ಇಟಲಿ ಆರ್ಥಿಕತೆಗೆ ಕೊರೊನಾ ಭೀತಿ

2 ವಾರದಲ್ಲಿ 9 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

Team Udayavani, Mar 11, 2020, 9:36 PM IST

ಇಟಲಿ ಆರ್ಥಿಕತೆಗೆ ಕೊರೊನಾ ಭೀತಿ

ರೋಮ್‌: ಇಡೀ ವಿಶ್ವವೇ ಕೊರೊನಾ ಭೀತಿಯಿಂದ ತತ್ತರಿಸಿದ್ದು, ದೇಶ ವಿದೇಶಗಳ ಆರ್ಥಿಕತೆ ನೆಲಕಚ್ಚಿದೆ. ಇದೀಗ ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಇಟಲಿ ಸರಕಾರ ತನ್ನ ನೌಕರರ ವೇತನ ತೆರಿಗೆಯನ್ನು ಕಡಿತಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂಬ ವರದಿ ಪ್ರಕಟವಾಗಿದೆ.

ಅನೇಕ ವ್ಯವಾಹರಗಳು ತೊಂದರೆಗೆ
ಇಟಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರವಾಸೋದ್ಯಮ ಕುಸಿತ ಕಂಡಿದ್ದು, ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿವೆ. ಇನ್ನೂ ಪರಿಸ್ಥಿತಿಯನ್ನು ಬಿಗಾಡಿಸಲು ಜತೆಗೆ ದೇಶದ ಆರ್ಥಿಕತೆಗೆ ಚೈತನ್ಯ ನೀಡಲು 10 ಬಿಲಿಯನ್‌ ಯುರೋ ಸಹಾಯ ನೀಡಲು ಯುರೋಪಿಯನ್‌ ಒಕ್ಕೂಟಕ್ಕೆ ಮನವಿ ಮಾಡಿರುವುದಾಗಿ ಅಲ್ಲಿನ ಆರ್ಥಿಕ ಸಚಿವರು ತಿಳಿಸಿದ್ದಾರೆ.ಈ ಬಗ್ಗೆ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸರಕಾರ ಗೃಹ ಕೈಗಾರಿಕೆ ಮತ್ತು ಸಣ್ಣ ವ್ಯಾಪಾರಗಳಿಗೆ ಔಪಚಾರಿಕವಾಗಿ ಬೆಂಬಲ ಸೂಚಿಸುವ ನಿರೀಕ್ಷೆಯಿದೆ.

ಆರ್ಥಿಕ ಹಿಂಜರಿತದ ಸಾಧ್ಯತೆ
ಕೊರೊನಾ ವೈರಸ್‌ ಹಾವಳಿಯಿಂದ ಉಂಟಾದ ಬಿಕ್ಕಟ್ಟು ಹಾಗೂ ಅದನ್ನು ನಿವಾರಣೆ ದೃಷ್ಟಿಯಿಂದ ನೌಕರರ ಸಂಬಳದಲ್ಲಿ ತೆರಿಗೆ ರೂಪದಲ್ಲಿ ಹಿಡಿದುಕೊಳ್ಳುತ್ತಿದ್ದ ನೀತಿಯನ್ನ ಕೈಬಿಡಲು ಅಲ್ಲಿನ ಸರಕಾರ ನಿರ್ಧರಿಸಿದೆ. ಇಟಲಿಯ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದರೆ 2008 -09ರ ಆರ್ಥಿಕ ಹಿಂಜರಿತದಂತೆಯೇ, ಆರ್ಥಿಕ ಹಿಂಜರಿತವಾಗುವ ಸಾಧ್ಯತೆ ಇದ್ದು ಈ ಹಂತದಲ್ಲಿ ಇದರ ವ್ಯಾಪ್ತಿಯನ್ನು ಅಳೆಯುವುದು ತುಂಬಾ ಕಷ್ಟ ಎಂದು ಅಲ್ಲಿನ ಅರ್ಥಶಾಸ್ತ್ರಜ್ಞರು ತಮ್ಮ ಸಂಶೋಧನಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

2ನೇ ವಾರದಲ್ಲಿ 9ಸಾವಿರಕ್ಕೂ ಹೆಚ್ಚು ಸೋಂಕಿತರ ಪತ್ತೆ
ಕೇವಲ ಎರಡೇ ವಾರದಲ್ಲಿ ಮೆಡಿಟರೇನಿಯನ್‌ ದೇಶದಲ್ಲಿ 9,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದ ಇಟಲಿ ಸರಕಾರ ತಾತಾಲ್ಕಿಕವಾಗಿ ಸಾರ್ವಜನಿಕರ ಪ್ರಯಾಣವನ್ನು ನಿರ್ಬಂಧಿಸಿ, ಸಭೆ ಸಮಾರಂಭ ಗಳ ಮೇಲೆ ನಿಷೇಧ ಹೇರಿದೆ. ಇನ್ನೂ ಈ ಆರ್ಥಿಕ ಬಿಕ್ಕಟ್ಟು ಪರಿಹರಿಸಲು 7.5 ಬಿಲಿಯನ್‌ ಯೂರೋ ಹಣ ಸಾಕಾಗುತ್ತಿಲ್ಲ ಎಂದು ಆರ್ಥಿಕ ಅಭಿವೃದ್ದಿ ಸಚಿವ ಹೇಳಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.