸಮಸ್ಯೆಗೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಪಡಿತರದಾರರು ಸುಸ್ತೋ..ಸುಸ್ತು. ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ನಿತ್ಯ ಹತ್ತಾರು ಕಾರ್ಡ್‌ದಾರರು ದೃಢಿಕರಣ ಹೊಂದಲು ಆಗುತ್ತಿಲ್ಲ.

ಇ-ಕೆವೈಸಿಯಲ್ಲಿ ಬೀಳಗಿ ದ್ವಿತೀಯ: ಪಟ್ಟಣದಲ್ಲಿ 260 ಅಂತ್ಯೋದಯ, ಗ್ರಾಮೀಣ 4521 ಹಾಗೂ ಪಟ್ಟಣದಲ್ಲಿ ಬಿಪಿಎಲ್‌ 3264 ಹಾಗೂ ಗ್ರಾಮೀಣ 25173 ಮತ್ತು ಪಟ್ಟಣದಲ್ಲಿ ಎಪಿಎಲ್‌ 649 ಹಾಗೂ ಗ್ರಾಮೀಣ ಭಾಗದಲ್ಲಿ 7262 ಸೇರಿತಾಲೂಕಿನಾದ್ಯಂತ ಒಟ್ಟು 36,956 ಪಡಿತರ ಚೀಟಿ ಮತ್ತು 1,12,549 ಪಡಿತರ ಸದಸ್ಯರಿದ್ದಾರೆ. ಇನ್ನು, 16,536 ಪಡಿತರ ಚೀಟಿ ಮತ್ತು 47,508 ಪಡಿತರ ಸದಸ್ಯರು ಇ-ಕೆವೈಸಿ ಹೊಂದಬೇಕಿದೆ ಎಂದು ಆಹಾರ ನಿರೀಕ್ಷಕ ಎಂ.ಎಸ್‌.ಹುರಕಡ್ಲಿ ತಿಳಿಸಿದ್ದಾರೆ.

ಶೇ. 61.47 ಸಾಧನೆ ಮಾಡುವ ಮೂಲಕ ಇ-ಕೆವೈಸಿ ಪ್ರಗತಿಯಲ್ಲಿ ತಾಲೂಕು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಶೇ. 63.05 ಸಾಧನೆ ಮಾಡಿದ ಮುಧೋಳ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಸರ್ವರ್‌ ಸಮಸ್ಯೆಯಾಗದಿದ್ದರೆ ಮಾತ್ರ ತ್ವರಿತಗತಿಯಲ್ಲಿ ಇ-ಕೆವೈಸಿ ಪೂರ್ಣಗೊಳ್ಳಲು ಸಾಧ್ಯ. ಇಲ್ಲದಿದ್ದರೆ ಇಲಾಖೆ ಅವಧಿ ವಿಸ್ತರಿಸುವುದು ಅನಿವಾರ್ಯ.

ಪಡಿತರ ಚೀಟಿ ಇ-ಕೆವೈಸಿ ಹೊಂದುವುದು ಕಡ್ಡಾಯ. ಇಲ್ಲದಿದ್ದರೆ ಅಂತಹ ಪಡಿತರ ಚೀಟಿಗೆ ಆಹಾರ ಧಾನ್ಯ ಪೂರೈಕೆ ಸ್ಥಗಿತಗೊಳ್ಳಲಿದೆ. ಸರ್ವರ್‌ ಸಮಸ್ಯೆ ಯಿಂದಾಗಿ ತೊಂದರೆಯಾಗಿದೆ. ಕಾರಣ, ಇ-ಕೆವೈಸಿ ಮಾಡಿಸಿಕೊಳ್ಳಲು ಇನ್ನಷ್ಟು ಅವ ಧಿ ವಿಸ್ತರಿಸಲಾಗುವುದು. ಎಲ್ಲ ಪಡಿತರದಾರರು ಇ-ಕೆವೈಸಿ ಹೊಂದಬೇಕು. ಶ್ರೀಶೈಲ ಕಂಕಣವಾಡಿ, ಉಪನಿರ್ದೇಶಕರು ಆಹಾರ ಇಲಾಖೆ, ಬಾಗಲಕೋಟೆ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.