ಮೇಲ್ಮನೆಯಲ್ಲಿ ರಾಮಾಯಣ, ಮಹಾಭಾರತ


Team Udayavani, Mar 12, 2020, 3:07 AM IST

melmaneya

ವಿಧಾನ ಪರಿಷತ್ತು: ಮೇಲ್ಮನೆಯಲ್ಲಿ ಒಂದರ ಹಿಂದೊಂದು ರಾಮಾಯಣ-ಮಹಾಭಾರತ ಪ್ರಸಂಗಗಳು ಮೂಡಿಬಂದವು! ಪ್ರಜಾಪ್ರಭುತ್ವದ ರಕ್ಷಣೆ ಮತ್ತು ರಾಜಕೀಯ ವ್ಯವಸ್ಥೆಗೆ ಮೇಲ್ಮನೆ ಸದಸ್ಯರು ಉದಾಹರಣೆಯಾಗಿ ರಾಮಾಯಣ ಮತ್ತು ಮಹಾಭಾರತದ ವಿವಿಧ ಘಟನೆಗಳ ಮೂಲಕ ಮಾರ್ಮಿಕವಾಗಿ ಕನ್ನಡಿ ಹಿಡಿಯುವ ಪ್ರಯತ್ನ ಮಾಡಿದರು. ಇದರಲ್ಲಿ ರಾಮರಾಜ್ಯ, ಸೀತೆಯ ವನವಾಸ, ಕರ್ಣನ ಸ್ವಾಮಿನಿಷ್ಠೆ, ಕೃಷ್ಣನ ನಿಷ್ಠುರವಾದದಂತಹ ವಿಷಯಗಳು ವಸ್ತುವಾದವು.

ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಆಡಳಿತ ಪಕ್ಷದ ಸದಸ್ಯೆ ತೇಜಸ್ವಿನಿಗೌಡ ಮಾತನಾಡಿ, “ಒಬ್ಬ ಅಗಸನ ಮಾತು ಕೇಳಿ ರಾಮ, ಸೀತೆಯನ್ನು ಕಾಡಿಗಟ್ಟುತ್ತಾನೆ. ಇದು ರಾಮ ರಾಜ್ಯದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಇದ್ದ ಮಹತ್ವ. ಮಹಾತ್ಮ ಗಾಂಧೀಜಿಗೆ ಕೂಡ ಇದೇ ಕಾರಣಕ್ಕೆ ರಾಮನು ಪ್ರೇರಣೆಯಾಗಿದ್ದ. ಇದುವರೆಗೂ ಆ ರಾಮರಾಜ್ಯವನ್ನು ಕಾಣಲು ನಮಗೆ ಸಾಧ್ಯವಾಗಿಲ್ಲ.

ರಾಮನಂತಹ ನಿಷ್ಠೆ ಪ್ರಜಾಪ್ರಭುತ್ವದಲ್ಲಿ ಸಾಧ್ಯವೇ ಎಂದರು. ಇದಕ್ಕೆ ಪೂರಕವಾಗಿ ಮಾತನಾಡಿದ ಜೆಡಿಎಸ್‌ನ ಬೋಜೇಗೌಡ, ಲಕ್ಷ್ಮಣನು ಸೀತೆಯನ್ನು ಕಾಡಿಗೆ ಬಿಡಲು ಕರೆದೊಯ್ಯುತ್ತಾನೆ. ಇದರ ಮಾಹಿತಿ ತುಂಬು ಗರ್ಭಿಣಿ ಸೀತೆಗೆ ಇರುವುದಿಲ್ಲ ಎಂಬ ಪ್ರಸಂಗವನ್ನು ಸಂಸ್ಕೃತ ಶ್ಲೋಕಗಳ ಮೂಲಕ ವರ್ಣಿಸಿದರು.

ಕರ್ಣನ ಸ್ವಾಮಿನಿಷ್ಠೆ ಈಗ ಸಾಧ್ಯವೇ?: ಮಹಾಭಾರತದ ಪ್ರಸಂಗಗಳನ್ನೂ ಉಲ್ಲೇಖೀಸಿದ ಬೋಜೇಗೌಡ, “ಕರ್ಣನಿಗೆ ಕೃಷ್ಣನು ದುರ್ಯೋ ಧನನ್ನು ಬಿಟ್ಟು ಬಾ. ಇಡೀ ರಾಜ್ಯವೇ ನಿನ್ನದಾಗು ತ್ತದೆ ಎಂದು ಹೇಳುತ್ತಾನೆ. ಆದರೆ, ಇದಕ್ಕೆ ಕರ್ಣ ಒಪ್ಪುವುದಿಲ್ಲ. ಕರ್ಣನಲ್ಲಿ ದುರ್ಯೋಧನನ ಬಗ್ಗೆ ಇರುವ ಸ್ವಾಮಿನಿಷ್ಠೆ. ಈಗಿರುವ ರಾಜಕಾರಣಿಗ ಲ್ಲಿ ಕಾಣಲು ಸಾಧ್ಯವೇ? ಎಂದು ಎದುರಿಗಿದ್ದ ಸಚಿವ ಬಿ.ಸಿ. ಪಾಟೀಲ ಅವರನ್ನು ನೋಡಿದರು.

ಅಸ್ತ್ರಕ್ಕೆ ಪ್ರತ್ಯಸ್ತ್ರ: ಚುನಾವಣೆಯಲ್ಲಿನ ಭ್ರಷ್ಟಾಚಾರ ಕುರಿತ ಚರ್ಚೆ ವೇಳೆ ಮಧ್ಯಪ್ರವೇಶಿಸಿದ ಸಚಿವ ಸಿ.ಟಿ. ರವಿ, “ಮಹಾಭಾರತ ಯುದ್ಧದಲ್ಲಿ ಕರ್ಣನ ರಥದ ಚಕ್ರ ನೆಲದಲ್ಲಿ ಕುಸಿಯುತ್ತದೆ. ಇದೇ ಸುಸಮಯ, ಬಾಣವನ್ನು ಹೂಡುವಂತೆ ಸಾರಥಿ ಕೃಷ್ಣನು ಅರ್ಜುನನಿಗೆ ಹೇಳುತ್ತಾನೆ. ಆದರೆ, ಇದಕ್ಕೆ ಅರ್ಜುನ ನಿರಾಕರಿಸುತ್ತಾನೆ. ಆಗ, ಅಭಿಮನ್ಯುವನ್ನು ಚಕ್ರವ್ಯೂಹದಲ್ಲಿ ಕೊಂದಿದ್ದನ್ನು ನೆನಪಿಸುತ್ತಾನೆ. ಅದೇ ರೀತಿ, ಹಿಂದೆ ಕೂಡ ಏನೇನು ಆಗಿದೆ ಎಂಬುದನ್ನು ನಾವು ನೆನಪು ಮಾಡಿಕೊಳ್ಳಬೇಕಾಗುತ್ತದೆ. ಇದು ಅಸ್ತ್ರಕ್ಕೆ ಪ್ರತ್ಯಸ್ತ್ರ’ ಎಂದು ಹೇಳಿದರು.

ಸಂವಿಧಾನ ಬದಲಾಯಿಸಿದರೆ ರಕ್ತಪಾತ: ಲಿಂಗಪ್ಪ
ವಿಧಾನ ಪರಿಷತ್ತು: ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಕ್ಕೆ ಕೈಹಾಕಿದರೆ, ದೇಶದಲ್ಲಿ ರಕ್ತಪಾತ ಆಗಲಿದೆ ಎಂದು ಕಾಂಗ್ರೆಸ್‌ನ ಸಿ.ಎಂ. ಲಿಂಗಪ್ಪ ಹೇಳಿದರು. ಮೇಲ್ಮನೆಯಲ್ಲಿ ಬುಧವಾರ ಸಂವಿಧಾನದ ಮೇಲಿನ ಚರ್ಚೆ ವೇಳೆ ಮಾತನಾಡಿ, ಸಂವಿಧಾನ ಇಲ್ಲವಾದರೆ ಭಾರತವೂ ಇಲ್ಲವಾಗುತ್ತದೆ. ಯಾವುದೇ ಕಾರಣಕ್ಕೂ ಇದರ ಬದಲಾವಣೆಗೆ ಅವಕಾಶ ನೀಡಬಾರದು. ಒಂದು ವೇಳೆ ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದರೆ, ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಹತ್ತುಪಟ್ಟು ರಕ್ತಪಾತವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.