ಒಲಿಂಪಿಕ್ಸ್‌ ರಿಲೇ ಮೊಟಕು


Team Udayavani, Mar 14, 2020, 4:25 AM IST

relay-competition

ಏಥೆನ್ಸ್‌ : ಕೊರೊನಾ ಪರಿಣಾಮವಾಗಿ ಒಲಿಂಪಿಕ್ಸ್‌ ಟಾರ್ಚ್‌ ರಿಲೇ ಒಂದೇ ದಿನದಲ್ಲಿ ಮೊಟಕುಗೊಂಡಿದೆ. ಗುರುವಾರವಷ್ಟೇ ಗ್ರೀಸ್‌ನ ಒಲಿಂಪಿಯಾದಲ್ಲಿ ಒಲಿಂಪಿಕ್ಸ್‌ ಜ್ಯೋತಿಯನ್ನು ಬೆಳಗಿಸಿ ರಿಲೇ ಆರಂಭಿಸಲಾಗಿತ್ತು. ಇದೀಗ ಶುಕ್ರವಾರ ಅರ್ಧದಲ್ಲೇ ನಿಂತಿದೆ.

ಕೊರೊನಾ ವೈರಸ್‌ ಎಚ್ಚರಿಕೆ ಇರುವ ಹೊರತಾಗಿಯೂ ಭಾರೀ ಸಂಖ್ಯೆಯಲ್ಲಿ ಇದನ್ನು ವೀಕ್ಷಿಸಲು ಜನ ಸೇರುತ್ತಿದ್ದಾರೆ. ಇದರಿಂದಾಗಿ ಓಟವನ್ನೇ ರದ್ದುಪಡಿಸಲು ಗ್ರೀಸ್‌ ಒಲಿಂಪಿಕ್ಸ್‌ ಸಮಿತಿ ತೀರ್ಮಾನಿಸಿದೆ.

ಗ್ರೀಕ್‌ನಲ್ಲಿ ಉಳಿದಿರುವ ಓಟದ ಭಾಗವನ್ನು ರದ್ದುಪಡಿಸಲಾಗಿದೆ. ಆದರೆ ಮಾ. 19ರಂದು ನಿಗದಿಯಾಗಿರುವಂತೆ ಒಲಿಂಪಿಕ್ಸ್‌ ಜ್ಯೋತಿಯನ್ನು ಟೋಕಿಯೊ ಒಲಿಂಪಿಕ್ಸ್‌ ಆಯೋಜಕರಿಗೆ ಹಸ್ತಾಂತರಿಸಲಾಗುವುದು. ಆದರೆ ಇದಕ್ಕೆ ಪ್ರೇಕ್ಷಕರು ಇರುವುದಿಲ್ಲ ಎಂದು ಒಲಿಂಪಿಕ್ಸ್‌ ಸಮಿತಿ ಹೇಳಿದೆ.

ಒಲಿಂಪಿಕ್ಸ್‌ ಟಾರ್ಚ್‌ ರಿಲೇ ಸಂದರ್ಭದಲ್ಲಿ ಜನ ಸೇರಬಾರದು ಎಂದು ಪದೇ ಪದೇ ವಿನಂತಿಸಿದರೂ ಪ್ರಯೋಜನವಾಗಿಲ್ಲ. ಓಟವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಸಾವಿರಾರು ಜನರು ಸೇರುತ್ತಿದ್ದಾರೆ. ಇದರಿಂದಾಗಿ ಕೊರೊನಾ ವೈರಸ್‌ ಹರಡುವ ಭೀತಿ ಎದುರಾಗಿದ್ದು, ಹೀಗಾಗಿ ಓಟವನ್ನು ಮೊಟಕುಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಗ್ರೀಕ್‌ನಾದ್ಯಂತ ಕಟ್ಟೆಚ್ಚೆರ
ಗ್ರೀಸ್‌ನಲ್ಲಿ 117 ಮಂದಿ ಕೊರೊನಾ ಸೋಂಕಿಗೊಳಗಾಗಿರುವುದು ದೃಢಪಟ್ಟಿದೆ. ಇವರಲ್ಲೊಬ್ಬರು 10 ದಿನ ಚಿಕಿತ್ಸೆ ಪಡೆದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೀಗಾಗಿ ಗ್ರೀಕ್‌ನಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.

ಸ್ಪಾರ್ಟ ನಗರದಲ್ಲಿ ಹಾಲಿವುಡ್‌ ನಟ ಗೆರಾರ್ಡ್‌ ಬಟ್ಲರ್‌ ಒಲಿಂಪಿಕ್ಸ್‌ ಜ್ಯೋತಿಯನ್ನು ಬೆಳಗಿಸಿದ್ದಾರೆ. ಗ್ರೀಸ್‌ನ ಪ್ರಾಚೀನ ನಗರ ಹಾಗೂ ಒಲಿಂಪಿಕ್ಸ್‌ ಹುಟ್ಟಿದ ಒಲಿಂಪಿಯಾದಲ್ಲಿ ಗುರುವಾರ ಜ್ಯೋತಿಯನ್ನು ಬೆಳಗಿಸುವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಇರಲಿಲ್ಲ. ಆದರೆ ಜ್ಯೋತಿಯ ಓಟದ ದಾರಿಯಲ್ಲಿ ಸಿಗುವ ನಿಲುಗಡೆಗಳಲ್ಲಿ ಜ್ಯೋತಿಯನ್ನು ವೀಕ್ಷಿಸಲು ಜನ ಸೇರುತ್ತಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.