ಹೇಮರಡ್ಡಿ ಮಲ್ಲಮ್ಮ ಸರ್ವರಿಗೂ ದಾರಿದೀಪ

ಪರೋಪಕಾರಿಯಾಗಿ ಜೀವನ ನಡೆಸಿತಾಯಿ ಮಕ್ಕಳಿಗೆ ಉತ್ತಮ ಸಂಸ್ಕೃತಿ ಕಲಿಸಲಿ

Team Udayavani, Mar 15, 2020, 6:52 PM IST

15-March-25

ಕಲಬುರಗಿ: ಹೇಮರಡ್ಡಿ ಮಲ್ಲಮ್ಮ ಅವರ ಇಡೀ ಜೀವನವೇ ಉತ್ತಮ ಸಂದೇಶವಾಗಿದೆ. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನು ಎದುರಿಸಿ ಮಾದರಿಯಾಗಿರುವ ಶರಣೆ ಹೇಮರಡ್ಡಿ ಮಲ್ಲಮ್ಮ ತಾಯಿಯವರು ಎಲ್ಲರಿಗೂ ದಾರಿದೀಪವಾಗಿದ್ದಾರೆ ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ತಾಲೂಕಿನ ಕುಮಸಿವಾಡಿ ಗ್ರಾಮದ ಸಿದ್ಧಬಸವೇಶ್ವರರ 24ನೇ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಹೇಮರಡ್ಡಿ ಮಲ್ಲಮ್ಮ ತಾಯಿ ಮಹಾ ಪುರಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕತೆ ಅಬ್ಬರದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗುತ್ತವೆ ಎಂದರು.

ಬಿಜೆಪಿ ಯುವ ಮುಖಂಡ ವೀರೇಶ ಬಿರಾದಾರ ಉಪಳಾಂವ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಯುವಕರು ನಾನಾ ರೀತಿಯ ದುಶ್ಚಟಗಳಿಗೆ ಮಾರು ಹೋಗಿ ತಮ್ಮ ಅಮೂಲ್ಯ ಜೀವನವನ್ನು ನಾಶಪಡಿಸಿಕೊಳ್ಳುತ್ತಿದ್ದು, ಅಂಥ ಯುವಕರಿಗೆ ತಿಳಿವಳಿಕೆ ನೀಡುವ ಮೂಲಕ ಅವರನ್ನು ಮತ್ತೆ ಸರಿದಾರಿಗೆ ಕರೆತರುವ ಅಗತ್ಯವಿದೆ. ಒಳ್ಳೆಯ ಮಾರ್ಗದಲ್ಲಿ ಮುನ್ನಡೆದರೆ ಜೀವನ ಅರ್ಥಪೂರ್ಣ ಎನಿಸಲಿದೆ. ಗಳಿಸಿದ್ದನ್ನು ಹಿತಮಿತವಾಗಿ ಬಳಸಿಕೊಂಡು ಪರೋಪಕಾರಿಯಾಗಿ ಸಂತೋಷ,
ನೆಮ್ಮದಿಯ ಜೀವನ ನಡೆಸಲು ಮುಂದಾಗಬೇಕಿದೆ ಎಂದರು.

ಮಕ್ತಂಪುರದ ಗುರುಬಸವ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಚಂಚಲ ಮನಸ್ಸಿನ ಮೇಲೆ ಹತೋಟಿ ಸಾಧಿಸಿ ಧರ್ಮ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಸಚ್ಚಾರಿತ್ರ್ಯದ ಜೀವನ ಸಾಗಿಸುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕಿದೆ. ತಾಯಿಯಾದವಳು ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ನೀಡುವಲ್ಲಿ ಕಾಳಜಿ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಹೆಚ್ಚಾಗಿ ವಾಲುತ್ತಿರುವುದು ದೇಶದ ಸಂಸ್ಕೃತಿ ನಾಶವಾಗಲು ಕಾರಣವಾಗುತ್ತಿದೆ ಎಂದು ಹೇಳಿದರು.

ಕುಮಸಿವಾಡಿ ಸಿದ್ಧಶರಣಗಿರಿ ವಿರಕ್ತ ಮಠದ ಬಾಲ ಶಿವಯೋಗಿ ಚನ್ನವೀರ ಸ್ವಾಮೀಜಿ ಸಮಾರಂಭದ ನೇತೃತ್ವ ವಹಿಸಿದ್ದರು. ಸಂತೋಷ ಪಾಟೀಲ ಹರಸೂರ, ಶಫೀಕ್‌ ಪಾಶುಮಿಯಾ, ಮಹಾದೇವ ಬಡಾ, ಹಣಮಂತರಾಯ ಅಟ್ಟೂರ, ಮಲ್ಲಿನಾಥ ಎ. ರಾಜೇಶ್ವರ ಕುಮಸಿ, ಪ್ರವಚನಕಾರ ಶಿವಕುಮಾರ ಶಾಸ್ತ್ರಿಗಳು ಹಿರೇಮಠ ಧುತ್ತರಗಾಂವ, ಸಂಗೀತ ಕಲಾವಿದರಾದ ಸಿದ್ಧರಾಮ ಯಡ್ರಾಮಿ ನೆಲೋಗಿ, ರವಿಕುಮಾರ ವಿಭೂತಿ ಮೊರಟಗಿ, ರಾಜು ಹೆಬ್ಟಾಳ, ಮಹೇಶ ತೆಲಾಕುಣಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.