ರೈತರೇ ಸರ್ಕಾರಿ ಯೋಜನೆ ಬಳಕೆ ಮಾಡಿಕೊಳ್ಳಿ


Team Udayavani, Mar 12, 2020, 3:00 AM IST

raitare

ಕೊಳ್ಳೇಗಾಲ: ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಅರಣ್ಯ ಇಲಾಖೆಯಿಂದ ಜಾರಿ ಮಾಡಿದೆ. ಇದನ್ನು ರೈತರು ಸಂಪೂರ್ಣ ಬಳಕೆ ಮಾಡಿಕೊಳ್ಳಬೇಕು ಎಂದು ನಿವೃತ್ತ ಡಿಸಿಎಫ್ ಚಂದ್ರಶೇಖರ್‌ ಹೇಳಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಬುಧವಾರ ನಡೆದ ಎಸ್‌ಎಂಎಎಫ್ ಯೋಜನೆ ತರಬೇತಿ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಅನುದಾನವನ್ನು ಅರಣ್ಯ ಇಲಾಖೆಯಿಂದ ಮರಗಿಡಗಳನ್ನು ಬೆಳೆಸಲು ನೀಡುತ್ತಿದೆ. ರೈತ ಮುಖಂಡರು ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಅನುದಾನಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.

ಶ್ರೀಗಂಧ, ರಕ್ತ ಚಂದನ ಮರ ಬೆಳೆಯಿರಿ: ಕೇಂದ್ರ ಸರ್ಕಾರ ಕಳೆದ 2011ರಲ್ಲಿ ಶ್ರೀಗಂಧ ಮತ್ತು ರಕ್ತ ಚಂದನ ಮರಗಳನ್ನು ಬೆಳೆಸಲು ಅನುಮತಿ ನೀಡಿದೆ. ಇದನ್ನು ಹೆಚ್ಚು ಬಳಸುವ ಮೂಲಕ ರೈತರು ಶ್ರೀಮಂತರಾಗಲು ಅವಕಾಶವಿದೆ. ರೈತರು ಮುಂದೆ ಬಂದು ಇಂತಹ ಬೆಲೆ ಬಾಳುವ ಮರಗಳನ್ನು ಬೆಳೆಯಲು ಮುಂದಾಗಬೇಕು. ಅರಣ್ಯ ಇಲಾಖೆಯಿಂದ ಕಡಿಮೆ ದರದಲ್ಲಿ ವಿವಿಧ ಬಗೆಯ ಗಿಡಗಳನ್ನು ನೀಡುತ್ತಿದೆ.

ಅದನ್ನು ಉತ್ತಮ ರೀತಿಯಲ್ಲಿ ಪೋಷಣೆ ಮಾಡಿದರೆ ಅದಕ್ಕೆ ಸೂಕ್ತ ಅನುದಾನವನ್ನು ನೀಡಲಾಗುತ್ತಿದೆ. ಗಿಡಗಳನ್ನು 18ರಿಂದ 20 ವರ್ಷದ ತನಕ ಉತ್ತಮ ರೀತಿಯಲ್ಲಿ ಬೆಳೆಸಿದರೆ ಅದರಿಂದಲೂ ಹಣ ಲಭ್ಯವಾಗಲಿದೆ. ಇಂತಹ ಉತ್ತಮ ಜಾತಿಯ ಮರಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.

ಗಿಡ ಬೆಳೆಸುವ ಪ್ರವೃತ್ತಿ ಬೆಳೆಸಿಕೊಳ್ಳಿ: ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸ್ತ್ರೀಶಕ್ತಿ ಸಂಘದವರು ಅರಣ್ಯ ಇಲಾಖೆ ನೀಡುವ ಕಾರ್ಯಾಗಾರದಲ್ಲಿ ಹೆಚ್ಚು ತೊಡಗಿಸಿಕೊಂಡು, ಉತ್ತಮ ಮಾಹಿತಿ ಪಡೆದು ಗಿಡ ಮರಗಳನ್ನು ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು.

ಇತ್ತೀಚಿನ ದಿನಗಳಲ್ಲಿ ಗಿಡ ಮರಗಳ ನಾಶ ಮತ್ತು ಅರಣ್ಯ ನಾಶದಿಂದ ಮನುಷ್ಯನ ಉಸಿರಾಟಕ್ಕೂ ಅಪಾರ ತೊಂದರೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಅನಾವುತಗಳು ಸಂಭವಿಸದಂತೆ ಪ್ರತಿಯೊಂದು ಜಾತಿಯ ಮರಗಿಡಗಳನ್ನು ಬೆಳೆಸಲು ಮುಂದಾಗ ಮೂಲಕ ಪರಿಸರ ಉಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮಗಳಿಂದ ಮಕ್ಕಳ ಕಲಿಕೆಗೆ ಹಿನ್ನಡೆ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಕುಮಾರ್‌ ಮಾತನಾಡಿ, ಮಕ್ಕಳಿಗೆ ಪಾಠ ಪ್ರವಚನಗಳನ್ನು ನೀಡಬೇಕಾಗಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಈ ರೀತಿ ಸಭೆ, ಸಮಾರಂಭಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಮಕ್ಕಳ ಕಲಿಕೆಗೆ ಹಿನ್ನಡೆಯಾಗಲಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಪ್ರಚಾರದ ಕೊರತೆ: ತಾಪಂ ಸದಸ್ಯ ಜಾವೀದ್‌ ಅಹಮ್ಮದ್‌ ಮಾತನಾಡಿ, ಪ್ರಚಾರದ ಕೊರತೆಯಿಂದ ಕಾರ್ಯಕ್ರಮಕ್ಕೆ ರೈತರು ಗೈರಾಗಿದ್ದಾರೆ. ಮುಂದಿನ ದಿನಗಳಲ್ಲಿ ಇಲಾಖೆ ಕಾರ್ಯಕ್ರಮಗಳ ಕಾರ್ಯಾಗಾರದ ವಿಷಯವನ್ನು ಹೆಚ್ಚು ಪ್ರಚಾರ ಮಾಡಿ, ರೈತರಿಗೆ ಮುಟ್ಟುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಕೆಂಪನಪಾಳ್ಯ ಗ್ರಾಮದ ಚೆನ್ನಬಸವ ಆರಾಧ್ಯ ಅವರನ್ನು ಗೌರವಿಸಲಾಯಿತು. ಎಸಿಎಫ್ ವನಿತಾ, ತಾಪಂ ಸದಸ್ಯರಾದ ಪುಷ್ಪ, ಕೃಷ್ಣಪ್ಪ, ಮರಿಸ್ವಾಮಿ, ಸುರೇಶ್‌, ಸಿದ್ದಯ್ಯನಪುರ ಗ್ರಾಪಂ ಸದಸ್ಯ ಗುಣಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.