ಕೊರೊನಾ ಭಯ: ನೆಗಡಿ, ಕೆಮ್ಮು, ಜ್ವರಕ್ಕೆ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ರಾಮುಲು


Team Udayavani, Mar 15, 2020, 1:50 PM IST

ಕೊರೊನಾ ಭಯ: ನೆಗಡಿ, ಕೆಮ್ಮು, ಜ್ವರಕ್ಕೆ ತಪಾಸಣೆ ಎಂದ ಆರೋಗ್ಯ ಸಚಿವ ರಾಮುಲು

ಕಲಬುರಗಿ: ಕೊರೊನಾ ಸೋಂಕಿನ ಕುರಿತ ವದಂತಿಗಳಿಗೆ ಜನತೆ ಕಿವಿಗೊಡಬಾರದು. ಒಂದು ವೇಳೆ ಯಾರು ತಪಾಸಣೆಗೆ ಒಳಗಾಗುವುದಿಲ್ಲವೋ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.‌ ನೆಗಡಿ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಲೇಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಬಂದ ತಕ್ಷಣ ಜನ ಸಾಯುವುದಿಲ್ಲ.‌ ಯಾರೂ ಹೆದರಬಾರದು. ಚಿಕಿತ್ಸೆಗೆ ಬೇಕಾದಂತಹ ಎಲ್ಲ ವ್ಯವಸ್ಥೆ ಆರೋಗ್ಯ ಇಲಾಖೆ ಮಾಡಿಕೊಂಡಿದೆ ಎಂದರು.

ಕೊರೊನಾ ಸೋಂಕಿಗೆ ಕಲಬುರಗಿಯ ವೃದ್ಧ ಸಾವನ್ನಪ್ಪಿದ ಬಳಿಕ ಆತನ ಮನೆ ಸುತ್ತ-ಮುತ್ತ ಐದು ಕೀ.ಮೀ. ಬಫರ್ ಝೋನ್ ಎಂದು ಗುರುತಿಸಲಾಗಿದೆ. ಆ ಪ್ರದೇಶದಿಂದ ಜನರನ್ನು ಹೊರಬಾರದಂತೆ ಸೂಚನೆ ನೀಡಲಾಗಿದೆ.  ಅವರ ಮನೆಗಳಿಗೆ ಆಹಾರದ ಕಿಟ್ ಸೇರಿದಂತೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದರು.

ವೈದ್ಯರಿಗೂ ಚಿಕಿತ್ಸೆ: ವೃದ್ಧನಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದೇನೆ.‌ ಜನರ ಆತಂಕ ಕಡಿಮೆ ಮಾಡಲು ಹಾಗೂ ತಕ್ಷಣವೇ ಸೋಂಕು ಪತ್ತೆಗೆ ಮೂರು ದಿನದಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಆರಂಭಿಸಲಾಗುತ್ತದೆ ಎಂದರು.

ವೃದ್ದನ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇಲ್ಲ ಎಂದು ದೃಢಪಟ್ಟಿದೆ. ‌ಇನ್ನೂ ಒಬ್ಬರ ವರದಿ ಬರಬೇಕಾಗಿದೆ.‌ ಅದು ಪಾಸಿಟಿವ್ ಬರಲಿ ಅಥವಾ ನೆಗೆಟಿವ್ ಬರಲಿ ಜಿಲ್ಲೆಯ ಜನರು ಹೆದರಬೇಕಾಗಿಲ್ಲ.‌ ವರದಿ ಯಾವುದೇ ರೀತಿಯಾಗಿ ಬಂದರು ಕೂಡ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸಿದ್ಧವಾಗಿದೆ ಎಂದರು.

ವಿವಿಧ ದೇಶಗಳಿಂದ ಕಲಬುರಗಿಗೆ 16 ಜನ ಬಂದಿದ್ದಾರೆ.‌ ಅವರಿಗೂ ಕೂಡ ಮನೆಯಲ್ಲೇ ಇಟ್ಟು ಹೋಂ ಐಸೋಲೇಟೆಡ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಇಎಸ್ಐ, ಜಿಮ್ಸ್ ಗೆ ಭೇಟಿ: ನಗರದ ಜಿಮ್ಸ್ ಹಾಗೂ ಇಎಸ್ಐ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯೊಳಗಡೆ ಹೋಗುವ ಮುನ್ನ ಸಚಿವರು ಸ್ಯಾನಿಟೈಸರ್ ಬಳಕೆ ಮಾಡಿ ಮುಖಕ್ಕೆ ಎನ್- 95 ಮಾಸ್ಕ್ ಧರಿಸಿದರು‌.‌ ಶ್ರೀರಾಮುಲು ಅವರಿಗೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಮತ್ತು  ಅವಿನಾಶ್ ಜಾಧವ್ ಸಾಥ್ ನೀಡಿದರು.

ನಂತರ ಇಎಸ್ ಐ ಆಸ್ಪತ್ರೆಗೂ ಸಚಿವ ಶ್ರಿರಾಮುಲು ಭೇಟಿ ನೀಡಿ, ಇಲ್ಲಿ ಸುರಕ್ಷತಾ ಕಿಟ್ ಧರಿಸಿ 200 ಬೆಡ್ ನ ಐಸೋಲೇಟೆಡ್ ವಾರ್ಡ್ ಪರಿಶೀಲಿಸಿದರು. ಅಲ್ಲದೇ, ಇಎಸ್ಐ ಹಾಗೂ ಜಿಮ್ಸ್ ಆಸ್ಪತ್ರೆಯ ವೈದ್ಯರ ಜೊತೆ ಸಭೆ ನಡೆಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.