ಶಿಡ್ಲಘಟ್ಟ ವಲಯ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ


Team Udayavani, Mar 14, 2020, 3:44 PM IST

ಶಿಡ್ಲಘಟ್ಟ ವಲಯ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ

ಶಿಡ್ಲಘಟ್ಟ: ಅರಣ್ಯ ಇಲಾಖೆ ಜಾಗವನ್ನು ಸಂರಕ್ಷಣೆ ಮಾಡಿ ರಾಜ್ಯದಲ್ಲಿಯೇ ಗಮನ ಸೆಳೆದಿದ್ದ ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಸಹಿತ ಅರಣ್ಯ ಇಲಾಖೆ ಸಿಬ್ಬಂದಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆಯಲಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಾ.23 ರಂದು ನಡೆಯಲಿರುವ ಸಮಾರಂಭದಲ್ಲಿ ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಅವರೊಂದಿಗೆ ಶಿಡ್ಲಘಟ್ಟ ಅರಣ್ಯ ರಕ್ಷಕ ಟಿ.ಡಿ. ಸಂದೀಪ್‌ ಮತ್ತು ಅರಣ್ಯ ಕ್ಷೇಮಾ ಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಮುಖ್ಯಮಂತ್ರಿಗಳ ಗೌರವಕ್ಕೆ ಪಾತ್ರರಾಗಲಿದ್ದಾರೆ.

ಹೆಚ್‌.ಎಸ್‌.ಶ್ರೀಲಕ್ಷ್ಮೀ: ಕಳೆದ ಆಗಸ್ಟ್‌ ತಿಂಗಳಲ್ಲಿ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಅವರು ತಮ್ಮ ಕೆಲವೇ ಸಿಬ್ಬಂದಿಯೊಂದಿಗೆ ತಾಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10ರ ಅರಣ್ಯ ಭೂಮಿಯನ್ನು ರಾತ್ರೋ ರಾತ್ರಿ ಊಳಲು ಬಂದವರನ್ನು ಎದುರಿಸುತ್ತಿದ್ದರು. ಹಲವು ಮುಖಂಡರಿಂದ ಬೆದರಿಕೆ ಕರೆ ಬಂದರೂ ಜಗ್ಗದೇ ಒಂದಿಂಚು ಸಹ ಅರಣ್ಯ ಜಮೀನನ್ನು ಬಿಡುವುದಿಲ್ಲ ಎಂದು ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯಿಂದ ಅಲ್ಲಿ ಗಿಡಗಳನ್ನು ನೆಡುವಲ್ಲಿ ಯಶಸ್ವಿಯಾಗಿದ್ದರು. ಅವರ ಪರಿಶ್ರಮ, ಸೇವಾಕ್ಷಮತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಿ.ಸಿ.ಸಿ.ಎಫ್‌. ಪುನಟಿ ಶ್ರೀಧರ್‌ ಶ್ಲಾಘಿಸಿದರು.

ಒತ್ತುವರಿ ತೆರವು, ಜಿಂಕೆ ರಕ್ಷಣೆ: ಅರಣ್ಯ ರಕ್ಷಕ ಟಿ.ಡಿ.ಸಂದೀಪ್‌ ಮತ್ತು ಅರಣ್ಯ ಕ್ಷೇಮಾಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಅವರು ಶಿಡ್ಲಘಟ್ಟ ತಾಲೂಕಿನ ವರದನಾಯಕನಹಳ್ಳಿ ಸರ್ವೇ ನಂ 10ರ 25 ಹೆಕ್ಟೇರ್‌ ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯದಲ್ಲಿ ಸಕ್ಷಮವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಅರಣ್ಯದಲ್ಲಿ ಅಪಘಾತಕ್ಕೀಡಾದ ಜಿಂಕೆಗಳನ್ನು ರಕ್ಷಿಸಿರುವುದಲ್ಲದೇ, ಅರಣ್ಯ ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣಾ ವರದಿಗಳನ್ನು ಸಲ್ಲಿಸಿದ್ದಾರೆ.

ಹೆಚ್‌.ಎಸ್‌.ಶ್ರೀಲಕ್ಷ್ಮೀ 2015 ರಲ್ಲಿ ವಲಯ ಅರಣ್ಯಾಧಿಕಾರಿಯಾಗಿ ನೇಮಕಗೊಂಡರು. ಎರಡು ವರ್ಷಗಳ ಕಾಲ ತೆಲಂಗಾಣ ಅರಣ್ಯ ಅಕಾಡೆಮಿಯಲ್ಲಿ ತರಬೇತಿ ಪಡೆದು ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಯಾದರು. 2019 ರ ಆಗಸ್ಟ್ ನಲ್ಲಿ ಶಿಡ್ಲಘಟ್ಟ ತಾಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10ರ 25 ಹೆಕ್ಟೇರ್‌ ಅರಣ್ಯ ಒತ್ತುವರಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯದಲ್ಲಿ ಅಪಘಾತಕ್ಕೀಡಾದ ಜಿಂಕೆಗಳನ್ನು ಸಂರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅರಣ್ಯ ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣಾ ವರದಿಗಳನ್ನು ಸಲ್ಲಿಸಿದ್ದಾರೆ. 2020ರಲ್ಲಿ ತಲಕಾಯಲಬೆಟ್ಟ ವ್ಯಾಪ್ತಿಯ 4ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿರುವ ಕಳೆದ ಎರಡು ವರ್ಷಗಳಲ್ಲಿ ಅರಣ್ಯ ಉಳಿಸುವ ನಿಟ್ಟಿನಲ್ಲಿ ಸುಮಾರು 200 ಎಫ್‌ಐಆರ್‌ ದಾಖಲಿಸಿರುವುದು ವಿಶೇಷವಾಗಿದೆ.

ಶ್ರೀ ಲಕ್ಷ್ಮೀ ಕಿರು ಪರಿಚಯ :  ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಸಂಜೀವಪ್ಪ ಮತ್ತು ಚೌಡಮ್ಮ ದಂಪತಿಗಳ ಪುತ್ರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಒಂದರಿಂದ 10ನೇ ತರಗತಿ ವರೆಗೆ ಶ್ರೀಮುನೇಶ್ವರ ವಿದ್ಯಾನಿಕೇತನ ಆಂಗ್ಲ ಶಾಲೆಯಲ್ಲಿ ಮುಗಿಸಿ

ವಿಜಯ ಜೂನಿಯರ್‌ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿ ನಂತರ ಜಯ ನಗರದ ಈಸ್ಟ್‌ಪಾಯಿಂಟ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯೂನಿಕೇಶನ್‌ನಲ್ಲಿ ಬಿಇ ಪದವಿ ಪಡೆದಿದ್ದಾರೆ. ಬಳಿಕ 2015ನೇ ಬ್ಯಾಚ್‌ನಲ್ಲಿ ರೇಂಜ್‌ ಆಫೀಸರ್‌ ಆಗಿ ಆಯ್ಕೆಯಾಗಿ 2 ವರ್ಷ ತೆಲಂಗಾಣ ರಾಜ್ಯದ ಅರಣ್ಯ ಅಕಾಡೆಮಿಯಲ್ಲಿ ತರಬೇತಿ ಪಡೆದ ಬಳಿಕ ಶಿಡ್ಲಘಟ್ಟ ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಪ್ರಥಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.