ರಂಗಪಂಚಮಿ ರಂಗು


Team Udayavani, Mar 14, 2020, 2:22 PM IST

gadaga-tdy-1

ಗದಗ: ಕೊರೊನಾ ವೈರಸ್‌ ಆತಂಕದ ಮಧ್ಯೆಯೂ ರಂಗಪಂಚಮಿ ಅಂಗವಾಗಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಶುಕ್ರವಾರ ಬಣ್ಣದಾಟದ ಸಂಭ್ರಮ ಮನೆ ಮಾಡಿತ್ತು. ಹಿರಿಯ-ಕಿರಿಯ, ಮಹಿಳೆ- ಪುರುಷ ಹಾಗೂ ಜಾತಿಗಳ ಭೇದವಿಲ್ಲದೇ ಪರಿಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಇಲ್ಲಿನ ಸ್ಟೇಷನ್‌ ರಸ್ತೆ ಸೇರಿದಂತೆ ವಿವಿಧೆಡೆ ಸಾರ್ವಜನಿಕ ರಸ್ತೆಗಳಲ್ಲಿ ಯುವ ಸಮುದಾಯ ಡಿಜೆ ಸದ್ದು ಹಾಗೂ ನೀರಿನ ಕಾರಂಜಿಯಡಿ ಕುಣಿದು ಕುಪ್ಪಳಿಸಿದರು.

ಪ್ರತಿ ವರ್ಷದಂತೆ ಹೋಳಿ ಹುಣ್ಣಿಮೆಯಾದ ಐದನೇ ದಿನದಂದು ಅವಳಿ ನಗರದಲ್ಲಿ ರಂಗಪಂಚಮಿ ಆಚರಿಸಲಾಗುತ್ತದೆ. ಅದರಂತೆ ಅವಳಿ ನಗರದ ವಿವಿಧ ಬಡಾವಣೆಗಳಲ್ಲಿ ಬೆಳಗಿನ ಜಾವ ಕಾಮದೇವನನ್ನು ದಹಿಸಿದ ಬಳಿಕ ಬಣ್ಣದೋಕುಳಿ ಚಾಲನೆ ಪಡೆಯುತ್ತದೆ. ನಗರದ ಗಾಂಧಿ  ಸರ್ಕಲ್‌, ವಿಶ್ವೇಶ್ವರಯ್ಯ ರೋಡ್‌, ಹಳೆ ಸರಾಫ್‌ ಬಜಾರ್‌, ಟಾಂಗಾ ಕೂಟ, ಸ್ಟೇಷನ್‌ ರಸ್ತೆ, ನಾಮಜೋಶಿ ರಸ್ತೆ, ಪಾಲಾಬಾದಾಮಿ ರೋಡ್‌, ಜೆಟಿ ಕಾಲೇಜ್‌ ರೋಡ್‌, ವೆಂಕಟೇಶ ಟಾಕೀಸ್‌ ರೋಡ್‌, ಬೆಟಗೇರಿ ಬಸ್‌ ನಿಲ್ದಾಣ, ಬಳಗಾನೂರ ರೋಡ್‌, ಮುಳಗುಂದ ನಾಕಾ, ಮುಳಗುಂದ ರಸ್ತೆ, ಹುಡ್ಕೊ ಕಾಲೋನಿ, ನರಸಪಾರು, ಬೆಟಗೇರಿ, ಗಂಗಾಪುರ ಪೇಟೆ ಸರ್ಕಲ್‌, ಹೊಸ ಬಸ್‌ ನಿಲ್ದಾಣದ ಹಿಂಭಾಗ ಸೇರಿದಂತೆ ಹಲವೆಡೆ ಜಮಾಯಿಸಿದ್ದ ಯುವಕ-ಯುವತಿಯರು ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಸ್ನೇಹಿತರು, ಸಂಬಂಧಿ ಕರು ಬಣ್ಣಗಳಲ್ಲಿ ಮಿಂದೇಳುತ್ತಿದ್ದಂತೆ ಸಿಳ್ಳೆ, ಕೇಕೆ ಹಾಕಿದರು.

ಎಲ್ಲೆಡೆ ಹಲಗೆ ಸದ್ದು: ಹೋಳಿ ಹಬ್ಬದ ನಿಮಿತ್ತ ಅವಳಿ ನಗರದ ಎಲ್ಲ ಬಡಾವಣೆ, ಪ್ರಮುಖ ರಸ್ತೆಗಳಲ್ಲಿ ಹಲಗೆ, ಪುಂಗಿ ಸದ್ದು ಜೋರಾಗಿತ್ತು. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಜಮಾಯಿಸಿದ್ದ ಯುವಕರು ತಮಟೆ ಬಾರಿಸಿ, ಟಪ್ಪಾಂಗುಚ್ಚಿ ಹೆಜ್ಜೆ ಹಾಕಿದರು. ಕೆಲವರು ಬೈಕ್‌ಗಳಲ್ಲಿ ಹಲಗೆ ಬಾರಿಸುತ್ತ, ಸಿಳ್ಳೆ ಹಾಕುತ್ತ, ಕೇಕೆ ಹೊಡೆಯುತ್ತ ನಗರ ಸುತ್ತಿದರು.

ಈ ವೇಳೆ ಯುವತಿಯರೂ ನಾವೇನು ಕಮ್ಮಿ ಎನ್ನುವಂತೆ ಗೆಳತಿಯರ ಮನೆಗಳಿಗೆ ತೆರಳಿ ಬಣ್ಣ ಹಚ್ಚಿ, ನಗೆ ಬೀರಿದರು. ಇನ್ನುಳಿದಂತೆ ವಿವಿಧ ಬಡಾವಣೆಗಳಲ್ಲಿ ಮಹಿಳೆಯರೂ ಅಕ್ಕಪಕ್ಕದವರಿಗೆ ಬಣ್ಣಿ ಹಚ್ಚುವ ಮೂಲಕ ಸಂಭ್ರಮಾಚರಿಸಿದರು.

ಅಣಕು ಶವಯಾತ್ರೆ: ಇಲ್ಲಿನ ಶಹಪುರ ಪೇಟೆ, ಖಾನತೋಟ ಬೆಟಗೇರಿಯ ವಿವಿಧೆಡೆ ಚಿಣ್ಣರು, ಚಟ್ಟದಲ್ಲಿ ಗೆಳೆಯನನ್ನು ಮಲಗಿಸಿ “ಕಾಮಣ್ಣ ಸತ್ತಾನೋ’ ಎಂದು ಬಾಯಿ ಬಡೆದುಕೊಳ್ಳುತ್ತಿದ್ದರು. ಬಡಾವಣೆ ಮನೆ ಮನೆಗೆ ಅಣಕು ಶವಯಾತ್ರೆ ನಡೆಸಿ, ಕಾಮಣ್ಣ ಪಟ್ಟಿ (ದೇಣಿಗೆ) ಸಂಗ್ರಹಿಸುತ್ತಿರುವುದು ಕಂಡುಬಂತು.

ಕುಣಿದು ಕುಪ್ಪಳಿಸಿದರು: ಸ್ಟೇಷನ್‌ ರಸ್ತೆಯ ತೋಂಟದಾರ್ಯ ಆಟೋ ನಿಲ್ದಾಣದಲ್ಲಿ ಡಿಜೆ ಸೌಂಡ್‌ ನೊಂದಿಗೆ ನೂರಾರು ಯುವಕರು ಗಂಟೆಗಳ ಕಾಲ ಕುಣಿದು ಕುಪ್ಪಳಿಸಿದರು. ಡಿಜೆಯೊಂದಿಗೆ ಟ್ಯಾಂಕರ್‌ ಗೆ ಅಳವಡಿಸಿದ್ದ ಕಾರಂಜಿಯಲ್ಲಿ ಚಿಮ್ಮುತ್ತಿದ್ದ ನೀರಿನ ಸಿಂಚನಕ್ಕೆ ಮೈಯೊಡ್ಡಿ, ಹೆಜ್ಜೆ ಹಾಕಿದರು. ಕನ್ನಡ ಹಾಗೂ ಹಿಂದಿ ಚಲನಚಿತ್ರಗಳು ಹಲವು ಜನಪ್ರಿಯ ಹಾಡುಗಳು ಯುವಕರ ಸಂಭ್ರಮವನ್ನು ಇಮ್ಮಡಿಗೊಳಿಸಿದವು. ಇನ್ನೂ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೆಲವರು ಮನೆಯಲ್ಲೇ ಕಾಲ ಕಳೆದರು. ಹೀಗಾಗಿ ನಗರದ ವಿವಿಧೆಡೆ ಹೋಳಿ ಮಂಕಾಗಿತ್ತು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.