ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ


Team Udayavani, Mar 12, 2020, 4:27 PM IST

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳಿಗೆ ಮತ್ತೆ ಜೀವಬಂದಿದೆ. ಎರಡೂ ಹುದ್ದೆಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳು ಸ್ಥಳೀಯ ಮಟ್ಟದಲ್ಲಿ ತಮ್ಮ ರಾಜಕೀಯ ಪ್ರಭಾವ ಬಳಸಲು ಮುಂದಾಗಿದ್ದಾರೆ.

ಸ್ಥಳೀಯ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಶಾಸಕರು ತಮಗೆ ಬೇಕಾದವರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವುದರಿಂದ ಈ ಎರಡೂ ಹುದ್ದೆಗಳು ಬಹಳ ಮಹತ್ವ ಪಡೆದುಕೊಂಡಿವೆ. ಎಲ್ಲಕ್ಕಿಂತ ಮುಖ್ಯವಾಗಿ ಗೋಕಾಕ, ಚಿಕ್ಕೋಡಿ, ರಾಯಬಾಗ ತಾಲೂಕಿನಲ್ಲಿ ರಾಜಕೀಯ ಚಟುವಟಿಕೆಗಳು ಉಳಿದ ಸ್ಥಳೀಯ ಸಂಸ್ಥೆಗಳಿಗಿಂತ ಹೆಚ್ಚು ಬಿರುಸುಗೊಂಡಿವೆ.

ಗೋಕಾಕದ ಮೇಲೆ ಎಲ್ಲರ ಕಣ್ಣು: ಗೋಕಾಕ ನಗರಸಭೆ ಈಗ ಮತ್ತೂಮ್ಮೆ ಎಲ್ಲರ ಗಮನಸೆಳೆಯಲಿದೆ. ಒಟ್ಟು 31 ಸದಸ್ಯರನ್ನು ಹೊಂದಿರುವ ಈ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಮೀಸಲಾಗಿವೆ. ಈ ನಗರಸಭೆಯ ಮೇಲೆ ಜಾರಕಿಹೊಳಿ ಸಹೋದರರ ಅದರಲ್ಲೂ ಸಚಿವ ರಮೇಶ ಜಾರಕಿಹೊಳಿ ಅವರ ಅಳಿಯ ಅಂಬಿರಾವ್‌ ಪಾಟೀಲ ಅವರ ಹಿಡಿತ ಗಟ್ಟಿ ಯಾಗಿರುವುದರಿಂದ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಕುತೂಹಲ ಎಲ್ಲ ಸದಸ್ಯರು ಹಾಗೂ ಗೋಕಾಕ ಜನರಲ್ಲಿದೆ. ಎಲ್ಲ ಸದಸ್ಯರು ಪಕ್ಷೇತರ ಹೆಸರಿನಲ್ಲಿ ಚುನಾಯಿತರಾಗಿರುವುದರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಊಹೆ ಕಷ್ಟಕರವಾಗಿದೆ. ಜಾರಕಿಹೊಳಿ ಬೆಂಬಲ ಇದ್ದವರಿಗೆ ಹಾಗೂ ಅಂಬಿರಾವ ಸಹಕಾರ ಇದ್ದವರಿಗೆ ಅದೃಷ್ಟ ಒಲಿಯಲಿದೆ ಎಂಬ ಮಾತುಗಳು ಗೋಕಾಕ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

‘ಈಗ ಲಭ್ಯವಿರುವ ಮಾಹಿತಿ ಪ್ರಕಾರ 31 ಸದಸ್ಯರಲ್ಲಿ 12 ಜನ ಸದಸ್ಯರು ಲಖನ್‌ ಜಾರಕಿಹೊಳಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ. ಉಳಿದ ಸದಸ್ಯರು ರಮೇಶ ಜಾರಕಿಹೊಳಿ ಅವರ ಗುಂಪಿನಲ್ಲಿದ್ದಾರೆ ಎನ್ನಲಾಗುತ್ತಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಲ್ಲಿ ರಮೇಶ ಅವರ ನಿರ್ಧಾರ ಅಂತಿಮ ಎಂದು ಮೂಲಗಳು ತಿಳಿಸಿವೆ.

ಖಾನಾಪುರದಲ್ಲಿ ಎಲ್ಲರೂ ಅಕಾಂಕ್ಷಿಗಳು: ಇನ್ನು ಖಾನಾಪುರ ಪಟ್ಟಣ ಪಂಚಾಯತದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ಮಹಿಳೆ ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವದರಿಂದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ.

ಒಟ್ಟು 16 ಸದಸ್ಯರ ಬಲಾಬಲದ ಈ ಪಟ್ಟಣ ಪಂಚಾಯತ್‌ನಲ್ಲಿ 15 ಜನ ಪಕ್ಷೇತರರಾಗಿದ್ದು ಒಬ್ಬರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಚುನಾವಣೆಯ ವೇಳೆ ಸದಸ್ಯರು ಗುಂಪುಗಳನ್ನು ರಚಿಸಿಕೊಳ್ಳುವದರಿಂದ ಇಂಥವರೇ ಆಧ್ಯಕ್ಷರಾಗುತ್ತಾರೆ ಎಂದು ಹೇಳುವುದು ಕಷ್ಟ ಎನ್ನಲಾಗುತ್ತಿದೆ. ಆದರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿರುವದರಿಂದ ಇದರ ಮೇಲೆ ಕಣ್ಣಿಟ್ಟಿದ್ದ ಇತರರಿಗೆ ನಿರಾಸೆ ಉಂಟಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.