“ಕಾಟಿ’ಗಳ ಉಪಟಳದಿಂದ ಕೃಷಿಕರ ಬದುಕಿನಲ್ಲಿ ಕತ್ತಲು

ಕನ್ನಡ್ಕ, ಸುಳ್ಯಪದವು ಪರಿಸರದಲ್ಲಿ ವ್ಯಾಪಕ ಹಾವಳಿ; ಹಿಂಡಿನಲ್ಲಿವೆ 14 ಕಾಡುಕೋಣ, ಕಾಡೆಮ್ಮೆಗಳು

Team Udayavani, Mar 13, 2020, 4:07 AM IST

kati

ಪುತ್ತೂರು: ತಾಲೂಕಿನ ಗ್ರಾಮಾಂತರ ಭಾಗಗಳಲ್ಲಿ ತೋಟಗಳಿಗೆ ಲಗ್ಗೆ ಇಡುವ ಕಾಡುಕೋಣಗಳ ವಿಪರೀತ ಉಪಟಳದಿಂದ ರೈತರು ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಆದರೆ ಇಲಾಖೆಯ ಕಡೆಯಿಂದ ಇದರ ನಿಯಂತ್ರಣಕ್ಕೆ ಸಮರ್ಪಕ ಪರಿಹಾರ ಸೂತ್ರವೇ ಇಲ್ಲ.

ಬಡಗನ್ನೂರು ಹಾಗೂ ಅರಿಯಡ್ಕ ಗ್ರಾಮ ವ್ಯಾಪ್ತಿಯ ಬಳ್ಳಿಕಾನ, ಪೆರಿಗೇರಿ, ಕೇಪುಳಕಾನ ಮೋಡಿಕೆ, ಮುಂಡೋಳೆ, ಅಂಬಟೆಮೂಲೆ ಪರಿಸರದಲ್ಲಿ ಸುಮಾರು 14 ಕಾಡುಕೋಣ, ಕಾಡೆಮ್ಮೆಗಳಿರುವ ಹಿಂಡು ಕೆಲವು ತಿಂಗಳುಗಳಿಂದ ಸುತ್ತಾಡುತ್ತಿದ್ದು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದೆ. ವ್ಯಾಪಕ ಪ್ರಮಾಣದಲ್ಲಿ ಕೃಷಿ ಹಾನಿ ಮಾಡುತ್ತಿದ್ದರೂ ಕೃಷಿಕರು ಮಾತ್ರ ಕೈಕಟ್ಟಿ ಕುಳಿತುಕೊಳ್ಳಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ.

ಕೆಲವು ವರ್ಷಗಳ ಹಿಂದಿನಿಂದಲೇ ಬಡಗನ್ನೂರು ಗ್ರಾಮದ ಕನ್ನಡ್ಕ, ಸುಳ್ಯಪದವು ಪರಿಸರದ ಕಾಡುಗಳಲ್ಲಿ ಈ ಕಾಡುಕೋಣಗಳ ಹಿಂಡು ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಳ್ಳಿಕಾನ, ಪೆರಿಗೇರಿ ಪರಿಸರಕ್ಕೆ ಲಗ್ಗೆ ಇಟ್ಟಿದ್ದು, ಈ ಭಾಗದಲ್ಲಿ ಕಾಡು ಹಾಗೂ ತೋಟಗಳು ಯಥೇತ್ಛ ಪ್ರಮಾಣದಲ್ಲಿ ಇರುವುದರಿಂದ ಉಪಟಳವೂ ಹೆಚ್ಚಾಗಿದೆ. ಕಾಡುಕೋಣಗಳ ಹಿಂಡು ಕೆಲವೊಮ್ಮೆ ರಸ್ತೆಗೂ ಬರುತ್ತಿದ್ದು, ಸವಾರರು ಹೆದರಿ ದಿಕ್ಕಾಪಾಲಾಗುತ್ತಾರೆ.

ಕಣ್ಣು ಮುಚ್ಚಿ ಕುಳಿತುಕೊಳ್ಳಬೇಕು!
ಕಾಡುಕೋಣಗಳು ನಾಡಿಗೆ ಪ್ರವೇಶ ಮಾಡಿದ್ದರೂ ಸ್ಥಳೀಯರಿಗೆ ಅಪಾಯ ಮಾಡಿಲ್ಲ. ಆದರೆ ಕೃಷಿ ಹಾನಿ ಹೆಚ್ಚಾಗಿದ್ದು, ಜನರನ್ನು ಹೈರಾಣು ಮಾಡಿದೆ.

ಕಣ್ಣೆದುರೇ ಕೃಷಿ ಹಾನಿಯಾಗುತ್ತಿದ್ದರೂ ಅರಣ್ಯ ಹಾಗೂ ವನ್ಯಜೀವಿ ಕಾಯ್ದೆಯ ಭಯದಿಂದ ಕೃಷಿಕರು ಕಣ್ಣು ಮುಚ್ಚಿ ಕುಳಿತುಕೊಳ್ಳಬೇಕಾದ ಸ್ಥಿತಿ ಇದೆ.

ಸಿರಿ ಮೂಡಲು ಬಿಡುವುದಿಲ್ಲ
ತೋಟಗಳಿಗೆ ಲಗ್ಗೆ ಇಡುವ ಕಾಡುಕೋಣಗಳು ಎರಡು -ಮೂರು ವರ್ಷಗಳಿಂದ ಸಾಕಿ ಹಿಂಗಾರ ಬಿಡಲು ಸಿದ್ಧವಾಗಿರುವ ಅಡಿಕೆ ಗಿಡ, ಸಿರಿ ಮೂಡುವ ತೆಂಗು, ಬಾಳೆ ಗಿಡಗಳನ್ನು ನಾಶ ಮಾಡುತ್ತವೆ. ಮುಖ್ಯವಾಗಿ ತೋಟದಲ್ಲಿ ನೀರಿನ ವ್ಯವಸ್ಥೆಗೆ ಅಳವಡಿಸಿರುವ ನಳ್ಳಿ, ಪೈಪ್‌ಗ್ಳನ್ನು ಮುರಿದು ಹಾಕುತ್ತಿವೆ. ಈ ನಷ್ಟವನ್ನು ಭರಿಸಿಕೊಂಡು ಏಗುವುದೇ ಕೃಷಿಕರಿಗೆ ಸವಾಲಾಗಿದೆ.

ಟ್ಯಾಂಕ್‌ಗೆ ಬಿದ್ದಿತ್ತು
ಎರಡು ದಿನಗಳ ಹಿಂದೆ ಅಂಬಟೆಮೂಲೆ ಪಟ್ಟಾಜೆಯಲ್ಲಿ ಕೃಷಿಕರೋರ್ವರ ಗುಡ್ಡದಲ್ಲಿ ನಿರ್ಮಿಸಲಾಗಿರುವ ನೀರು ಸಂಗ್ರಹದ ಟ್ಯಾಂಕ್‌ಗೆ ಅಳವಡಿಸಿದ್ದ ಸಿಮೆಂಟ್‌ ಶೀಟ್‌ ಮುರಿದು ಕಾಡುಕೋಣ ನೀರಿಗೆ ಬಿದ್ದಿತ್ತು. ಅಧಿಕಾರಿಗಳು ತೆರಳಿ ಸಾರ್ವಜನಿಕರ ಸಹಕಾರದೊಂದಿಗೆ ಅದನ್ನು ರಕ್ಷಿಸಿದ್ದು, ಟ್ಯಾಂಕ್‌ನಲ್ಲಿ ಕಡಿಮೆ ನೀರಿದ್ದ ಕಾರಣ ಯಾವುದೇ ಗಾಯವಿಲ್ಲದೆ ಪಾರಾಗಿದೆ.

ಗರ್ನಾಲ್‌ ಮದ್ದಾಗುವುದೇ?
ಕಾಡುಕೋಣಗಳ ಉಪಟಳದಿಂದ ರೋಸಿ ಹೋಗಿರುವ ಈ ಪರಿಸರದ ಕೃಷಿಕರು ಗರ್ನಾಲ್‌, ಪಟಾಕಿ ಸಿಡಿಸಿ ಅವುಗಳನ್ನು ಓಡಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಒಮ್ಮೆ ತೆರಳುವ ಹಿಂಡು ಕೆಲವೇ ಕ್ಷಣಗಳಲ್ಲಿ ಮತ್ತೆ ಆಗಮಿಸಿ ಕೃಷಿಕರಿಗೇ ಸವಾಲು ಹಾಕುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅವರ ಪರಿಹಾರ ಮಾರ್ಗವೂ ಗರ್ನಾಲ್‌ಗೆ ಸೀಮಿತವಾಗಿರುತ್ತದೆ ಎನ್ನುವ ಅಳಲು ರೈತರದ್ದು.

 ಸಣ್ಣ ಮೊತ್ತದ ಪರಿಹಾರ
ಕಾಡುಕೋಣಗಳ ಕಾಟಕ್ಕೆ ಇಲಾಖೆಯಿಂದ ಶಾಶ್ವತ ಪರಿಹಾರ ಇಲ್ಲ. ನಷ್ಟಕ್ಕೆ ಸಣ್ಣ ಮೊತ್ತದ ಪರಿಹಾರವಷ್ಟೇ ಲಭಿಸುತ್ತಿದೆ. ಆದರೆ ಕೆಲವು ವರ್ಷ ಸಾಕಿದ ಹಿಂಗಾರ ಬಿಡಲು ಆರಂಭವಾದ ತೆಂಗು, ಕಂಗು, ಬಾಳೆ ಗಿಡಗಳ ನಷ್ಟವನ್ನು ಸರಿದೂಗಿಸಲು ಸಾಧ್ಯವಿಲ್ಲ. ಒಟ್ಟಿನಲ್ಲಿ ಇವುಗಳ ಉಪಟಳ ರೈತರನ್ನು ಹೈರಾಣಾಗಿಸಿದೆ.
– ಲಿಂಗಪ್ಪ ಗೌಡ ಮೋಡಿಕೆ, ಸ್ಥಳೀಯ ನಿವಾಸಿ, ಕೃಷಿಕ

ಸಿಬಂದಿ ಓಡಿಸುತ್ತಾರೆ
ಕಾಡುಕೋಣಗಳ ಲಗ್ಗೆಯಿಂದ ತೋಟದಲ್ಲಿ ಉಂಟಾದ ನಷ್ಟವನ್ನು ಪರಿಶೀಲನೆ ನಡೆಸಿ ಪರಿಹಾರ ನೀಡ ಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಕಾಡು ಕೋಣಗಳು ಬಂದರೆ ಇಲಾಖೆ ಸಿಬಂದಿ ಓಡಿಸುವ ಕಾರ್ಯ ಮಾಡುತ್ತಾರೆ.
-ಮೋಹನ್‌ ಬಿ.ಜಿ., ವಲಯ ಅರಣ್ಯಾಧಿಕಾರಿ, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.