ಶೃಂಗೇರಿ ಶಾಸಕರ ಪುತ್ರಿ ವಿವಾಹಕ್ಕೂ ಕೊರೊನಾ ಬಿಸಿ
Team Udayavani, Mar 15, 2020, 3:03 AM IST
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಮಗಳ ವಿವಾಹ ಸಮಾರಂಭಕ್ಕೂ ಕೊರೊನಾ ಬಿಸಿ ಮುಟ್ಟಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ರಾಜೇ ಗೌಡ, ತಮ್ಮ ಮಗಳು ಡಾ|ಸಂಜನಾ ಮತ್ತು ಕಾಫಿ ಬೆಳೆಗಾರ ಅತ್ತಿಕಟ್ಟೆ ಜಗನ್ನಾಥ್ ಅವರ ಪುತ್ರ ವಚನ್ ಅವರ ವಿವಾಹ ಸಮಾರಂಭ ಮಾ.19ಕ್ಕೆ ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಬೇಕಿತ್ತು.
ವಿವಾಹ ಸಮಾರಂಭಕ್ಕೆ ಸಾವಿರಾರು ಜನ ಭಾಗ ವಹಿ ಸುವ ನಿರೀಕ್ಷೆ ಇತ್ತು. ಈಗಾಗಲೇ ಆಹ್ವಾನ ಪತ್ರಿಕೆ ಕೂಡ ಹಂಚಲಾಗಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಹೆಚ್ಚಿನ ಜನರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆಸದೆ ಸರಳವಾಗಿ ನಡೆಸಲಾಗುವುದು.
ಮಾ.18ರಂದು ಬುಧವಾರ ವಿವಾಹದ ದೇವತಾ ಕಾರ್ಯ ಹಾಗೂ ಮಾ.19ರಂದು ಗುರುವಾರ ವಿವಾಹ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ತಿಳಿಸಿದರು. ವರನ ತಂದೆ ಅತ್ತಿಕಟ್ಟೆ ಜಗನ್ನಾಥ್ ಮಾತನಾಡಿ, ಮಾ.21ರಂದು ಚಿಕ್ಕಮಗಳೂರು ಕ್ಲಬ್ನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸರಕಾರದ ಆದೇಶದ ಹಿನ್ನೆಲೆಯಲ್ಲಿ ಆರಕ್ಷತೆಯನ್ನು ಮುಂದೂಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ