ರಮೇಶ್ಕುಮಾರ್ರನ್ನು ಒದ್ದು ಒಳಗೆ ಹಾಕಿ: ಎಚ್.ವಿಶ್ವನಾಥ್
Team Udayavani, Mar 10, 2020, 7:40 PM IST
ಮೈಸೂರು: “ಮುಸ್ಲಿಮರೆಲ್ಲ ಸಂಘಟಿತರಾಗಿ ಎದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒದ್ದು ದೇಶದಿಂದ ಹೊರಹಾಕಿ’ ಎಂದು ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿಕೊಂಡು, ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನೇ ಯೇಸು, ನಾನೇ ಬಸವೇಶ್ವರ, ನಾನೇ ರಾಮಾನುಜಾಚಾರ್ಯ, ಶಂಕರಾಚಾರ್ಯ’ ಎಂದು ಬೊಗಳೆ ಬಿಡುವ ರಮೇಶ್ಕುಮಾರ್, ಪ್ರಧಾನಿ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಸರ್ಕಾರ ಸುಮ್ಮನೆ ಕೂರದೆ ಪ್ರಕರಣ ದಾಖಲಿಸಿ, ಅವರನ್ನು ಜೈಲಿಗೆ ಹಾಕಬೇಕು. ಸಂವಿಧಾನಬಾಹಿರವಾಗಿ ಮಾತನಾಡುವ ಎಲ್ಲರ ಮೇಲೂ ಪಕ್ಷಾತೀತವಾಗಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಸೀರೆ, ಪಂಚೆ ಕೊಟ್ಟು ಋಣ ತೀರಿಸಬೇಡಿ:
ಎಚ್.ಡಿ.ಕುಮಾರಸ್ವಾಮಿ ಮಗನ ಮದುವೆ ಹೆಸರಲ್ಲಿ ರಾಮನಗರ, ಚನ್ನಪಟ್ಟಣದ ಜನತೆಗೆ ಸೀರೆ, ಪಂಚೆ ಕೊಟ್ಟು ಊಟ ಹಾಕಿಸಿ, ಋಣ ತೀರಿಸುವುದಲ್ಲ. ಜನಪರ ಕಾರ್ಯಕ್ರಮ ಕೊಟ್ಟು ಆ ಜನರ ಋಣ ತೀರಿಸಬೇಕೆಂದು ಸಲಹೆ ನೀಡಿದರು. ಸಚಿವ ಶ್ರೀರಾಮುಲು ಕೂಡ ಬಳ್ಳಾರಿಯಲ್ಲಿ 500, ಸಾವಿರ ಜನರ ಸಾಮೂಹಿಕ ವಿವಾಹ ಮಾಡುವವರು. ಆದರೆ, ತಮ್ಮ ಮಗಳನ್ನು ಬೆಂಗಳೂರಿಗೆ ಕರೆ ತಂದು ಅದ್ಧೂರಿಯಾಗಿ ಮದುವೆ ಮಾಡಿಕೊಡುತ್ತಾರೆ. ಇವರಿಗೆ ಏನು ಹೇಳುವುದು ಎಂದು ಮೂದಲಿಸಿದರು.
ನಾನು, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಆಂಜನೇಯ ಅವರು ನಮ್ಮ ಮಕ್ಕಳಿಗೆ ಸರಳ ವಿವಾಹ ಏರ್ಪಡಿಸಿ ಆದರ್ಶ ಮೆರೆದಿದ್ದೇವೆ ಎಂದು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ