ಬಲವಂತದ ಹಣ ವಸೂಲಿಗೆ ಕಡಿವಾಣ ಹಾಕಲು ಆಗ್ರಹ

ವಾಹನ ಸವಾರರ ನೋವಿಗೆ ಪೊಲೀಸರು ಸ್ಪಂದಿಸಲಿ

Team Udayavani, Mar 11, 2020, 12:15 PM IST

11-March-6

ಮುದ್ದೇಬಿಹಾಳ: ತಾಲೂಕಿನ ಆಲಮಟ್ಟಿ ರಸ್ತೆಯಲ್ಲಿರುವ ಗೆದ್ದಲಮರಿ ತಾಂಡಾ ಬಳಿ 3-4 ಕಡೆ ಲಂಬಾಣಿ ಯುವಕರ ತಂಡ ಗುಂಪು ಕಟ್ಟಿಕೊಂಡು ಹೋಳಿ ಹಬ್ಬದ ರಂಗಿನಾಟ ನೆಪದಲ್ಲಿ ವಾಹನಗಳನ್ನು ತಡೆದು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದಕ್ಕೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಪ್ರಯಾಣಿಕರು, ವಾಹನ ಸವಾರರು ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ಅಂದಾಜು 4-5 ಲಂಬಾಣಿ ತಾಂಡಾ ಇವೆ. ಈ ತಾಂಡಾಗಳಲ್ಲಿರುವ ಯುವಕರು ರಸ್ತೆಯುದ್ದಕ್ಕೂ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಹಲಗೆ ಬಾರಿಸುತ್ತ ರಸ್ತೆಗೆ ಅಡ್ಡಲಾಗಿ ಕಲ್ಲು, ಮುಳ್ಳು ಕಂಟಿ ಇಟ್ಟು ದ್ವಿಚಕ್ರ ವಾಹನ ಸೇರಿದಂತೆ ಎಲ್ಲ ರೀತಿಯ ವಾಹನ ತಡೆಗಟ್ಟುತ್ತಾರೆ.

ಹೋಳಿ ಹಬ್ಬದ ಖುಷಿ ಕೊಡಬೇಕು ಎಂದು ಬಲವಂತ ಮಾಡುತ್ತಾರೆ. ಕೊಡದಿದ್ದರೆ ಬಣ್ಣ ಹಾಕುವ ಬೆದರಿಕೆ ಒಡ್ಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ಗುಂಪು ಕಟ್ಟಿಕೊಂಡು ಜಗಳಕ್ಕೆ ಬರುತ್ತಾರೆ ಮಾತ್ರವಲ್ಲದೆ ಹಲ್ಲೆ ನಡೆಸಲೂ ಮುಂದಾಗುತ್ತಾರೆ ಎಂದು ತೊಂದರೆ ಅನುಭವಿಸಿದ ಪ್ರಯಾಣಿಕರು, ವಾಹನ ಸವಾರರು ಸುದ್ದಿಗಾರರ ಬಳಿ ಗೋಳು ತೋಡಿಕೊಂಡಿದ್ದಾರೆ.

ಹೋಳಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಬೇಕು, ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಬಣ್ಣ ಹಾಕಬಾರದು ಎನ್ನುವ ಸತ್ಸಂಪ್ರದಾಯವನ್ನು ಹಿರಿಯರು ಪಾಲಿಸಿಕೊಂಡು ಬಂದಿದ್ದರು. ಆದರೆ ಇಂದಿನ ಯುವಕರು ಆ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು ಹಣ ವಸೂಲಿಯನ್ನೇ ದಂಧೆ ಮಾಡಿಕೊಂಡಿರುವುದು ಸಮಾಜ ಮತ್ತು ಯುವಕರು ಎತ್ತ ಸಾಗುತ್ತಿದ್ದಾರೆ ಎನ್ನುವದಕ್ಕೆ ಉದಾಹರಣೆಯಾಗಿದೆ ಎಂದು ನೋವು ತೋಡಿಕೊಂಡರು.

ತುರ್ತು ಕಾರ್ಯನಿಮಿತ್ತ ಸಂಚರಿಸುವ ಸಾರ್ವಜನಿಕರು ಅನಿವಾರ್ಯವಾಗಿ ಹಣ ಕೊಟ್ಟು ಇವರ ಕಾಟದಿಂದ ತಪ್ಪಿಸಿಕೊಳ್ಳುತ್ತಾರೆ. ಇನ್ನಿತರ ಬೇರೆ ಬೇರೆ ಕಾರಣಗಳಿಗಾಗಿ ಸಂಚರಿಸುವವರು ಇವರೊಂದಿಗೆ ವಾದಕ್ಕಿಳಿಯುತ್ತಾರೆ. ಆಗ ಯುವಕರ ತಂಡ ವಾಹನದ ಮೇಲೆ ಹತ್ತಿ ಕಿರುಚಾಟ, ಚೀರಾಟ ನಡೆಸಿ ಭಯದ ವಾತಾವರಣ ಸೃಷ್ಟಿಸುತ್ತಾರೆ. ವಾಹನಕ್ಕೂ ಮತ್ತು ಅದರಲ್ಲಿರುವ ಪ್ರಯಾಣಿಕರಿಗೂ ಬಣ್ಣ ಎರಚಿ ವಿಕೃತ ಮನೋಭಾವ ಪ್ರದರ್ಶಿಸುತ್ತಾರೆ ಎಂದು ಅವರು ದೂರಿದ್ದಾರೆ.

ಈ ತಾಂಡಾಗಳಲ್ಲಿ ಇರುವ ಹಿರಿಯರು ಯುವಕರಿಗೆ ಹೀಗೆ ಮಾಡದಂತೆ ಬುದ್ಧಿ ಹೇಳಲು ಮುಂದಾಗುತ್ತಿಲ್ಲ. ಯಾರಾದರೊಬ್ಬ ಹಿರಿಯರು ಸ್ಥಳದಲ್ಲಿ ಕಾಣಿಸಿಕೊಂಡರೆ ಏನೋ ಹುಡುಗ್ರು ಹಬ್ಬದ ಖುರ್ಷಿ ಕೇಳ್ತಾರೆ ಕೊಟ್ಟು ಹೋಗ್ರಿ ಎಂದು ಯುವಕರ ಪರವಾಗಿಯೇ ಮಾತನಾಡಿ ತಾವೂ ಕಲುಷಿತಗೊಂಡಿರುವುದನ್ನು ತೋರಿಸಿಕೊಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಈ ಪರಿಸ್ಥಿತಿ ಮುದ್ದೇಬಿಹಾಳದಿಂದ ಹೊರಡುವ ತಂಗಡಗಿ, ಢವಳಗಿ, ನಾಲತವಾಡ ರಸ್ತೆಗಳ ಮೂಲೂ ಕಂಡುಬರುತ್ತಿದೆ. ಆದರೆ ತಾಂಡಾಗಳಲ್ಲಿ ಮಾತ್ರ ಇದು ಮಿತಿ ಮೀರಿದ್ದು ಅಕ್ಷರಶಃ ದೌರ್ಜನ್ಯ, ಬಲವಂತ ನಡೆಸುವ ಘಟನೆಗಳು ಕಂಡುಬಂದಿವೆ. ಕೆಲ ಸಂದರ್ಭ ವೇಗವಾಗಿ ಬರುವ ವಾಹನಗಳ ಎದುರು ದಿಢಿರ್‌ ಹಲಗೆ ಬಾರಿಸುತ್ತ ಪ್ರತ್ಯಕ್ಷರಾಗುವ ಯುವಕರ ದಂಡು ವಾಹನದ ಬ್ರೇಕ್‌ ಫೇಲಾದಲ್ಲಿ ಅದರ ಕೆಳಗೆ ಸಿಕ್ಕು ಗಂಭೀರ ಪರಿಣಾಮ ಎದುರಿಸುವ ಸಂಭವ ಅಲ್ಲಗಳೆಯುವಂತಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರವೂ ಎರಡನೇ ದಿನದ ಹೋಳಿ ರಂಗಿನಾಟ ಎಲ್ಲ ಕಡೆ ನಡೆಯಲಿದೆ. ಆಯಾ ಬೀಟ್‌ಗೆ ನೀಮಿಸಿರುವ ಬೀಟ್‌ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್‌ ಅಧಿಕಾರಿಗಳಿಗೆ ಸರ್ಕಾರ ತಿರುಗಾಟಕ್ಕೆ ವಾಹನ ಕೊಟ್ಟಿದ್ದು ಅದರ ಬಳಕೆ ಇಂಥ ಸಂದರ್ಭಗಳಲ್ಲಿ ಸರಿಯಾಗಿ ಆಗುತ್ತಿಲ್ಲ. ಮಂಗಳವಾರ ಸಾರ್ವಜನಿಕರ ದೂರು ಪರಿಗಣಿಸಿ ಪೊಲೀಸ್‌ ಅಧಿಕಾರಿಗಳು ಬೀಟ್‌ ಪೊಲೀಸರನ್ನು ಎಚ್ಚರಗೊಳಿಸಿದ್ದಾರೆ. ಬುಧವಾರ ಮಾತ್ರ ರಸ್ತೆಯಲ್ಲಿ ವಸೂಲಿ ದಂಧೆ ನಡೆಯದಂತೆ ಸೂಕ್ತ ಪೆಟ್ರೋಲಿಂಗ್‌ ನಡೆಸಿ ಸಾರ್ವಜನಿಕ ಪ್ರಯಾಣಿಕರನ್ನು ಪ್ರಯಾಸದಿಂದ ಮುಕ್ತರನ್ನಾಗಿ ಮಾಡಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.