ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣ ಇಳಿಮುಖ
2019-20ನೇ ಸಾಲಿನಲ್ಲಿ 39 ಪ್ರಕರಣ ದಾಖಲು
Team Udayavani, Mar 14, 2020, 5:54 AM IST
ಉಡುಪಿ: ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. 2007ರಿಂದ 19ರ ವರೆಗೆ ಒಟ್ಟು 358 ಪ್ರಕರಣಗಳು ದಾಖಲಾಗಿವೆ. 2019-20ನೇ ಸಾಲಿನಲ್ಲಿ ಒಟ್ಟು 39 ಪ್ರಕರಣಗಳು ದಾಖಲಾಗಿದ್ದು, 21 ಪ್ರಕರಣಗಳು ಇತ್ಯರ್ಥವಾಗಿವೆ. 14 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು 4 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿಯಿವೆ.
2016-17ನೇ ಸಾಲಿನಲ್ಲಿ 40 ಪ್ರಕರಣ, 2017-18ರಲ್ಲಿ 62, 2018-19ರಲ್ಲಿ 67 ಪ್ರಕರಣಗಳು ದಾಖಲಾಗಿವೆ. 2019-20ರ ವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ ಕೇವಲ 39. ಈ ಪೈಕೆ 2016-17ನೇ ಸಾಲಿನಲ್ಲಿ 11, 2017-18ನೇ ಸಾಲಿನಲ್ಲಿ 17, 2018-19ನೇ ಸಾಲಿನಲ್ಲಿ 10 ಪ್ರಕರಣಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಒಟ್ಟು 190 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.
ಒಬ್ಬ ವ್ಯಕ್ತಿಯ ಮೇಲೆ ದೈಹಿಕ, ಮಾತಿನ ಮೂಲಕ ಭಾವನಾತ್ಮಕವಾಗಿ ನಡೆಯುವ ಹಿಂಸೆಯನ್ನು ಕೌಟುಂಬಿಕ ದೌರ್ಜನ್ಯ ಎನ್ನಲಾಗುತ್ತದೆ. ಇದರಿಂದ ಬಳಲುತ್ತಿರುವವರಲ್ಲಿ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಭಾರತದಲ್ಲಿ ಕೌಟುಂಬಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಬಗ್ಗೆ ಸರಕಾರವು 2005ರಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತಂದಿತ್ತು. ಅನಂತರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಹತೋಟಿಗೆ ಬರತೊಡಗಿತ್ತು.
ಪುರುಷರ ಮೇಲೂ ದೌರ್ಜನ್ಯ
ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಮಹಿಳೆಯರ ಮೇಲೆಯೇ ನಡೆಯುತ್ತಿವೆ. ಹಾಗೆಯೇ ಈ ಕಾನೂನಿನ ದುರ್ಬಳಕೆಯೂ ಆಗುತ್ತಿದೆ. ದೌರ್ಜನ್ಯ ನಡೆಸದಿದ್ದರೂ ಜೀವನಾಂಶಕ್ಕಾಗಿ ದೌರ್ಜನ್ಯದ ಆರೋಪ ಹೊರಿಸುವ ಘಟನೆಗಳೂ ಜಿಲ್ಲೆಯಲ್ಲಿ ನಡೆದಿವೆ.ಆದರೆ ಪುರುಷರ ಮೇಲೆ ನಡೆದ ಕೌಟುಂಬಿಕ ದೌರ್ಜನ್ಯ ಕಾಯ್ದೆಯ ವಿರುದ್ಧ ಹೋರಾಡಲು ಯಾವುದೇ ಸೂಕ್ತ ಕಾನೂನು ಇಲ್ಲದ ಕಾರಣ ಅವುಗಳು ಬೆಳಕಿಗೆ ಬರುತ್ತಿಲ್ಲ.
ಸಖಿ ಸೆಂಟರ್ ಮೂಲಕ ನೆರವು
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಖಿ ಸೆಂಟರ್, ಸಾಂತ್ವನ ಕೇಂದ್ರಗಳ ಮೂಲಕ ಸಮಸ್ಯೆ ನಿವಾರಿಸುವ ಕೆಲಸ ಮಾಡಲಾಗುತ್ತಿದೆ. ಲೈಂಗಿಕ ದೌರ್ಜನ್ಯ, ಮಾನಸಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಖೀ ಒನ್ ಸೆಂಟರ್ ಮೂಲಕ ಮಾಹಿತಿ ನೀಡಲಾಗುತ್ತಿದೆ. ಅಲ್ಲದೆ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಖೀ ವನ್ ಸ್ಟಾಪ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.
ಪ್ರಕರಣಗಳ ಇತ್ಯರ್ಥಕ್ಕೆ ಯತ್ನ
ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಕೌನ್ಸೆಲಿಂಗ್ ಮಾಡುವಂತಹ ಕೆಲಸಗಳು ನಡೆಯುತ್ತಿವೆ. ಸಾಂತ್ವನ ಕೇಂದ್ರಗಳ ಮೂಲಕ ಅಧಿಕಾರಿಗಳು ದೌರ್ಜನ್ಯಕ್ಕೊಳಗಾದವರೊಂದಿಗೆ ಚರ್ಚಿಸಿ ಪ್ರಕರಣವನ್ನು ಇತ್ಯರ್ಥಪಡಿಸಲು ಯತ್ನಿಸುತ್ತಿದೆ.
-ಶೇಷಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು
-ಪುನೀತ್ ಸಾಲ್ಯಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?
ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
Re Release; ಭರ್ಜರಿ ಓಪನಿಂಗ್ ಪಡೆದ ಉಪ್ಪಿ ‘ಎ’
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ