ವಾಯುಮಾಲಿನ್ಯ ನಿಯಂತ್ರಣಕ್ಕೆ ಪಾಚಿ ಬಳಕೆ ಅಗತ್ಯ


Team Udayavani, Mar 5, 2020, 4:19 AM IST

ವಾಯುಮಾಲಿನ್ಯ ನಿಯಂತ್ರಣಕ್ಕೆ ಪಾಚಿ ಬಳಕೆ ಅಗತ್ಯ

ವಾಯುಮಾಲಿನ್ಯವು ಇಂದು ದೇಶವನ್ನು ಅನೇಕ ಸಮಸ್ಯೆಗಳಿಗೀಡು ಮಾಡುತ್ತಿದೆ. ಇದರಿಂದ ಪರಿಸರವು ಹಾಳಾಗುತ್ತಿದೆ ಮತ್ತು ಮನುಕುಲದ ಆರೋಗ್ಯದ ಮೇಲೆ ಕೂಡ ಪ್ರತಿಕೂಲ ಪರಿಣಾಮ ಬೀರಿದೆ. ಹೀಗಾಗಿ ಆಡಳಿತ ಸಹಿತ ಸಾಮಾನ್ಯ ಜನರು ಕೂಡ ವಾಯು ಮಾಲಿನ್ಯ ನಿಯಂತ್ರಣಕ್ಕೆ ಹಲವಾರು ಮಾರ್ಗೋಪಾಯಗಳನ್ನು ಹುಡುಕುತ್ತಿದ್ದಾರೆ.

ನಗರೀಕರಣದಿಂದ ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಇವುಗಳು ಉಗುಳುವ ಹೊಗೆಯಿಂದಾಗಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕಾಗಿ ಆಡಳಿತ ವ್ಯವಸ್ಥೆಯೂ ಕೂಡ ಹಲವಾರು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರಗಿಸಿದರೂ ಕೂಡ ಏತನ್ಮಧ್ಯೆ ವಾಯು ಮಾಲಿನ್ಯದ ಹೆಚ್ಚಳವಾಗುತ್ತಿದೆ ವಿನಾ ಕಡಿಮೆಯಾಗುತ್ತಿಲ್ಲ. ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರುನಂತಹ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣವನ್ನು ಗಮನಿಸಬಹುದು. ಇದಕ್ಕೆ ನಾವು ಸೂಕ್ತವಾದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಾಚಿಯ ಬಳಕೆಯಿಂದಾಗಿ ವಾಯು ಮಾಲಿನ್ಯ ನಿಯಂತ್ರಿಸಬಹುದು ಎಂಬುದು ಸಂಶೋಧನೆಯ ಮೂಲಕ ತಿಳಿದು ಬಂದಿದೆ. ಪಾಚಿಯನ್ನು ಸಮರ್ಪಕ, ಪರಿಣಾಮಕಾರಿಯಾಗಿ ಬಳಕೆ ಮಾಡಿದರೆ ನಾವು ಮಾಲಿನ್ಯ ನಿಯಂತ್ರಿಸಬಹುದಾಗಿದೆ.

ಯಾರಿಂದ ಸಂಶೋಧನೆ ?
ಪಾಚಿಯಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಬಹುದು ಎಂದು ಯುವ ಸಂಶೋಧಕ ಕೀರ್ತನ್‌ ಶಂಕರ್‌ ಮತ್ತು ಗಗನ್‌ ಗೌಡ ಎಂಬ ಇಬ್ಬರು ಸಂಶೋಧಕರು ಇದನ್ನು ಸಂಶೋಧಿಸಿದರು. ಇವರು ಪ್ರಮುಖ ನಗರಗಳಿಗೆ ಬಾಧಿಸುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸುವುದಕ್ಕಾಗಿಯೇ ಗ್ರೀನ್‌ ಸಿಟಿ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಅರಿತು, ಇದಕ್ಕಾಗಿ ಪಾಚಿಯಿಂದ ಪರಿಹಾರ ಕಂಡುಕೊಂಡಿದ್ದಾರೆ. ಗಿಡಗಳ ರೂಪದಲ್ಲಿ ಬೆಳೆಸುವುದು ಅಥವಾ ನಮ್ಮ ಮನೆಗಳ ಗೋಡೆಗಳಿಗೆ ಪಾಚಿಯನ್ನು ಅಂಟಿಸುವುದರಿಂದ ಇದು ವಾಯು ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂಬುದನ್ನು ತಮ್ಮ ಸಂಶೋಧನೆಯ ಮೂಲಕ ಅವರು ತಿಳಿಸಿದ್ದಾರೆ.

ಎಲ್ಲೆಲ್ಲಿ ಪ್ರಯೋಗ
ಅಮೆರಿಕ, ಬರ್ಲಿನ್‌ ದೇಶಗಳಲ್ಲಿ ಈ ಮಾದರಿಯ ಪಾಚಿ ಮರಗಳಲ್ಲಿ ಸಾರ್ವಜನಿಕ ಪ್ರದೇಶಗಳನ್ನು ನೆಡಲಾಗುತ್ತದೆ. ಇದರಿಂದ ವಾಯು ಮಾಲಿನ್ಯ ನಿಯಂತ್ರಿಸಲಾಗುತ್ತದೆ. ಈ ಮಾದರಿಯನ್ನು ನಾವು ನಮ್ಮ ನಗರಗಳಲ್ಲಿ ಅಳವಡಿಸಬೇಕಿದೆ ಅಷ್ಟೇ. ಈಗಾಗಲೇ ಸ್ಮಾರ್ಟ್‌ ಸಿಟಿ ಪಟ್ಟಿಯಲ್ಲಿರುವ ನಮ್ಮ ಮಂಗಳೂರು ಸ್ವತ್ಛ ಮಂಗಳೂರ ಮಾಡಲು ಹಲವಾರು ಪ್ರಯೋಗಗಳನ್ನು ಮಾಡಲಾಗುತ್ತಿದ್ದು ಪಾಚಿ ಮರಗಳಿಗೆ ಆದ್ಯತೆ ನೀಡುವ ಮೂಲಕ ನಾವು ವಾಯು ಮಾಲಿನ್ಯ ನಿಯಂತ್ರಣಕ್ಕೆ ಪಣ ತೊಡಬೇಕು.

ಪಾಚಿ ಗಿಡಗಳಿಂದ ಹೇಗೆ ಕಾರ್ಯ ನಿರ್ವಹಣೆ
ನೈಸರ್ಗಿಕ ಪಾಚಿ ಗಿಡಗಳನ್ನು ನೆಡುವುದರಿಂದ ಇವು ಕಾರ್ಬನ್‌ ಡೈ ಆಕ್ಸೆ„ಡ್‌, ಧೂಳಿನ ಕಣಗಳನ್ನು ನಿಯಂತ್ರಿಸುತ್ತವೆ . ಅಲ್ಲದೇ ಕಾರ್ಬನ್‌ ಡೈ ಆಕ್ಸೆ„ಡ್‌ನ್ನು ಆಮ್ಲಜನಕವಾಗಿ ಪರಿವರ್ತಿಸುವಲ್ಲಿ ಪಾಚಿಗಳೂ ಪ್ರಮುಖವಾಗಿ ಕಾರ್ಯನಿರ್ವಹಿ ಸುತ್ತವೆ ಎಂದು ಸಂಶೋಧನೆಯಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಇದು ನಮ್ಮ ನಗರಗಳಿಗೆ ಪೂರಕ ಯೋಜನೆಯನ್ನು ಸಿದ್ಧಮಾಡಬಹುದಾಗಿದೆ.

ನಾವೇನು ಮಾಡಬಹುದು?
ವಾಯು ಮಾಲಿನ್ಯ ನಿಯಂತ್ರಣಕ್ಕೆ ನಾವೇನು ಮಾಡಬಹುದು ಎಂದಾಗ ನಮ್ಮಿಂದಲೇ ಮಾಲಿನ್ಯವಾಗುವಾಗ ಅದರ ನಿಯಂತ್ರಣ ಕೂಡ ನಮ್ಮಿಂದಲೇ ಆಗಬೇಕಿದೆ. ಈ ಕಾರಣಕ್ಕಾಗಿ ನಾವು ಪಾಚಿಯನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಬೇಕಾಗುತ್ತದೆ. ಅದಕ್ಕಾಗಿ ನೈಸರ್ಗಿಕ ಪಾಚಿ ಮರಗಳನ್ನು ಕೂಡ ನಾವು ಬೆಳೆಸಬೇಕು. ನಮ್ಮ ಮನೆ, ರೆಸ್ಟೋರೆಂಟ್‌ ಮತ್ತು ಬಹುಮಹಡಿ ಕಟ್ಟಡಗಳನ್ನು ಕಟ್ಟುವಾಗ ಗೋಡೆಗಳಿಗೆ ಪಾಚಿ ಬಳಕೆ ಮಾಡುವುದು ಒಳಿತು ಎಂಬುದು ಕಾಳಜಿಯ ಅಭಿಪ್ರಾಯ. ಇದಕ್ಕೆ ನಾವು ಪಣತೊಡಬೇಕಿದೆ ಅಷ್ಟೇ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.