ಚುಟುಕು ಐಪಿಎಲ್‌: ಗಂಗೂಲಿ ಸುಳಿವು

ಯಾವುದೇ ನಿರ್ಧಾರಕ್ಕೆ ಬಾರದ ಬಿಸಿಸಿಐ-ಐಪಿಎಲ್‌ ಫ್ರಾಂಚೈಸಿಗಳ ಸಭೆ; ಐಪಿಎಲ್‌ ನಡೆಸಲು ವಿವಿಧ ದಾರಿಗಳು; ಯಾವುದೂ ಇತ್ಯರ್ಥವಾಗಿಲ್ಲ

Team Udayavani, Mar 15, 2020, 5:49 AM IST

ಚುಟುಕು ಐಪಿಎಲ್‌: ಗಂಗೂಲಿ ಸುಳಿವು

ಮುಂಬಯಿ: ಹದಿಮೂರನೇ ಐಪಿಎಲ್‌ ಭವಿಷ್ಯವೇನು ಎಂಬುದು ಶನಿವಾರದ ಬಿಸಿಸಿಐ ಹಾಗೂ ಫ್ರಾಂಚೈಸಿಗಳ ನಡುವಿನ ಸಭೆಯಲ್ಲಿ ಪ್ರಶ್ನೆಯಾಗಿಯೇ ಉಳಿಯಿತು. ಈ ಬಾರಿ ಐಪಿಎಲ್‌ ನಡೆಯುತ್ತದೋ ಇಲ್ಲವೋ ಎಂಬುದು ಕೂಡ ಇತ್ಯರ್ಥಗೊಳ್ಳಲಿಲ್ಲ. ಆದರೆ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತಾಡಿದ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, “ಈ ಐಪಿಎಲ್‌ ನಡೆದರೆ ಅದು ಚುಟುಕಾಗಿರುತ್ತದೆ’ ಎಂಬ ಸುಳಿವು ನೀಡಿದರು.

ಮಾ. 29ರಂದು ಆರಂಭವಾಗಬೇಕಿದ್ದ ಈ ಬಾರಿಯ ಐಪಿಎಲ್‌ ಪಂದ್ಯಾವಳಿಯನ್ನು ಬಿಸಿಸಿಐ ಎ. 15ರ ತನಕ ಅಮಾನತಿನಲ್ಲಿರಿಸಿದೆ. ಅನಂತರ ಐಪಿಎಲ್‌ ಸಭೆ ನಡೆದಿದ್ದು, ಇದರಲ್ಲಿ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಎಲ್ಲ ಫ್ರಾಂಚೈಸಿಗಳ ಮಾಲಕರು, ಐಪಿಎಲ್‌ ಹಾಗೂ ಬಿಸಿಸಿಐ ಅಧಿಕಾರಿಗಳೆಲ್ಲ ಈ ಸಭೆಯಲ್ಲಿ ಭಾಗವಹಿಸಿದ್ದರು. ಐಪಿಎಲ್‌ ಬೇಕು, ಆದರೆ ಕ್ರಿಕೆಟಿಗರ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ಮೊದಲ ಆದ್ಯತೆ ಎಂಬುದು ಎಲ್ಲರ ಅಭಿಪ್ರಾಯವಾಗಿತ್ತು.

ಮೇ 31ರ ತನಕ ವಿಸ್ತರಣೆ?
ಬಿಸಿಸಿಐ ನಿರ್ಧಾರದಂತೆ ಐಪಿಎಲ್‌ ಆರಂಭದಲ್ಲಿ 18 ದಿನ ವಿಳಂಬವಾಗಲಿದೆ. ಆದರೆ ಇದು ನಡೆಯುವ ಬಗ್ಗೆ ಯಾವುದೇ ಖಾತರಿ ಇಲ್ಲ. ಎ. 20ರ ತನಕ ಕಾದು ನೋಡಿ ಕೂಟವನ್ನು ನಡೆಸಬಹುದು. ಅನಂತರ ಪೂರ್ಣ ಪ್ರಮಾಣದಲ್ಲಿ ನಡೆಸುವುದು ಅಸಾಧ್ಯವಾಗುತ್ತದೆ. ಹೀಗಾಗಿ ಮೇ 24ರಂದು ಮುಗಿಯುವ ಕೂಟವನ್ನು ಮೇ 31ರ ತನಕ ವಿಸ್ತರಿಸುವ ಪ್ರಸ್ತಾವ ಕೂಡ ಬಿಸಿಸಿಐ ಮುಂದಿತ್ತು. ಆದರೆ ಸಭೆಯಲ್ಲಿ ಈ ಕುರಿತೂ ಖಚಿತ ನಿರ್ಧಾರಕ್ಕೆ ಬರಲಾಗಲಿಲ್ಲ.

“ನಾವು ಎಲ್ಲ ಸಂಗತಿಗಳನ್ನೂ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. 18 ದಿನಗಳ ವಿಳಂಬ ವೆಂದರೆ ಆಗ ಪಂದ್ಯಾವಳಿಯನ್ನು ಕಿರಿದು ಗೊಳಿಸಲೇ ಬೇಕಾಗುತ್ತದೆ. ಆದರೆ ಇದು ಹೇಗೆ, ಆಗ ಎಷ್ಟು ಪಂದ್ಯಗಳಿರುತ್ತವೆ… ಎಂಬುದನ್ನೆಲ್ಲ ನನಗೀಗ ಹೇಳಲು ಸಾಧ್ಯವಿಲ್ಲ’ ಎಂದು ಸೌರವ್‌ ಗಂಗೂಲಿ ತಿಳಿಸಿದರು.

“ಎಲ್ಲ ಫ್ರಾಂಚೈಸಿಗಳ ಮಾಲಕರೊಂದಿಗೆ ಮಾತುಕತೆ ನಡೆಸಿ, ಅವರ ಅಭಿಪ್ರಾಯಗಳನ್ನು ಕ್ರೋಡೀಕರಿಸಿದ ಬಳಿಕ ಸ್ಪಷ್ಟ ನಿರ್ಧಾರವೊಂದಕ್ಕೆ ಬರಲಾಗುವುದು. ಇದಕ್ಕೆ ಇನ್ನೂ ಕಾಲಾವಕಾಶವಿದೆ’ ಎಂದು ಗಂಗೂಲಿ ಹೇಳಿದರು.

ದೇಶಿ ಕ್ರಿಕೆಟ್‌ ಕೂಟಗಳಿಗೂ
ಕೊರೊನಾ ಕಂಟಕ
ಕೊರೊನಾ ಭೀತಿಯಿಂದ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯನ್ನು ರದ್ದುಗೊಳಿಸಿದ ಒಂದೇ ದಿನದಲ್ಲಿ ಪ್ರಸಕ್ತ ಋತುವಿನ ಯಾವುದೇ ದೇಶಿ ಕ್ರಿಕೆಟ್‌ ಪಂದ್ಯಾವಳಿಗಳನ್ನು ಆಡಿಸದಿರಲು ಬಿಸಿಸಿಐ ನಿರ್ಧರಿಸಿದೆ. ಇದರಲ್ಲಿ ರಣಜಿ ಚಾಂಪಿಯನ್‌ ಸೌರಾಷ್ಟ್ರ ಮತ್ತು ಶೇಷ ಭಾರತ ತಂಡಗಳ ನಡುವಿನ ಇರಾನಿ ಕಪ್‌ ಪಂದ್ಯವೂ ಸೇರಿದೆ.

ಶನಿವಾರ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ನಿರ್ಧಾರವನ್ನು ಪ್ರಕಟಿಸಿದರು. ಉಳಿದಂತೆ ವಿಜಿ ಟ್ರೋಫಿ, ವನಿತೆಯರ ಸೀನಿಯರ್‌ ಏಕದಿನ ನಾಕೌಟ್‌ ಹಾಗೂ ಏಕದಿನ ಚಾಲೆಂಜರ್‌ ಸರಣಿಗಳು ಇದರಲ್ಲಿ ಸೇರಿವೆ.

ಮುಂದಿನ ಆದೇಶದ ತನಕ ವನಿತೆಯರ ಜೂನಿಯರ್‌ ಕ್ರಿಕೆಟ್‌ ಟೂರ್ನಿಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಇದರಲ್ಲಿ ಅಂಡರ್‌-19 ಏಕದಿನ ನಾಕೌಟ್‌, ಅಂಡರ್‌-19 ಟಿ20 ಲೀಗ್‌, ಸೂಪರ್‌ ಲೀಗ್‌ ಮತ್ತು ನಾಕೌಟ್‌, ಅಂಡರ್‌-19 ಟಿ20 ಚಾಲೆಂಜರ್‌ ಟ್ರೋಫಿ, ಅಂಡರ್‌-23 ನಾಕೌಟ್‌ ಮತ್ತು ಏಕದಿನ ಚಾಲೆಂಜರ್‌ ಪಂದ್ಯಾವಳಿಗಳು ಸೇರಿವೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.