ಸಂಭ್ರಮ-ವಿಶಿಷ್ಟತೆಯ ಹೋಳಿ
Team Udayavani, Mar 10, 2020, 4:54 PM IST
ಅಂಕೋಲಾ: ಹೋಳಿ ಹಬ್ಬದ ಅಂಗವಾಗಿ ಬ್ರಿಟಿಷ ಆಡಳಿತದಿಂದಲೂ ನಡೆದು ಬಂದ ತಾಲೂಕಿನ ವಿಶೇಷ ಆಕರ್ಷಣೆಯಾದ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತ ಮತ್ತು ವಿವಿಧ ಬಗೆಯ ರೂಪಕಗಳು ನಗರದಲ್ಲಿ ಮೆರವಣಿಗೆ ಮಾಡುವುದರೊಂದಿಗೆ ಸೇರಿದ ಸಾವಿರಾರು ಜನರಿಗೆ ಮನರಂಜನೆ ನೀಡಿ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಮೇಘರಾಜ ನಾಯ್ಕರಿಂದ ತಾಮ್ರ ಪತ್ರ ಪಡೆಯುವ ಮೂಲಕ ಸೋಮವಾರ ಸಂಪನ್ನಗೊಂಡಿತು.
ಪ್ರಮುಖವಾಗಿ ಬೆಳಂಬಾರ ಹಾಲಕ್ಕಿ ಸಮುದಾಯದವರು ಹೋಳಿ ಪ್ರಯುಕ್ತ ನಗರದಲ್ಲಿ ವೇಷ ಭೂಷಣಗಳನ್ನು ಹಾಕಿಕೊಂಡು ಪ್ರತಿನಿತ್ಯ ಸಮಾಜದಲ್ಲಿ ಆಗುಹೊಗುಗಳ ಅಣಕು ಪ್ರದರ್ಶನ ಮಾಡುತ್ತಾರೆ. ಈ ಒಂದು ದಿನ ಮಾತ್ರ ಅವರಿಗೆ ಯಾರ ಕುರಿತು ಅಣಕು ಮಾಡಿದರೂ ಮಾತ್ರ ಯಾವುದೇ ನಿರ್ಬಂಧ ಇರುವುದಿಲ್ಲ. ಸಮಾಜದ ಅನೇಕ ಘಟನೆಗಳನ್ನು ಇವರು ತಮ್ಮ ಅಣಕು ಪ್ರದರ್ಶನದಲ್ಲಿ ಮಾಡತ್ತಾರೆ. ಅಲ್ಲದೆ ವಿವಿಧ ಬಗೆಯ ರೂಪಕವನ್ನು ಮಾಡಿ ಪಟ್ಟಣದಲ್ಲಿ ಸೇರಿದ ಸಾವಿರಾರು ಜನರನ್ನು ರಂಜಿಸುತ್ತಾರೆ. ಇದರ ಜೊತೆಯಲ್ಲಿ ಮರಗಾಲು ವೇಷ, ನಾಡಿನ ಸುಪ್ರಸಿದ್ಧ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತವಂತು ಆಕರ್ಷಣೀಯವಾಗಿ ಮೂಡಿಬಂದಿದೆ.
ಈ ಸಂದರ್ಭದಲ್ಲಿ ಬೆಳಂಬಾರ ಸುಗ್ಗಿ ತಂಡಕ್ಕೆ ಬ್ರಿಟಿಷರ ಕಾಲದಲ್ಲಿ ಕೊಟ್ಟಿರುವ ತಾಮ್ರ ಪತ್ರವನ್ನು ತಹಶೀಲ್ದಾರ್ ಊರಗೌಡರ ಸಮ್ಮುಖದಲ್ಲಿ ತೆರೆದು ಗೌರವ ಸೂಚಿಸಿದರು.
ವಿಶೇಷ ಆಕರ್ಷಣೆ: ಈ ವರ್ಷದ ಅಣಕು ಪ್ರದರ್ಶನದಲ್ಲಿ ನೆರೆ ಹಾವಳಿಯಲ್ಲಿ ನೀರಿನಲ್ಲಿ ಸಿಲುಕಿದ ವೃದ್ಧೆಯನ್ನು ರಕ್ಷಿಸಿದ ಸೈನಿಕರ ತಂಡ, ನೆರೆ ಹಾವಳಿಯಲ್ಲಿ ಮನೆ ಮಠ ಕಳೆದುಕೊಂಡು ಬೀದಿಗೆ ಬಂದ ಸಂತ್ರಸ್ತರು, ಅಮರ ಪ್ರೇಮಿ, ರಾಮ ಸೇತುವೆ ನಿರ್ಮಾಣಕ್ಕೆ ಕಲ್ಲುಗಳನ್ನು ಹೊತ್ತು ತಂದ ವಾನರ ಸೈನ್ಯ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಅಣಕು, ಕೊರೊನಾ ವೈರಸ್ದಿಂದ ಬರುವ ರೋಗ ತಡೆಯಲು ಬಂದ ವೈದ್ಯರ ತಂಡ, ವಿಶೇಷವಾದ ಅವತಾರ್ ಕಿಂಗ್ ಬರ್ಡ್, ಭಾರತದಲ್ಲಿ ಟ್ರಂಪ್ಗೆ ಭರ್ಜರಿ ಸ್ವಾಗತ, ನೆರೆ ಸಂತ್ರಸ್ತರಿಗೆ ಹೆಲಿಕಾಪ್ಟರ್ ನಲ್ಲಿ ಆಹಾರವನ್ನು ನೀಡುತ್ತಿರುವುದು, ಚೆನ್ನಮ್ಮನ ಕೊಟೆಗೆ ನುಗ್ಗಿದ ಬ್ರಿಟಿಷರು, ಕುರುಕ್ಷೇತ್ರ ರಥ, ತಾಲೂಕಿನ ಪದ್ಮಶ್ರೀ ಪ್ರಶಸ್ತಿ ಪಡೆದ ಹಾಲಕ್ಕಿ ಸಮುದಾಯದ ಮಹಿಳೆಯರು, ತಾಲೂಕಿನ ವಿಶೇಷ ಆಕರ್ಷಣೆಯಾದ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತ ಜೊತೆಗೆ ಭಾರಿ ಗಾತ್ರದ ಕರಡಿ ವೇಶ ಅನೇಕ ರೂಪಕಗಳು ಕಂಡುಬಂದವು.
-ಅರುಣ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ