ಮಹಿಳೆಯರಿಂದಲೂ ಅತ್ಯುತ್ತಮ ಸಾಧನೆ
Team Udayavani, Mar 12, 2020, 2:53 PM IST
ಹುಬ್ಬಳ್ಳಿ: ಮಹಿಳೆಯರಿಗೆ ಅವಕಾಶಗಳು ದೊರೆತಲ್ಲಿ ಅವರು ಅತ್ಯುತ್ತಮ ಸಾಧನೆ ಮಾಡಬಲ್ಲರು ಎಂಬುದಕ್ಕೆ ಸಾಕಷ್ಟು ನಿದರ್ಶನಗಳಿವೆ. ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ, ಪ್ರೋತ್ಸಾಹ ಅವಶ್ಯವಾಗಿದೆ ಎಂದು ರಾಜ್ಯ ಕೌಶಲಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಬುಧವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆ ವಿಚಾರದಲ್ಲಿ ಪುರುಷರಿಗಿಂತ ಮಹಿಳೆಯರು ಕಡಿಮೆ ಇಲ್ಲ. ಅವರಿಗೆ ಅವಕಾಶಗಳು ಸಿಗಬೇಕಷ್ಟೇ ಎಂದರು.
ಉದ್ಯಮ ರಂಗಕ್ಕೆ ಬೇಕಾದ ರೀತಿಯಲ್ಲಿ ಕೌಶಲಯುತ ಸಿಬ್ಬಂದಿ ತಯಾರುಗೊಳಿಸಲು ಉದ್ಯಮ ವಲಯದೊಂದಿಗೆ ಚರ್ಚಿಸಲಾಗುತ್ತಿದೆ. ಅದೇ ರೀತಿ ಜವಳಿ ಉದ್ಯಮದಲ್ಲಿ ಸುಮಾರು 5,000ದಷ್ಟು ಉದ್ಯೋಗಿಗಳ ಬೇಡಿಕೆ ಇದ್ದು, ಕೇವಲ 1,000 ಉದ್ಯೋಗಿಗಳ ಮಾತ್ರ ಲಭ್ಯವಿದ್ದಾರೆ. ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಕೌಶಲಾಭಿವೃದ್ಧಿಗೆ ಬಳಕೆ ನಿಟ್ಟಿನಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಹುಬ್ಬಳ್ಳಿ ಮಾದರಿ: ಕಿರಿಯ ತಾಂತ್ರಿಕ ತರಬೇತಿ ಶಾಲೆ ಮೂಲಕ 8ನೇ ತರಗತಿಯಿಂದಲೇ ಮಕ್ಕಳಿಗೆ ವಿವಿಧ ತಾಂತ್ರಿಕ ತರಬೇತಿ ನೀಡುವ ಕಾರ್ಯ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. 1950ರಲ್ಲಿ ಹುಬ್ಬಳ್ಳಿಯಲ್ಲಿ ಆರಂಭವಾದ ಈ ಶಾಲೆ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
18 ವರ್ಷ ವಯೋಮಾನದವರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಆದರೆ, ಕಿರಿಯ ತಾಂತ್ರಿಕ ತರಬೇತಿ ಶಾಲೆಯಲ್ಲಿ 14 ವರ್ಷದಿಂದಲೇ ಇಂತಹ ತರಬೇತಿ ಆರಂಭಿಸಲಾಗುತ್ತಿದ್ದು, ಕೌಶಲಾ ಭಿವೃದ್ಧಿ ತರಬೇತಿಯನ್ನು ಕನಿಷ್ಠ 16 ವರ್ಷ ವಯೋಮಿತಿ ಯಿಂದಲಾದರೂ ಆರಂಭಿಸುವ ನಿಟ್ಟಿನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದರಿಂದ ಶಾಲೆಯಿಂದ ಹೊರಗುಳಿಯುವ ವಿದ್ಯಾರ್ಥಿಗಳ ಸಂಖ್ಯೆ ಇಲ್ಲವಾಗಲಿದೆ. ವಿಶೇಷವಾಗಿ ಶೇ.30ರಷ್ಟು ಹೆಣ್ಣು ಮಕ್ಕಳು ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿಯುತ್ತಿದ್ದಾರೆ. ಅಂತಹವರಿಗೆ ಇಂತಹ ತರಬೇತಿ ಸಹಕಾರಿ ಆಗಲಿದೆ ಎಂದರು.
ಆಯುಕ್ತರ ಪ್ರಸ್ತಾವನೆ: ಹದಿಹರೆಯದವರ ಮನದಲ್ಲಿ ಅಪರಾಧ ಮನೋಭಾವ ತಡೆಯುವ ನಿಟ್ಟಿನಲ್ಲಿ 14 ವರ್ಷ ವಯೋಮಾನದವರಿಗೆ ಅಗತ್ಯ ತರಬೇತಿ ನೀಡುವ ಕುರಿತಾಗಿ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರು ಪ್ರಸ್ತಾಪಿಸಿದ್ದು, ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ಹೇಳಿದ್ದು, ಅಂತಹ ತರಬೇತಿಗೆ ಪ್ರಾಧಿಕಾರ ಸಹಕಾರ ನೀಡಲಿದೆ ಎಂದರು. ಇದೇ ಸಂದರ್ಭದಲ್ಲಿ ಸಾಧಕ ಮಹಿಳೆಯರಾದ ಸೌಭಾಗ್ಯ ಯಲಿಗಾರ, ಸುಲೇಖಾನ್ ಶೇಖ್, ರೂಪಾಲಿ ಜಾಧವ ಅವರನ್ನು ಸನ್ಮಾನಿಸಲಾಯಿತು. ಕೆಸಿಸಿಐನ ವಸಂತ ಲದವಾ, ಸಿದ್ದೇಶ್ವರ ಕಮ್ಮಾರ, ಅಶೋಕ ಗಡಾದ ಹಾಗೂ ವಿವಿಧ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು