ಅಪಘಾತ ನಿಯಂತ್ರಣಕ್ಕೆ ಬೇಕಿದೆ ಇಚ್ಛಾಶಕ್ತಿ

ಯಮರೂಪಿ ರಸ್ತೆಗಳಲ್ಲಿ ನಿತ್ಯ ಓಡಾಡುವುದೇ ಕಷ್ಟಕಾಣದ ಸೂಚನಾ ಫಲಕ-ಸ್ಪೀಡ್‌ ಬ್ರೇಕರ್‌

Team Udayavani, Mar 15, 2020, 1:03 PM IST

15-March-11

ಚಿತ್ರದುರ್ಗ: ಅಪಘಾತಗಳ ನಿಯಂತ್ರಣಕ್ಕೆ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂಬುದು ಕೋಟೆ ನಾಡಿನ ಜನರ ಆಕ್ರೋಶದ ಪ್ರಶ್ನೆ.

ಇದರ ಬಗ್ಗೆ ಇರುವ ಅಸಹನೆ ಜಿಲ್ಲೆಯ ಸೋಷಿಯಲ್‌ ಮೀಡಿಯಾಗಳಲ್ಲೂ ಹೆಚ್ಚು ಸದ್ದು ಮಾಡುತ್ತಿದೆ. ಹೆಲ್ಮೆಟ್‌ ಇಲ್ಲದೆ ಅಪಘಾತವಾಗಿ ದಿನವೂ ಪ್ರಾಣ ಕಳೆದುಕೊಳ್ಳುತ್ತಿದ್ದರೂ ತಲೆ ಕೆಡಿಸಿಕೊಳ್ಳದ ಜನ ಕೊರೊನಾ ಬಗ್ಗೆ ಆತಂಕಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ಅಪಘಾತಗಳಿಂದ ಮೃತಪಟ್ಟವರು 391 ಜನ. 2018ರಲ್ಲಿ ಜಿಲ್ಲೆಯಲ್ಲಿ 1453 ಅಪಘಾತ ಸಂಭವಿಸಿ 371 ಮಂದಿ ಮೃತಪಟ್ಟು, 2439 ಜನ ಗಾಯಗೊಂಡಿದ್ದಾರೆ. 2019ರಲ್ಲಿ 1411 ಅಪಘಾತ ಸಂಭವಿಸಿ 391 ಜನ ಮೃತಪಟ್ಟಿದ್ದು, 2260 ಜನ ಗಾಯಾಳುಗಳಾಗಿದ್ದಾರೆ.

ಈ ಅಂಕಿ ಸಂಖ್ಯೆಗಳನ್ನು ಗಮನಿಸಿದಾಗ ಈ ರಸ್ತೆಯಲ್ಲಿ ಓಡಾಡಲು ಭಯವಾಗುತ್ತದೆ. ಆದರೆ, ಹೆದ್ದಾರಿಯನ್ನು ನಿರ್ವಹಣೆ ಮಾಡುವ ಅಧಿಕಾರಿಗಳು ಮಾತ್ರ ಮಾನವೀಯತೆ ಮರೆತಿದ್ದಾರೆ. ಇಷ್ಟೆಲ್ಲ ಸಾವು ನೋವಿನ ಸಂಭವಿಸಿದದಿದ್ದರೂ ಅವರಿಗೆ ಇದರ ಪರಿಣಾಮ
ತಟ್ಟಿದಂತೆ ಕಾಣಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಸಾಮಾನ್ಯವಾಗಿ ಅಪಘಾತಗಳು ಚಾಲಕರ ನಿರ್ಲಕ್ಷ್ಯ, ಬ್ರೇಕ್‌ಫೇಲ್‌, ಟೈರ್‌ ಸಿಡಿದು ವಾಹನ ಪಲ್ಟಿಯಾಗಿ ನಡೆಯುತ್ತವೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪಘಾತಗಳಿಗೆ ಕಾರಣವೇ ಅವೈಜ್ಞಾನಿಕ ರಸ್ತೆ. ಯಾರೋ ಮಾಡಿದ ತಪ್ಪಿಗೆ ದಿನವೂ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಮಾತ್ರ ವಿಪರ್ಯಾಸ.

ಇಲ್ಲಿವೆ ಯಮರೂಪಿ ಹೆದ್ದಾರಿಗಳು: ಬೆಂಗಳೂರು-ಪುಣೆ, ಮಂಗಳೂರು- ಕೊಲ್ಲಾಪುರ ಹಾಗೂ ಬೀದರ್‌- ಶ್ರೀರಂಗ ಪಟ್ಟಣ ಸಂಪರ್ಕ ಕಲ್ಪಿಸುವ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಹಾದು ಹೋಗಿವೆ. ಚಿತ್ರದುರ್ಗ ಜಿಲ್ಲೆಯವರಿಗಿಂತ ಈ ಹೆದ್ದಾರಿಗಳಲ್ಲಿ ಹಾದು ಹೋಗುವಾಗ ರಸ್ತೆಯ ಬಗ್ಗೆ ಅರಿವಿಲ್ಲದೆ ಅಪಘಾತಕ್ಕೀಡಾಗುವವರ ಸಂಖ್ಯೆಯೂ ದೊಡ್ಡದಿದೆ. ಜತೆಗೆ ಈ ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ಅನೇಕ ಗ್ರಾಮಗಳ ಜನತೆ ಕೂಡಾ ನೊಂದಿದ್ದಾರೆ.

ಐತಿಕಾಸಿಕ ಪ್ರವಾಸಿ ತಾಣವೂ ಆಗಿರುವ ಚಿತ್ರದುರ್ಗ ಜಿಲ್ಲೆಗೆ ಬರುವವರ ಸಂಖ್ಯೆಯೂ ದೊಡ್ಡದಿದೆ. ಸರಿಯಾದ ಸರ್ವೀಸ್‌ ರಸ್ತೆ ಇಲ್ಲದಿರುವುದು, ಅಗತ್ಯವಿರುವ ಕಡೆ ಅಂಡರ್‌ ಪಾಸ್‌, ಫ್ಲೈ  ಓವರ್‌, ಸ್ಕೈ ವಾಕರ್‌ ಇಲ್ಲದಿರುವುದು ಸಮಸ್ಯೆಗೆ ಮೂಲ ಕಾರಣ. ಹೆದ್ದಾರಿಗೆ ಎಲ್ಲೆಂದರಲ್ಲಿ ಜನ, ಜಾನುವಾರುಗಳು ನುಗ್ಗುವಂತಿದೆ. ಇದರಿಂದ ಏಕಾಏಕಿ ಬ್ರೇಕ್‌ ಹಾಕಿ ಅಪಘಾತ ಸಂಭವಿಸುತ್ತಿವೆ. ಹೆದ್ದಾರಿಗಳಲ್ಲಿರುವ ಅವೈಜ್ಞಾನಿಕ ರಸ್ತೆ ತಿರುವುಗಳು, ಕಾಣದ ಸೂಚನಾ ಫಲಕಗಳು ಹಾಗೂ ಸ್ಪೀಡ್‌ ಬ್ರೇಕರ್‌ ಅಳವಡಿಸದಿರುವುದು ಅಪಘಾತಕ್ಕೆ ಕಾರಣವಾಗಿದೆ.

34 ಅಪಘಾತ ವಲಯಗಳಿವೆ: ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಗಳು ನಡೆದು, ಕಟ್ಟು ನಿಟ್ಟಿನ ಎಚ್ಚರಿಕೆ ಕೊಟ್ಟರೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಆರ್‌ ಟಿಒ, ಪಿಡಬ್ಲ್ಯೂಡಿ, ಪೊಲೀಸ್‌ ಇಲಾಖೆ ಜತೆಗೂಡಿ ಹೆಚ್ಚು ಅಪಘಾತ ಸಂಭವಿಸುವ 34 ಅಪಘಾತ ವಲಯಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿ, ಇದಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದರೂ ಎಚ್ಚೆತ್ತುಕೊಳ್ಳದಿರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಕಳೆದ ತಿಂಗಳು ನಡೆದ ರಸ್ತೆ ಸುರಕ್ಷತಾ ಮೀಟಿಂಗ್‌ನಲ್ಲಿ ಒಂದು ತಿಂಗಳು ಕಾಲಾವಕಾಶ ಕೊಟ್ಟು ಅಪಘಾತ ತಡೆಯಲು ಅಗತ್ಯ ಕ್ರಮ ಜರುಗಿಸಲು ಸೂಚಿಸಲಾಗಿತ್ತು. ಈ ಬಗ್ಗೆ ಮುಂದಿನ ಮೀಟಿಂಗ್‌ನಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಆರ್‌.ವಿನೋತ್‌ ಪ್ರಿಯಾ,
ಜಿಲ್ಲಾಧಿಕಾರಿಗಳು, ಚಿತ್ರದುರ್ಗ.

ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.