ಸೀತಾಯಣ ಮುಗಿಯಿತು
Team Udayavani, Mar 13, 2020, 5:19 AM IST
ಅಕ್ಷಿತ್ ಶಶಿಕುಮಾರ್ ಅಭಿನಯದ “ಸೀತಾಯಣ’ ಚಿತ್ರದ ಶೂಟಿಂಗ್ ಸದ್ದಿಲ್ಲದೆ ಪೂರ್ಣಗೊಂಡಿದ್ದು, ಸದ್ಯ ಈ ಚಿತ್ರದ ಡಬ್ಬಿಂಗ್ ಮತ್ತಿತರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತಕ್ಕೆ ತಲುಪಿದೆ. ಪಕ್ಕಾ ರೊಮ್ಯಾಂಟಿಕ್ ಕಂ ಕ್ರೈಂ ಸ್ಟೋರಿ ಎಳೆಯನ್ನು ಹೊಂದಿರುವ “ಸೀತಾಯಣ’ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ತೆಲುಗು ಮೂಲದ ನಿರ್ದೇಶಕ ಪ್ರಭಾಕರ್ ಆರಿಪಕ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಬೆಂಗಳೂರು, ಮಂಗಳೂರು, ಆಗುಂಬೆ, ವೈಜಾಕ್, ಹೈದರಾಬಾದ್, ಬ್ಯಾಂಕಾಕ್ ಮೊದಲಾದ ಕಡೆಗಳಲ್ಲಿ ಸುಮಾರು 63 ದಿನಗಳ ಕಾಲ ಚಿತ್ರೀಕರಣ ನಡೆಸಿರುವ ಚಿತ್ರತಂಡ ಸದ್ಯ ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ. “ಕಲರ್ ಕೌÉಡ್ಸ್ ಎಂಟರ್ಟೈನ್ಮೆಂಟ್ಸ್’ ಬ್ಯಾನರ್ನಲ್ಲಿ ರೋಹನ್ ಭಾರದ್ವಾಜ್, ಲಲಿತಾ ರಾಜಲಕ್ಷ್ಮೀ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಉಪೇಂದ್ರಕುಮಾರ್ ಅವರ ಕುಟುಂಬದ ಕುಡಿ ಪದ್ಮನಾಭ ಭಾರದ್ವಾಜ್ ಈ ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ನಟ ಪುನೀತ್ ರಾಜಕುಮಾರ್ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದು, ಕವಿರಾಜ್ ಮತ್ತು ಗೌಸ್ಫೀರ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಇನ್ನು ಚಿತ್ರದಲ್ಲಿ ಅಕ್ಷಿತ್ಗೆ ನಾಯಕಿಯಾಗಿ ಮುಂಬೈ ಬೆಡಗಿ ಅನಹಿತ್ ಭೂಷಣ್ ಜೋಡಿಯಾಗಿ ಹೆಜ್ಜೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ